‘ನಾಗಿಣಿ 2’ ತ್ರಿಶೂಲ್ ಹಾಗೂ ಶಿವಾನಿ ಅದ್ದೂರಿ ಆರತಕ್ಷತೆ; ಅಭಿಮಾನಿಗಳಿಗೆ ಹಬ್ಬದೂಟ

Naagini 2 Kannada Serial : ದಾವಣಗೆರೆಯಲ್ಲಿ ಒಂದು ಮದುವೆ ಛತ್ರದಲ್ಲಿ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಇಡೀ ‘ನಾಗಿಣಿ 2’ ತಂಡ ಅಲ್ಲಿ ಹಾಜರಾಗಿತ್ತು. ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಿತು.

‘ನಾಗಿಣಿ 2’ ತ್ರಿಶೂಲ್ ಹಾಗೂ ಶಿವಾನಿ ಅದ್ದೂರಿ ಆರತಕ್ಷತೆ; ಅಭಿಮಾನಿಗಳಿಗೆ ಹಬ್ಬದೂಟ
ನಾಗಿಣಿ-2 ಧಾರಾವಾಹಿಯ ತ್ರಿಶೂಲ್ ಹಾಗೂ ಶಿವಾನಿಗೆ ದಾವಣಗೆರೆಯಲ್ಲಿ ಮದುವೆ ಆರತಕ್ಷತೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 22, 2021 | 4:11 PM

ಕನ್ನಡ ಕಿರುತೆರೆ ಲೋಕ ಈಗ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತ ಜನರನ್ನು ಆಕರ್ಷಿಸಲಾಗುತ್ತಿದೆ. ಸಿನಿಮಾಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತಿದೆ. ಕನ್ನಡದ ಜನಪ್ರಿಯ ಮನರಂಜನಾ ವಾಹಿನಿ ಜೀ ಕನ್ನಡ ಕೂಡ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದೆ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಾಗಿಣಿ 2’ ಧಾರಾವಾಹಿ ತಂಡ ಅದ್ದೂರಿಯಾಗಿ ಒಂದು ಮದುವೆ ಆರತಕ್ಷತೆ ಕಾರ್ಯಕ್ರಮ ಮಾಡಿದೆ.

‘ನಾಗಿಣಿ 2’ ಧಾರಾವಾಹಿ ಪಾತ್ರಗಳಾದ ತ್ರಿಶೂಲ್​ ಮತ್ತು ಶಿವಾನಿಗೆ ಮದುವೆ ಆಗಿದೆ. ಜನರ ಸಮ್ಮುಖದಲ್ಲಿಯೇ ಈ ಮದುವೆಯ ಚಿತ್ರೀಕರಣ ಮಾಡಲಾಗಿದೆ. ದಾವಣಗೆರೆಯಲ್ಲಿ ನೂರಾರು ಅಭಿಮಾನಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಈ ಮೊದಲು ಮೈಸೂರಿನಲ್ಲಿ ಇದೇ ರೀತಿ ಆರತಕ್ಷತೆ ಕಾರ್ಯಕ್ರಮವನ್ನು ನೆರವೇರಿಸಲಾಗಿತ್ತು.

ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ಈ ರೀತಿ ಪ್ರಯೋಗ ಮಾಡಿರುವುದು ಇದೇ ಮೊದಲು ಎಂದು ವಾಹಿನಿ ಹೇಳಿಕೊಂಡಿದೆ. ದಾವಣಗೆರೆಯ ಜನರು ಇದರಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು. ತ್ರಿಶೂಲ್ ಮತ್ತು ಶಿವಾನಿ ಅವರೊಂದಿಗೆ ಸೆಲ್ಫೀಗಳನ್ನು ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. ಈ ಸಮಾರಂಭದಲ್ಲಿ ಭಾಗವಹಿಸಬೇಕು ಎಂಬ ಆಸೆ ಅನೇಕರಿತ್ತು. ಸ್ಪರ್ಧೆಯೊಂದನ್ನು ಆಯೋಜಿಸಿ, ಅದರಲ್ಲಿ ಗೆದ್ದವರಿಗೆ ಆರತಕ್ಷತೆಯ ಆಹ್ವಾನ ನೀಡಲಾಯಿತು.

