AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ಮದುವೆ ಆದ್ರೂ ನಾವು ಗಂಡ-ಹೆಂಡತಿ ಅಲ್ಲ ಎಂದ ನಾಗಿಣಿ ನಟ-ನಟಿ! ಏನಿದರ ಅಸಲಿ ಕಥೆ?

‘ನಾಗಿಣಿ 2’ ಧಾರಾವಾಹಿಯ ನಮೃತಾ ಗೌಡ ಮತ್ತು ನಿನಾದ್​ಗೆ ಅನೇಕರು ಸೋಶಿಯಲ್​ ಮೀಡಿಯಾ ಮೂಲಕ ಮದುವೆಯ ಶುಭಾಶಯ ತಿಳಿಸುತ್ತಿದ್ದಾರೆ. ಇದರಿಂದ ಇವರಿಬ್ಬರು ಪೇಚಿಗೆ ಸಿಲುಕುವಂತಾಗಿದೆ.

Namratha Gowda: ಮದುವೆ ಆದ್ರೂ ನಾವು ಗಂಡ-ಹೆಂಡತಿ ಅಲ್ಲ ಎಂದ ನಾಗಿಣಿ ನಟ-ನಟಿ! ಏನಿದರ ಅಸಲಿ ಕಥೆ?
ನಾಗಿಣಿ 2 ಧಾರಾವಾಹಿಯ ನಿನಾದ್​ - ನಮ್ರತಾ ಗೌಡ
ಮದನ್​ ಕುಮಾರ್​
| Edited By: |

Updated on:Oct 12, 2021 | 12:34 PM

Share

ಕಿರುತೆರೆ ನಟ-ನಟಿಯರ ಬಗ್ಗೆ ವೀಕ್ಷಕರು ಅಪಾರ ಅಭಿಮಾನ ಇಟ್ಟುಕೊಂಡಿರುತ್ತಾರೆ. ಸೀರಿಯಲ್​ ಕಲಾವಿದರ ಖಾಸಗಿ ಬದುಕಿನ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ಆಸಕ್ತಿ. ಸೆಲೆಬ್ರಿಟಿಗಳ ಮದುವೆ ಬಗ್ಗೆ ಜನರಿಗೆ ಎಲ್ಲಿಲ್ಲದ ಕೌತುಕ ಇದ್ದೇ ಇರುತ್ತದೆ. ಹಾಗಾಗಿ ನಟ-ನಟಿಯರ ನಡುವಿನ ಲವ್​ ಸ್ಟೋರಿ ಮತ್ತು ಮದುವೆ ಸುದ್ದಿಗಳು ಬಹುಬೇಗ ವೈರಲ್​ ಆಗುತ್ತವೆ. ಅದೇ ಕಾರಣಕ್ಕಾಗಿ ‘ನಾಗಿಣಿ 2’ ಧಾರಾವಾಹಿ ಕಲಾವಿದರಾದ ನಿನಾದ್​ ಮತ್ತು ನಮ್ರತಾ ಗೌಡ (Namratha Gowda) ಮದುವೆ ವಿಷಯ ಎಲ್ಲೆಲ್ಲೂ ಹರಡಿದೆ. ಆದರೆ ಈ ಬಗ್ಗೆ ಇವರಿಬ್ಬರು ಬೇಸರ ಮಾಡಿಕೊಂಡಿದ್ದಾರೆ.

ನಾಗಿಣಿ 2 ಧಾರಾವಾಹಿಯಲ್ಲಿ ಶಿವಾನಿ ಪಾತ್ರಕ್ಕೆ ನಮ್ರತಾ ಗೌಡ (Namratha Gowda) ಬಣ್ಣ ಹಚ್ಚಿದ್ದಾರೆ. ತ್ರಿಶೂಲ್​ ಪಾತ್ರದಲ್ಲಿ ನಿನಾದ್​ ಅಭಿನಯಿಸುತ್ತಿದ್ದಾರೆ. ಸೀರಿಯಲ್​ ಕಥೆಯಲ್ಲಿ ಇವರಿಬ್ಬರಿಗೂ ಮದುವೆ ನಡೆದಿದೆ. ಹಾಗಂತ ಈ ಮದುವೆ ದೃಶ್ಯಗಳನ್ನು ಯಾವುದೋ ಸ್ಟುಡಿಯೋನಲ್ಲಿ ಚಿತ್ರೀಕರಿಸಿಲ್ಲ. ನಿಜವಾದ ಮದುವೆ ಮತ್ತು ಆರತಕ್ಷತೆ ರೀತಿಯಲ್ಲಿ ಮಂಡ್ಯದ ಒಂದು ಛತ್ರದಲ್ಲಿ ಮಾಡಲಾಗಿದೆ. ಅದಕ್ಕೆ ಅಭಿಮಾನಿಗಳನ್ನೂ ಆಹ್ವಾನಿಸಿ, ಊಟ ಹಾಕಿಸಲಾಗಿದೆ. ಆದರೆ ಈ ಸೀರಿಯಲ್​ ಮದುವೆಯನ್ನೇ ನಿಜವಾದ ಮದುವೆ ಎಂದು ಅನೇಕರು ಭಾವಿಸಿದ್ದಾರೆ!

