AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್ ಚಿತ್ರಕ್ಕಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್

ಹೊಸ ಹಾರರ್ ಸಿನಿಮಾದ ಟೈಟಲ್ ಅನಾವರಣ ಮಾಡಲಾಗಿದೆ. ಈ ಸಿನಿಮಾಗೆ ‘418’ ಎಂದು ಹೆಸರಿಡಲಾಗಿದೆ. ಪ್ರಶಾಂತ್ ನೀಲ್ ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾದ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಕೀರ್ತನ್ ನಾಡಗೌಡ ಅವರು ಈ ಸಿನಿಮಾಗೆ ನಿರ್​ದೇಶನ ಮಾಡಲಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಹಾರರ್ ಚಿತ್ರಕ್ಕಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್
418 MovieImage Credit source: Mythri Movie Makers
ಮದನ್​ ಕುಮಾರ್​
|

Updated on: Apr 19, 2026 | 8:14 AM

Share

ಟಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ (Mythri Movie Makers) ದೊಡ್ಡ ಮಟ್ಟದ ಕಮರ್ಷಿಯಲ್ ಚಿತ್ರಗಳಿಗೆ ಹೆಸರಾಗಿದೆ. ಇದೀಗ ಇದೇ ಮೊದಲ ಬಾರಿಗೆ ಈ ಸಂಸ್ಥೆ ಹಾರರ್ ಜಗತ್ತಿಗೆ ಕಾಲಿಟ್ಟಿದೆ. ಹೊಸ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದೆ. ಈ ಚಿತ್ರಕ್ಕೆ ‘418’ ಎಂದು ಹೆಸರಿಡಲಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ಪ್ರಶಾಂತ್ ನೀಲ್ ಅವರ ಗರಡಿಯಲ್ಲಿ ಪಳಗಿದ ಕೀರ್ತನ್ ನಾಡಗೌಡ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಹಾರರ್ ಸಿನಿಮಾಗಳು ಅಂದ್ರೆ ಅಲ್ಲಿ ಕಾಮಿಡಿ ಕೂಡ ಬೆರೆತಿರುತ್ತಿತ್ತು. ಆದರೆ ‘418’ ಸಿನಿಮಾ ಈ ಸಂಪ್ರದಾಯವನ್ನು ಮುರಿಯಲು ಹೊರಟಿದೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ, ‘ಹಾರರ್ ಸಿನಿಮಾಗಳಲ್ಲಿ ನಗಿಸಿದ್ದು ಸಾಕು, ಈಗ ಹೆದರುವ ಸಮಯ’ ಎಂಬ ಪಂಚ್ ಲೈನ್ ನೀಡುವ ಮೂಲಕ ಇದೊಂದು ಕಂಪ್ಲೀಟ್ ಭಯಾನಕ ಚಿತ್ರ ಎಂದು ಸಾಬೀತುಪಡಿಸಿದೆ.

ನಿರ್ದೇಶಕ ಕೀರ್ತನ್ ಅವರು ‘ಕೆಜಿಎಫ್’ ಫ್ರಾಂಚೈಸಿ ಮತ್ತು ‘ಸಲಾರ್’ ಚಿತ್ರಗಳಲ್ಲಿ ಸೆಕೆಂಡ್ ಯೂನಿಟ್ ಡೈರೆಕ್ಟರ್ ಹಾಗೂ ಸಹಾಯಕ ನಿರ್ದೇಶಕರಾಗಿ ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2025ರ ನವೆಂಬರ್‌ನಲ್ಲಿ ‘418’ ಚಿತ್ರದ ಮುಹೂರ್ತ ನೆರವೇರಿತ್ತು. ಇದೊಂದು ‘ಭಯಾನಕ ಪ್ರಯಾಣ’ ಎಂದು ಕೀರ್ತನ್ ಅವರು ಬಣ್ಣಿಸಿದ್ದಾರೆ.

‘ಕೆಜಿಎಫ್’ ಯಶಸ್ಸಿನ ನಂತರ ಪ್ರಭಾಸ್ ಜೊತೆ ‘ಸಲಾರ್’ ಸಿನಿಮಾ ಮಾಡಿದ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದರು. ಈಗ ಅವರು ‘418’ ಸಿನಿಮಾವನ್ನು ಪ್ರಸೆಂಟ್ ಮಾಡುವ ಸಲುವಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ್ದಾರೆ. ಪ್ರಶಾಂತ್ ನೀಲ್ ಅವರ ಬ್ರ್ಯಾಂಡ್ ಮೌಲ್ಯ ಈ ಚಿತ್ರಕ್ಕೆ ದೊಡ್ಡ ಬಲ ತಂದುಕೊಟ್ಟಿದೆ.

ಇದನ್ನೂ ಓದಿ: ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ನಿಲ್ಲಿಸಿದ ಪ್ರಶಾಂತ್ ನೀಲ್, ಜೂ. ಎನ್​ಟಿಆರ್; ಕಾರಣ ಏನು?

ಈ ಹಾರರ್ ಥ್ರಿಲ್ಲರ್ ಚಿತ್ರದಲ್ಲಿ ಸೂರ್ಯ ರಾಜ್, ಚರಣ್ ಲಕ್ಕರಾಜು ಮತ್ತು ಪ್ರೀತಿ ಪಗಡಾಲ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸದ್ದು ಮಾಡುವ ನಿರೀಕ್ಷೆಯಿದೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು