AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ

Naatu Naatu Song | Oscar Awards: ‘ನನ್ನ ಪಾಲಿಗೆ ಇದು ಎರಡನೇ ಆಸ್ಕರ್​ ಪ್ರಶಸ್ತಿ’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ
ಎಂಎಂ ಕೀರವಾಣಿ
ಮದನ್​ ಕುಮಾರ್​
|

Updated on:Mar 26, 2023 | 2:30 PM

Share

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರು ಈಗ ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ಅವರು ಸಂಗೀತ ಸಂಯೋಜಿಸಿದ ‘ನಾಟು ನಾಟು..’ ಹಾಡು (Naatu Naatu Song) ಸೂಪರ್​ ಹಿಟ್​ ಆಗಿದ್ದೂ ಅಲ್ಲದೇ ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಪಡೆದು ಬೀಗಿದೆ. ಆ ಮೂಲಕ ಭಾರತಕ್ಕೆ ಮೊದಲ ಆಸ್ಕರ್​ ಪ್ರಶಸ್ತಿ (Oscar Award) ತಂದುಕೊಡುವಲ್ಲಿ ಈ ಸಾಂಗ್​ ಯಶಸ್ವಿ ಆಗಿದೆ. ಇಂಥ ಸಾಧನೆ ಮಾಡಿದ್ದಕ್ಕಾಗಿ ಕೀರವಾಣಿ ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಎಲ್ಲ ಕಡೆಗಳಿಂದ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ. ಅಚ್ಚರಿ ಏನೆಂದರೆ, ಎಂಎಂ ಕೀರವಾಣಿ ಅವರಿಗೆ ಆಸ್ಕರ್​ ಸಿಕ್ಕಿರುವುದು ಇದೇ ಮೊದಲೇನೂ ಅಲ್ಲವಂತೆ. ‘ನನ್ನ ಪಾಲಿಗೆ ಇದು ಎರಡನೇ ಆಸ್ಕರ್​ ಪ್ರಶಸ್ತಿ’ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಅಕಾಡೆಮಿ ಅವಾರ್ಡ್​ ಗೆದ್ದು ಬಂದಿರುವ ಎಂಎಂ ಕೀರವಾಣಿ ಅವರು ಕೆಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು 30 ವರ್ಷಗಳ ಹಿಂದಿನ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ಗಲಾಟಾ ಪ್ಲಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಈ ವೇಳೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾಗೆ ಕೀರವಾಣಿ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ
Image
Ram Charan: ‘ನಮ್ಮನ್ನು ಆಸ್ಕರ್​ ವೇದಿಕೆಗೆ ಕರೆಯಲಿಲ್ಲ, ಆ ಬಗ್ಗೆ ಈಗ ಮಾತು ಬೇಡ’: ರಾಮ್​ ಚರಣ್​
Image
MM Keeravani: ಆಸ್ಕರ್ ಗೆದ್ದ ಖುಷಿಯಲ್ಲಿ ರಾಜಮೌಳಿ, ಕೀರವಾಣಿ ಮಾಡಿದ್ದೇನು ನೋಡಿ
Image
MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ
Image
MM Keeravani: ಕನ್ನಡ ಚಿತ್ರರಂಗಕ್ಕೂ ಇದೆ ಎಂಎಂ ಕೀರವಾಣಿ ಕೊಡುಗೆ; ಆಸ್ಕರ್​ ಗೆದ್ದ ಸಂಗೀತ ನಿರ್ದೇಶಕನಿಗೆ ಕರುನಾಡ ನಂಟು

MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ

‘ರಾಮ್​ ಗೋಪಾಲ್​ ವರ್ಮಾ ಅವರೇ ನನ್ನ ಪಾಲಿನ ಮೊದಲ ಆಸ್ಕರ್​. 2023ರಲ್ಲಿ ಪಡೆದಿರುವುದು ನನ್ನ ಎರಡನೇ ಆಸ್ಕರ್​ ಪ್ರಶಸ್ತಿ. ಯಾಕೆಂದರೆ, ಆರಂಭದ ದಿನಗಳಲ್ಲಿ ಸುಮಾರು 51 ಮಂದಿ ನನ್ನ ಆಡಿಯೋ ಕ್ಯಾಸೆಟ್​ ಅನ್ನು ಕಸದ ಬುಟ್ಟಿಗೆ ಎಸೆದಿದ್ದರು. ನನ್ನ ಹಾಡುಗಳನ್ನು ಯಾರೂ ಕೇಳಲೇ ಇಲ್ಲ. ಒಬ್ಬ ಹೊಸಬ ಬಂದಾಗ ಯಾರು ಗಮನಿಸ್ತಾರೆ? ಕೆಲವರಿಗೆ ನನ್ನ ಟ್ಯೂನ್​ ಇಷ್ಟ ಆಗಿದ್ದರೂ ಕೂಡ ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ತೋರಿಸಲಿಲ್ಲ’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಆ ಕಷ್ಟದ ಸಂದರ್ಭದಲ್ಲಿ ಕೀರವಾಣಿಗೆ ಅವಕಾಶ ನೀಡಿದ್ದೇ ರಾಮ್​ ಗೋಪಾಲ್​ ವರ್ಮಾ.

MM Keeravani: ಕನ್ನಡ ಚಿತ್ರರಂಗಕ್ಕೂ ಇದೆ ಎಂಎಂ ಕೀರವಾಣಿ ಕೊಡುಗೆ; ಆಸ್ಕರ್​ ಗೆದ್ದ ಸಂಗೀತ ನಿರ್ದೇಶಕನಿಗೆ ಕರುನಾಡ ನಂಟು

‘ನನಗೆ ‘ಕ್ಷಣ ಕ್ಷಣಂ’ ಸಿನಿಮಾದಲ್ಲಿ ಕೆಲಸ ಮಾಡಲು ರಾಮ್​ ಗೋಪಾಲ್​ ವರ್ಮಾ ಅವಕಾಶ ನೀಡಿದರು. ಆ ಸಮಯದಲ್ಲಿ ‘ಶಿವ’ ಚಿತ್ರದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಅವರ ಪಾಲಿಗೆ ‘ಶಿವ’ ಚಿತ್ರವೇ ಆಸ್ಕರ್​. ನನ್ನ ಪಾಲಿಗೆ ರಾಮ್​ ಗೋಪಾಲ್​ ವರ್ಮಾ ಅವರೇ ಆಸ್ಕರ್​. ಅವರು ನನಗೆ ಅವಕಾಶ ಕೊಟ್ಟ ನಂತರ ಬೇರೆ ಬೇರೆ ನಿರ್ಮಾಪಕರು ಕೂಡ ನನ್ನನ್ನು ಆಯ್ಕೆ ಮಾಡಿಕೊಳ್ಳಲು ಆರಂಭಿಸಿದರು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ.

ಈ ಸಂದರ್ಶನದ ವಿಡಿಯೋ ಕ್ಲಿಪ್​ ವೈರಲ್​ ಆಗಿದೆ. ಅದನ್ನು ಶೇರ್​ ಮಾಡಿಕೊಂಡಿರುವ ರಾಮ್​ ಗೋಪಾಲ್​ ವರ್ಮಾ ಅವರು, ‘ಹೇ ಕೀರವಾಣಿ.. ನನಗೆ ಸತ್ತಂತೆ ಫೀಲ್​ ಆಗುತ್ತಿದೆ. ಯಾಕೆಂದರೆ ಕೇವಲ ಸತ್ತವರನ್ನು ಮಾತ್ರ ಈ ರೀತಿ ಹೊಗಳಲಾಗುತ್ತದೆ’ ಎಂದು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:30 pm, Sun, 26 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್