AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ

Naatu Naatu Song | Oscar Awards: ‘ನನ್ನ ಪಾಲಿಗೆ ಇದು ಎರಡನೇ ಆಸ್ಕರ್​ ಪ್ರಶಸ್ತಿ’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ
ಎಂಎಂ ಕೀರವಾಣಿ
ಮದನ್​ ಕುಮಾರ್​
|

Updated on:Mar 26, 2023 | 2:30 PM

Share

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರು ಈಗ ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ಅವರು ಸಂಗೀತ ಸಂಯೋಜಿಸಿದ ‘ನಾಟು ನಾಟು..’ ಹಾಡು (Naatu Naatu Song) ಸೂಪರ್​ ಹಿಟ್​ ಆಗಿದ್ದೂ ಅಲ್ಲದೇ ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಪಡೆದು ಬೀಗಿದೆ. ಆ ಮೂಲಕ ಭಾರತಕ್ಕೆ ಮೊದಲ ಆಸ್ಕರ್​ ಪ್ರಶಸ್ತಿ (Oscar Award) ತಂದುಕೊಡುವಲ್ಲಿ ಈ ಸಾಂಗ್​ ಯಶಸ್ವಿ ಆಗಿದೆ. ಇಂಥ ಸಾಧನೆ ಮಾಡಿದ್ದಕ್ಕಾಗಿ ಕೀರವಾಣಿ ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಎಲ್ಲ ಕಡೆಗಳಿಂದ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ. ಅಚ್ಚರಿ ಏನೆಂದರೆ, ಎಂಎಂ ಕೀರವಾಣಿ ಅವರಿಗೆ ಆಸ್ಕರ್​ ಸಿಕ್ಕಿರುವುದು ಇದೇ ಮೊದಲೇನೂ ಅಲ್ಲವಂತೆ. ‘ನನ್ನ ಪಾಲಿಗೆ ಇದು ಎರಡನೇ ಆಸ್ಕರ್​ ಪ್ರಶಸ್ತಿ’ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಅಕಾಡೆಮಿ ಅವಾರ್ಡ್​ ಗೆದ್ದು ಬಂದಿರುವ ಎಂಎಂ ಕೀರವಾಣಿ ಅವರು ಕೆಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು 30 ವರ್ಷಗಳ ಹಿಂದಿನ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ಗಲಾಟಾ ಪ್ಲಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಈ ವೇಳೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾಗೆ ಕೀರವಾಣಿ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ
Image
Ram Charan: ‘ನಮ್ಮನ್ನು ಆಸ್ಕರ್​ ವೇದಿಕೆಗೆ ಕರೆಯಲಿಲ್ಲ, ಆ ಬಗ್ಗೆ ಈಗ ಮಾತು ಬೇಡ’: ರಾಮ್​ ಚರಣ್​
Image
MM Keeravani: ಆಸ್ಕರ್ ಗೆದ್ದ ಖುಷಿಯಲ್ಲಿ ರಾಜಮೌಳಿ, ಕೀರವಾಣಿ ಮಾಡಿದ್ದೇನು ನೋಡಿ
Image
MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ
Image
MM Keeravani: ಕನ್ನಡ ಚಿತ್ರರಂಗಕ್ಕೂ ಇದೆ ಎಂಎಂ ಕೀರವಾಣಿ ಕೊಡುಗೆ; ಆಸ್ಕರ್​ ಗೆದ್ದ ಸಂಗೀತ ನಿರ್ದೇಶಕನಿಗೆ ಕರುನಾಡ ನಂಟು

MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ

‘ರಾಮ್​ ಗೋಪಾಲ್​ ವರ್ಮಾ ಅವರೇ ನನ್ನ ಪಾಲಿನ ಮೊದಲ ಆಸ್ಕರ್​. 2023ರಲ್ಲಿ ಪಡೆದಿರುವುದು ನನ್ನ ಎರಡನೇ ಆಸ್ಕರ್​ ಪ್ರಶಸ್ತಿ. ಯಾಕೆಂದರೆ, ಆರಂಭದ ದಿನಗಳಲ್ಲಿ ಸುಮಾರು 51 ಮಂದಿ ನನ್ನ ಆಡಿಯೋ ಕ್ಯಾಸೆಟ್​ ಅನ್ನು ಕಸದ ಬುಟ್ಟಿಗೆ ಎಸೆದಿದ್ದರು. ನನ್ನ ಹಾಡುಗಳನ್ನು ಯಾರೂ ಕೇಳಲೇ ಇಲ್ಲ. ಒಬ್ಬ ಹೊಸಬ ಬಂದಾಗ ಯಾರು ಗಮನಿಸ್ತಾರೆ? ಕೆಲವರಿಗೆ ನನ್ನ ಟ್ಯೂನ್​ ಇಷ್ಟ ಆಗಿದ್ದರೂ ಕೂಡ ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ತೋರಿಸಲಿಲ್ಲ’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಆ ಕಷ್ಟದ ಸಂದರ್ಭದಲ್ಲಿ ಕೀರವಾಣಿಗೆ ಅವಕಾಶ ನೀಡಿದ್ದೇ ರಾಮ್​ ಗೋಪಾಲ್​ ವರ್ಮಾ.

MM Keeravani: ಕನ್ನಡ ಚಿತ್ರರಂಗಕ್ಕೂ ಇದೆ ಎಂಎಂ ಕೀರವಾಣಿ ಕೊಡುಗೆ; ಆಸ್ಕರ್​ ಗೆದ್ದ ಸಂಗೀತ ನಿರ್ದೇಶಕನಿಗೆ ಕರುನಾಡ ನಂಟು

‘ನನಗೆ ‘ಕ್ಷಣ ಕ್ಷಣಂ’ ಸಿನಿಮಾದಲ್ಲಿ ಕೆಲಸ ಮಾಡಲು ರಾಮ್​ ಗೋಪಾಲ್​ ವರ್ಮಾ ಅವಕಾಶ ನೀಡಿದರು. ಆ ಸಮಯದಲ್ಲಿ ‘ಶಿವ’ ಚಿತ್ರದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಅವರ ಪಾಲಿಗೆ ‘ಶಿವ’ ಚಿತ್ರವೇ ಆಸ್ಕರ್​. ನನ್ನ ಪಾಲಿಗೆ ರಾಮ್​ ಗೋಪಾಲ್​ ವರ್ಮಾ ಅವರೇ ಆಸ್ಕರ್​. ಅವರು ನನಗೆ ಅವಕಾಶ ಕೊಟ್ಟ ನಂತರ ಬೇರೆ ಬೇರೆ ನಿರ್ಮಾಪಕರು ಕೂಡ ನನ್ನನ್ನು ಆಯ್ಕೆ ಮಾಡಿಕೊಳ್ಳಲು ಆರಂಭಿಸಿದರು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ.

ಈ ಸಂದರ್ಶನದ ವಿಡಿಯೋ ಕ್ಲಿಪ್​ ವೈರಲ್​ ಆಗಿದೆ. ಅದನ್ನು ಶೇರ್​ ಮಾಡಿಕೊಂಡಿರುವ ರಾಮ್​ ಗೋಪಾಲ್​ ವರ್ಮಾ ಅವರು, ‘ಹೇ ಕೀರವಾಣಿ.. ನನಗೆ ಸತ್ತಂತೆ ಫೀಲ್​ ಆಗುತ್ತಿದೆ. ಯಾಕೆಂದರೆ ಕೇವಲ ಸತ್ತವರನ್ನು ಮಾತ್ರ ಈ ರೀತಿ ಹೊಗಳಲಾಗುತ್ತದೆ’ ಎಂದು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:30 pm, Sun, 26 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!