ದಾವಣಗೆರೆಯಲ್ಲಿ ಒಂದು ಮದುವೆ ಛತ್ರದಲ್ಲಿ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಇಡೀ ನಾಗಿಣಿ ತಂಡ ಅಲ್ಲಿ ಹಾಜರಾಗಿತ್ತು. ಈ ಸಂದರ್ಭದಲ್ಲಿ ಪ್ರೇಕ್ಷಕರು ಮತ್ತು ಕಲಾವಿದರ ಜೊತೆಗೆ ಸಂವಾದ ಕಾರ್ಯಕ್ರಮವನ್ನೂ ನಡೆಸಲಾಯಿತು. ಬೆಣ್ಣೆದೋಸೆ ನಗರಿಯ ಜನರು ಇದು ತಮ್ಮದೇ ಮನೆಯ ಸಮಾರಂಭ ಎಂಬಂತೆ ಖುಷಿಯಿಂದ ಇದರಲ್ಲಿ ಭಾಗವಹಿಸಿದರು. ಶ್ಯಾವಿಗೆ ಪಾಯಸದ ರುಚಿಕರವಾದ ಭೋಜನ ಸವಿದು ಎಲ್ಲರೂ ಸಂಭ್ರಮಿಸಿದರು.

ಧಾರಾವಾಹಿಯಲ್ಲಿ ಶಿವಾನಿ ಪಾತ್ರಕ್ಕೆ ನಮ್ರತಾ ಗೌಡ ಹಾಗೂ ತ್ರಿಶೂಲ್​ ಪಾತ್ರಕ್ಕೆ ನಿನಾದ್​ ಬಣ್ಣ ಹಚ್ಚಿದ್ದಾರೆ. ಕಳೆದ ಬಾರಿ ಮೈಸೂರಿನಲ್ಲಿ ಇದೇ ರೀತಿಯ ಕಾರ್ಯಕ್ರಮ ಮಾಡಿದಾಗ ಆ ಫೋಟೋಗಳು ವೈರಲ್​ ಆಗಿದ್ದವು. ಅದನ್ನು ನೋಡಿದ ಜನರು ಇದು ನಿಜವಾದ ಮದುವೆ ಎಂದೇ ಭಾವಿಸಿದ್ದರು. ನಮ್ರತಾ ಮತ್ತು ನಿನಾದ್​ಗೆ ಎಲ್ಲರೂ ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ಹೇಳಲು ಆರಂಭಿಸಿದ್ದರು. ನಂತರ ಒಂದು ವಿಡಿಯೋ ಮಾಡಿ ನಮ್ರತಾ ಮತ್ತು ನಿನಾದ್​ ಪ್ರತಿಕ್ರಿಯೆ ನೀಡಿದ್ದರು. ಇದು ಸೀರಿಯಲ್ ಮದುವೆಯೇ ಹೊರತು ನಿಜವಾದ ಮದುವೆ ಅಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Naagini 2: ಮದುವೆ ಆದ್ರೂ ನಾವು ಗಂಡ-ಹೆಂಡತಿ ಅಲ್ಲ ಎಂದ ನಾಗಿಣಿ ನಟ-ನಟಿ! ಏನಿದರ ಅಸಲಿ ಕಥೆ?

ಸೀರಿಯಲ್​ ನೋಡಿ ದೇವ್ರೇ ಕಾಪಾಡಪ್ಪ ಎಂದ ಅನಿತಾ ಭಟ್​! ಅಂಥದ್ದೇನಿದೆ ಈ ದೃಶ್ಯದಲ್ಲಿ?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