AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ

Oscar Awards 2023 | MM Keeravani: ಆಸ್ಕರ್​ ಪ್ರಶಸ್ತಿ ಪುರಸ್ಕೃತ ಎಂ.ಎಂ. ಕೀರವಾಣಿ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಅದಕ್ಕೆ ತಕ್ಕಂತೆಯೇ ಸಂಭಾವನೆಯನ್ನೂ ಅವರು ಹೆಚ್ಚಿಸಿಕೊಳ್ಳಲಿದ್ದಾರೆ.

MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ
ಎಂಎಂ ಕೀರವಾಣಿ
ಮದನ್​ ಕುಮಾರ್​
| Edited By: |

Updated on:Mar 13, 2023 | 2:03 PM

Share

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಅವರ ಹೆಸರು ಶೈನ್​ ಆಗುತ್ತಿದೆ. ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಪಡೆದಿದೆ. ಇದು ಇಡೀ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ತಂದಿದೆ. ಸಿನಿಮಾ ಸಂಗೀತ ಲೋಕದಲ್ಲಿ ಎಂಎಂ ಕೀರವಾಣಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಪ್ರತಿ ಸಿನಿಮಾಗೆ ಅವರು ದುಬಾರಿ ಸಂಭಾವನೆ (MM Keeravani Remuneration) ಪಡೆಯುತ್ತಾರೆ. ಈಗ ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಗೆದ್ದಿರುವುದರಿಂದ ಅವರಿಗೆ ಇದ್ದ ಬೇಡಿಕೆ ಇನ್ನಷ್ಟು ಹೆಚ್ಚಾಗಿದೆ.

ನಿರ್ದೇಶಕ ಎಸ್.​ಎಸ್.​ ರಾಜಮೌಳಿ ಮತ್ತು ಎಂ.ಎಂ. ಕೀರವಾಣಿ ಅವರದ್ದು ಹಿಟ್​ ಕಾಂಬಿನೇಷನ್​. ಈವರೆಗೂ ರಾಜಮೌಳಿ ನಿರ್ದೇಶಿಸಿದ ಎಲ್ಲ ಸಿನಿಮಾಗಳಿಗೆ ಸಂಗೀತ ನೀಡಿದ್ದು ಕೀರವಾಣಿ ಅವರು. ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರದ ಹಾಡುಗಳು ಸಖತ್​ ಫೇಮಸ್​. ಬಹುಭಾಷೆಯಲ್ಲಿ ಡಿಮ್ಯಾಂಡ್​ ಸೃಷ್ಟಿಸಿಕೊಂಡಿರುವ ಕೀರವಾಣಿ ಅವರು ಪ್ರತಿ ಸಿನಿಮಾಗೆ 18 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿತ್ತು. ಈಗ ಅವರ ಸಂಬಳದಲ್ಲಿ ಗಣನೀಯವಾಗಿ ಏರಿಕೆ ಆಗಲಿದೆ.

ಇದನ್ನೂ ಓದಿ: Naatu Naatu Song: ‘ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂಥದ್ದು ನಾಟು ನಾಟು ಹಾಡು’: ಆಸ್ಕರ್​ ಗೆದ್ದಿದ್ದಕ್ಕೆ ಮೋದಿ ಪ್ರಶಂಸೆ

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ಆಸ್ಕರ್​ ಪಡೆದವರಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತದೆ. ಅವರ ಕೆಲಸಗಳು ವಿಶ್ವಾದ್ಯಂತ ಗಮನ ಸೆಳೆಯುತ್ತವೆ. ಹಾಗಾಗಿ ಈ ಪ್ರತಿಷ್ಠಿತ ಅವಾರ್ಡ್​ ಗಳಿಸಿದವರ ಮಾರುಕಟ್ಟೆ ಹಿರಿದಾಗುತ್ತದೆ. ಅವರಿಗೆ ವಿಶ್ವಮಟ್ಟದಲ್ಲಿ ಬೇಡಿಕೆ ಸೃಷ್ಟಿ ಆಗುತ್ತದೆ. ಈಗ ಎಂಎಂ ಕೀರವಾಣಿ ಅವರಿಗೂ ಅದೇ ರೀತಿ ಜನಪ್ರಿಯತೆ ಸಿಕ್ಕಿದೆ. ಅದಕ್ಕೆ ತಕ್ಕಂತೆಯೇ ಸಂಭಾವನೆಯನ್ನೂ ಹೆಚ್ಚಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: MM Keeravani’s Best Songs: ಆಸ್ಕರ್ ಗೆದ್ದ ಎಂಎಂ ಕೀರವಾಣಿಯ ಬೆಸ್ಟ್ ಹಾಡುಗಳು ಇವೇ ನೋಡಿ

ರಾಜಮೌಳಿ ಅವರು ಮುಂಬರುವ ದಿನಗಳಲ್ಲಿ ಹಾಲಿವುಡ್​ಗೆ ಲಗ್ಗೆ ಇಡುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಅವರು ಜಾಗತಿಕ ಮಟ್ಟದಲ್ಲಿ ಸಿನಿಮಾ ಮಾಡಿದರೆ ಆ ಚಿತ್ರಕ್ಕೂ ಕೂಡ ಎಂಎಂ ಕೀರವಾಣಿ ಅವರೇ ಸಂಗೀತ ನೀಡುತ್ತಾರೆ ಎಂಬುದು ಖಚಿತ. ಆಗ ಅವರ ವ್ಯಾಪ್ತಿ ಇನ್ನಷ್ಟು ಹಿರಿದಾಗುತ್ತದೆ. ಹಾಲಿವುಡ್​ ಪ್ರೊಡಕ್ಷನ್​ ಕಂಪನಿಗಳ ಜೊತೆ ಕೈ ಜೋಡಿಸಿದರೆ ನಿರೀಕ್ಷೆಗೂ ಮೀರಿದ ಸಂಭಾವನೆ ಎಂಎಂ ಕೀರವಾಣಿ ಅವರ ಕೈ ಸೇರಲಿದೆ.

ಇದನ್ನೂ ಓದಿ: MM Keeravani: ಕನ್ನಡ ಚಿತ್ರರಂಗಕ್ಕೂ ಇದೆ ಎಂಎಂ ಕೀರವಾಣಿ ಕೊಡುಗೆ; ಆಸ್ಕರ್​ ಗೆದ್ದ ಸಂಗೀತ ನಿರ್ದೇಶಕನಿಗೆ ಕರುನಾಡ ನಂಟು

ಆಸ್ಕರ್​ ಪ್ರಶಸ್ತಿ ಮಾತ್ರವಲ್ಲದೇ, ಒಮ್ಮೆ ರಾಷ್ಟ್ರ ಪ್ರಶಸ್ತಿ, 8 ಬಾರಿ ಫಿಲ್ಮ್​ಫೇರ್​ ಪ್ರಶಸ್ತಿ, 11 ಬಾರಿ ‘ನಂದಿ ಅವಾರ್ಡ್ಸ್​’ ಪಡೆದುಕೊಂಡ ಖ್ಯಾತಿ ಎಂಎಂ ಕೀರವಾಣಿ ಅವರಿಗೆ ಸಲ್ಲುತ್ತದೆ. ಸಂಗೀತ ನಿರ್ದೇಶನದ ಜೊತೆಗೆ ಗೀತರಚನಕಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ತಮಿಳು, ಹಿಂದಿ ಹಾಗೂ ಕನ್ನಡದ ಕೆಲವು ಸಿನಿಮಾಗಳಿಗೂ ಕೂಡ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:15 pm, Mon, 13 March 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?