AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿಯಿಂದ ಕಂಗೆಡದ ಮೈತ್ರಿ; ಒಂದೇ ದಿನ ಎರಡು ಸಿನಿಮಾಗಳು ರಿಲೀಸ್

ಐಟಿ ಇಲಾಖೆಯ ದಾಳಿಯ ನಂತರ ಮೈತ್ರಿ ಮೂವೀ ಮೇಕರ್ಸ್ ಏಪ್ರಿಲ್ 10 ರಂದು ಎರಡು ದೊಡ್ಡ ಬಜೆಟ್ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ. ‘ಗುಡ್ ಬ್ಯಾಡ್ ಆ್ಯಂಡ್ ಅಗ್ಲಿ’ ಮತ್ತು ‘ಜಾಟ್’ ಚಿತ್ರಗಳು ಬಿಡುಗಡೆಯಾಗಲಿವೆ. ಮೈತ್ರಿಯ ಈ ಧೈರ್ಯ ಮತ್ತು ಯಶಸ್ಸಿನ ಹಿಂದಿನ ಕಾರಣಗಳನ್ನು ಲೇಖನ ವಿವರಿಸುತ್ತದೆ.

ಐಟಿ ದಾಳಿಯಿಂದ ಕಂಗೆಡದ ಮೈತ್ರಿ; ಒಂದೇ ದಿನ ಎರಡು ಸಿನಿಮಾಗಳು ರಿಲೀಸ್
ಅಜಿತ್-ಸನ್ನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 30, 2025 | 7:56 AM

Share

‘ಮೈತ್ರಿ ಮೂವೀ ಮೇಕರ್ಸ್’ ಮೇಲೆ ಇತ್ತೀಚೆಗೆ ಐಟಿ ಇಲಾಖೆಯಿಂದ ದಾಳಿ ಆಗಿದೆ. ಈ ದಾಳಿ ವೇಳೆ ಅಧಿಕಾರಿಗಳು ಕೆಲ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಿಶೇಷ ಎಂದರೆ ಈ ದಾಳಿಯಿಂದ ಮೈತ್ರಿ ಮೂವೀ ಮೇಕರ್ಸ್ ಕಂಗೆಟ್ಟಿಲ್ಲ. ಬದಲಿಗೆ ಮತ್ತಷ್ಟು ಸ್ಟ್ರಾಂಗ್ ಆಗಿ ಕಂಬ್ಯಾಕ್ ಮಾಡಿದೆ. ಈ ನಿರ್ಮಾಣ ಸಂಸ್ಥೆ ಒಂದೇ ದಿನ ಎರಡು ಚಿತ್ರಗಳನ್ನು ರಿಲೀಸ್ ಮಾಡುವ ಸಾಹಸಕ್ಕೆ ಮುಂದಾಗಿದೆ. ಇದು ಎಲ್ಲರಿಗೂ ಅಚ್ಚರಿ ತಂದಿದೆ.

2024ರಲ್ಲಿ ‘ಪುಷ್ಪ 2’ ಚಿತ್ರವನ್ನು ಮೈತ್ರಿ ಸಂಸ್ಥೆ ರಿಲೀಸ್ ಮಾಡಿತ್ತು. ಈ ಚಿತ್ರ 1900 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಚಿತ್ರದಿಂದ ಸಂಸ್ಥೆ ದೊಡ್ಡ ಲಾಭ ಕಂಡಿದೆ. ಹೀಗಾಗಿ, ಬೇಸಿಗೆ ಸಂದರ್ಭದಲ್ಲಿ ಎರಡು ಚಿತ್ರಗಳನ್ನು ರಿಲೀಸ್ ಮಾಡುತ್ತಿದೆ. ಈ ಮೂಲಕ 2025ನ್ನು ಆರಂಭಿಸುತ್ತಿದೆ.

ಏಪ್ರಿಲ್ 10ರಂದು ಅಜಿತ್ ನಟನೆಯ ‘ಗುಡ್ ಬ್ಯಾಡ್ ಆ್ಯಂಡ್ ಅಗ್ಲಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅಧಿಕ್ ರವಿಚಂದ್ರನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೈತ್ರಿ ಹಾಗೂ ಟಿ ಸೀರಿಸ್ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಈ ಚಿತ್ರದ ಬಜೆಟ್ 250 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಇದೇ ದಿನ ‘ಜಾಟ್’ ಹೆಸರಿನ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಗೋಪಿಚಂದ್ ಮಲಿನಿನೇನಿ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಬಳಿಕ ಬಾಲಿವುಡ್ ಸೇರಿದ್ದಾರೆ. ‘ಜಾಟ್’ ಹೆಸರಿನ ಸಿನಿಮಾನ ಅವರು ನಿರ್ದೇಶನ ಮಾಡಿದ್ದಾರೆ. ಸನ್ನಿ ಡಿಯೋಲ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಹಿಂದಿ ಜೊತೆಗೆ ತೆಲುಗು ಹಾಗೂ ತಮಿಳಿನಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಮೈತ್ರಿ ಅವರೇ ನಿರ್ದೇಶನ ಮಾಡಿದ್ದಾರೆ. ಎರಡೂ ದೊಡ್ಡ ಬಜೆಟ್ ಸಿನಿಮಾಗಳು. ಎರಡೂ ಬಿಗ್ ಬಜೆಟ್​ನಲ್ಲಿ ಸಿದ್ಧವಾಗಿರೋ ಸಿನಿಮಾಗಳು ಹೀಗಾಗಿ, ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾ ಟೈಟಲ್? ಏನಿದು ಸುದ್ದಿ 

ಈ ಮೊದಲು ಕೂಡ ಮೈತ್ರಿ ಈ ರೀತಿಯ ಸಾಹಸ ಮಾಡಿತ್ತು. ‘ವೀರ ಸಿಂಹ ರೆಡ್ಡಿ’ ಹಾಗೂ ‘ವಾಲ್ಟೇರ್ ವೀರಯ್ಯ’ ಚಿತ್ರವನ್ನು 2023ರ ಸಂಕ್ರಾಂತಿಗೆ ಒಟ್ಟಿಗೆ ರಿಲೀಸ್ ಮಾಡಿತ್ತು. ಈ ವರ್ಷ ದಿಲ್ ರಾಜು ಅವರು ‘ಸಂಕ್ರಾಂತಿಕಿ ವಸ್ತುನ್ನಾಮ್’ ಹಾಗೂ ‘ಗೇಮ್ ಚೇಂಜರ್​’ ಚಿತ್ರವನ್ನು ಒಟ್ಟಿಗೆ ತೆರೆಗೆ ತಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:27 am, Sat, 25 January 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್