AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು

ಜೂನಿಯರ್ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾ ಶೂಟಿಂಗ್ ನಿಂತಿದೆ ಎಂಬ ಸುದ್ದಿ ಇತ್ತೀಚೆಗೆ ಹಬ್ಬಿತ್ತು. ಆ ಬಗ್ಗೆ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು
Prashanth Neel, Jr Ntr
ಮದನ್​ ಕುಮಾರ್​
|

Updated on: Apr 08, 2026 | 4:06 PM

Share

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಟಾಲಿವುಡ್​ನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಚಿತ್ರವು ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆಯು ಅಧಿಕೃತವಾಗಿ ನಿರಾಕರಿಸಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಡ್ರ್ಯಾಗನ್’ (Dragon) ಅಥವಾ #NTRNeel ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣವು ನಿಂತಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದವು.

ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಅವರು ವಿವಿಧ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಇತ್ತೀಚಿನ ಫೋಟೋಶೂಟ್‌ನಲ್ಲಿ ಅವರ ಲುಕ್ ಬಗ್ಗೆ ಪ್ರಶಾಂತ್ ನೀಲ್ ಮತ್ತು ಎನ್‌ಟಿಆರ್ ಅತೃಪ್ತಿ ಹೊಂದಿದ್ದಾರೆ. ಈ ಕಾರಣದಿಂದ ಸರಿಯಾದ ಲುಕ್ ಸಿಗುವವರೆಗೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಕುರಿತು ಎಕ್ಸ್ (ಟ್ವಿಟ್ಟರ್) ಮೂಲಕ ಸ್ಪಷ್ಟನೆ ನೀಡಿರುವ ನಿರ್ಮಾಣ ಸಂಸ್ಥೆಯು, ಸಿನಿಮಾದ ಕೆಲಸಗಳು ಯೋಜಿತವಾಗಿಯೇ ಸಾಗುತ್ತಿವೆ ಎಂದು ಸ್ಪಷ್ಟಪಡಿಸಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಟನ ಲುಕ್ ಅಥವಾ ಚಿತ್ರೀಕರಣ ಸ್ಥಗಿತದ ಬಗ್ಗೆ ಹರಡುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸಿನಿಮಾವು ಈ ಮೊದಲಿನ ಪ್ಲಾನ್ ಪ್ರಕಾರವೇ ಸಾಗುತ್ತಿದೆ. ಇದು ಕೇವಲ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಿ ಮಾಡುವ ಸಲುವಾಗಿ ನೀಡಿದ ವಿರಾಮ ಅಷ್ಟೇ. ದಯವಿಟ್ಟು ಯಾರೂ ಅಧಿಕೃತವಲ್ಲದ ಮಾಹಿತಿಯನ್ನು ನಂಬಬೇಡಿ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ತಿಳಿಸಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಸಲಾರ್’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಜೊತೆ ಕೈಜೋಡಿಸಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ಅತ್ಯಂತ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