ಹೌದು, ಶಿವಾನಿ ಮತ್ತು ತ್ರಿಶೂಲ್​ ಮದುವೆಗೆ ಆಗಮಿಸಿದ ಜನರು ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ಮಾಡಿಕೊಳ್ಳುತ್ತಿದ್ದಾರೆ. ಅದನ್ನು ನೋಡಿದ ಎಲ್ಲರೂ ನಮೃತಾ (Namratha Gowda) ಮತ್ತು ನಿನಾದ್​ ನಿಜವಾಗಿಯೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದುಕೊಂಡಿದ್ದಾರೆ. ಹಾಗಾಗಿ, ಈ ನಟ-ನಟಿಗೆ ಅನೇಕರು ಸೋಶಿಯಲ್​ ಮೀಡಿಯಾ ಮೂಲಕ ಮದುವೆಯ ಶುಭಾಶಯ ಕೋರುತ್ತಿದ್ದಾರೆ. ಇದರಿಂದ ನಮೃತಾ ಮತ್ತು ನಿನಾದ್​ ಪೇಚಿಗೆ ಸಿಲುಕುವಂತಾಗಿದೆ.

ಹರಡಿರುವ ತಪ್ಪು ಮಾಹಿತಿಯನ್ನು ತೊಡೆದುಹಾಕುವ ಸಲುವಾಗಿ ಈ ಕಲಾವಿದರಿಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ‘ಇದು ಜೀ ಕನ್ನಡ ವಾಹಿನಿಯಿಂದ ನಡೆದ ಒಂದು ಪ್ರಮೋಷನಲ್​ ಇವೆಂಟ್​. ಅದರಲ್ಲಿ ನಮ್ಮ ಇಡೀ ನಾಗಿಣಿ ಸೀರಿಯಲ್​ ತಂಡ ಪಾಲ್ಗೊಂಡಿತ್ತು. ನಾಗಿಣಿ 2 ಧಾರಾವಾಹಿಯಲ್ಲಿ ಶಿವಾನಿ ಮತ್ತು ತ್ರಿಶೂಲ್ ಮದುವೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ವದಂತಿ ಹರಡಿದೆ. ನಮ್ಮಿಬ್ಬರದ್ದು ನಿಜವಾಗಿ ಮದುವೆ ಆಗಿದೆ ಎಂಬ ಗಾಸಿಪ್​ ಹಬ್ಬಿದೆ. ದೇವರಾಣೆ ನಾವು ಮದುವೆ ಆಗಿಲ್ಲ’ ಎಂದು ಈ ಜೋಡಿ ಹೇಳಿದೆ.

‘ಇದು ಪಾತ್ರಗಳ ಒಂದು ರಿಸೆಪ್ಷನ್​ ಅಷ್ಟೇ. ತ್ರಿಶೂಲ್​ ಮತ್ತು ಶಿವಾನಿ ರಿಸೆಪ್ಷನ್​ ಹೊರತು, ನಿನಾದ್​-ನಮ್ರತಾ ರಿಸೆಪ್ಷನ್ ಅಲ್ಲ. ದಯವಿಟ್ಟು ವದಂತಿ ಹಬ್ಬಿಸಬೇಡಿ. ಎಲ್ಲರೂ ನಮಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಶುಭಹಾರೈಕೆಗಳನ್ನು ಸ್ವೀಕರಿಸಲು ನಮಗೆ ಸಾಧ್ಯವಾಗುತ್ತಿದೆ’ ಎಂದು ನಿನಾದ್​ ಮತ್ತು ನಮ್ರತಾ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?

Published On - 10:25 am, Wed, 7 April 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!