MM Keeravani: ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು’ ಗೀತೆ ಹಾಡಲಿರುವ ಎಂಎಂ ಕೀರವಾಣಿ

Naatu Naatu Song | Oscar Awards 2023: ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ವೇದಿಕೆಯಲ್ಲಿ ಪರ್ಫಾರ್ಮೆನ್ಸ್​ ನೀಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ.

MM Keeravani: ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು’ ಗೀತೆ ಹಾಡಲಿರುವ ಎಂಎಂ ಕೀರವಾಣಿ
ಎಂಎಂ ಕೀರವಾಣಿ
Follow us
|

Updated on:Feb 07, 2023 | 6:01 PM

ಟಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರಿಗೆ ವಿಶ್ವಾದ್ಯಂತ ಜನಪ್ರಿಯತೆ ಸಿಕ್ಕಿದೆ. ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾದ ಎಲ್ಲ ಹಾಡುಗಳು ಜನಮನ ಗೆದ್ದವು. ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಗೆಲ್ಲುವ ಮೂಲಕ ಭಾರತಕ್ಕೆ ಎಂಎಂ ಕೀರವಾಣಿ ಖ್ಯಾತಿ ತಂದುಕೊಟ್ಟರು. ‘ನಾಟು ನಾಟು..’ ಹಾಡು (Naatu Naatu Song) ‘ಆಸ್ಕರ್​’ ಪ್ರಶಸ್ತಿಗೆ ನಾಮಿನೇಟ್​ ಆಗಿದೆ. ಅಷ್ಟೇ ಅಲ್ಲದೇ ಎಂಎಂ ಕೀರವಾಣಿ ಅವರಿಗೆ ಒಂದು ಬಂಪರ್​ ಅವಕಾಶ ಸಿಕ್ಕಿದೆ. ಆಸ್ಕರ್​ ಪ್ರಶಸ್ತಿ (Oscar Awards 2023) ಪ್ರದಾನ ಸಮಾರಂಭದಲ್ಲಿ ಈ ಗೀತೆಯನ್ನು ಹಾಡಲು ಅವರಿಗೆ ವೇದಿಕೆ ಒದಗಿಸಿಕೊಡಲಾಗುತ್ತಿದೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಅದರಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ಪರ್ಫಾರ್ಮೆನ್ಸ್​ ನೀಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ. ಈ ಬಗ್ಗೆ ಅವರು ಕೊಂಚ ನರ್ವಸ್​ ಆಗಿದ್ದಾರೆ. ಅದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಚಿಂತೆ ಕಾಡುತ್ತಿದೆ ಎಂದು ಅವರು ಹೇಳಿರುವುದಾಗಿ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಇದನ್ನೂ ಓದಿ: MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ

ಇದನ್ನೂ ಓದಿ
Image
‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ
Image
Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ
Image
Golden Globes 2023: ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಬಾಚಿಕೊಂಡ ಆರ್​ಆರ್​ಆರ್​ನ ನಾಟು ನಾಟು ಹಾಡು
Image
RRR: ಜಪಾನ್​ನಲ್ಲಿ ಮೊದಲ ದಿನವೇ 1 ಕೋಟಿ ರೂಪಾಯಿ ಗಳಿಸಿದ ‘ಆರ್​ಆರ್​ಆರ್​’: ಜೋರಾಗಿದೆ ಕ್ರೇಜ್​

‘ನಾವು ಆಸ್ಕರ್​ ಗೆಲ್ಲುತ್ತೇವೆ ಎಂಬ ಬಗ್ಗೆ ನನಗೆ ಆತ್ಮವಿಶ್ವಾಸ ಇದೆ. ಆದರೆ ಅಷ್ಟು ಜನರ ಎದುರಿನಲ್ಲಿ ಪರ್ಫಾರ್ಮೆನ್ಸ್​ ನೀಡಲು ಸಾಕಷ್ಟು ತಯಾರಿ ಬೇಕು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಅವರ ದೇಹದ ತೂಕ ಹೆಚ್ಚಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ತುಂಬ ಸಮಯದಿಂದ ನಾನು ಆರೋಗ್ಯವನ್ನು ನಿರ್ಲಕ್ಷಿಸಿದೆ. ಗೋಲ್ಡನ್​ ಗ್ಲೋಬ್​ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತುಕೊಂಡು ಮಾತನಾಡುವುದು ಕೂಡ ನನಗೆ ಸಮಸ್ಯೆ ಆಯಿತು’ ಎಂದು ಕೀರವಾಣಿ ಹೇಳಿದ್ದಾರೆ.

ಇದನ್ನೂ ಓದಿ: 2015ರಲ್ಲಿ ಚಿತ್ರರಂಗ ತೊರೆಯಬೇಕೆಂದುಕೊಂಡಿದ್ದ ಕೀರವಾಣಿ; ಆ ವರ್ಷ ನಡೆಯಿತು ಚಮತ್ಕಾರ

‘ನನ್ನ ದೇಹ ತೂಕದ ಬಗ್ಗೆ ನನಗೆ ಅರಿವು ಮೂಡಿದೆ. ನಾನು ಶೇಪ್​ ಕಳೆದುಕೊಂಡಿದ್ದೇನೆ. ದೇಹವು ಆರೋಗ್ಯಕರವಾಗಿ ಇಲ್ಲದಿದ್ದರೆ ಮನಸ್ಸು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಹೆಮ್ಮೆ ತರುವಂತಹ ಇನ್ನಷ್ಟು ಹಾಡುಗಳನ್ನು ಕಂಪೋಸ್​ ಮಾಡಬೇಕಿದ್ದರೆ ನಾನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿ ಇರಬೇಕು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ.

ಇದನ್ನೂ ಓದಿ: MM Keeravani: ‘ಗೋಲ್ಡನ್ ಗ್ಲೋಬ್’: ವೃತ್ತಿಜೀವನದ ಆರಂಭದಲ್ಲಿ ಚಾನ್ಸ್​ ನೀಡಿದ ಅರ್ಜುನ್ ಸರ್ಜಾಗೆ ಕೀರವಾಣಿ ಧನ್ಯವಾದ

ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’, ‘ಜಮೀನ್ದಾರ್ರು’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದು ಎಂಎಂ ಕೀರವಾಣಿ ಅವರೇ. ತೆಲುಗಿನಿಂದ ರಿಮೇಕ್​ ಆದ ‘ಮರ್ಯಾದೆ ರಾಮಣ್ಣ’ ಹಾಗೂ ‘ವೀರ ಮದಕರಿ’ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದು ಕೂಡ ಎಂಎಂ ಕೀರವಾಣಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:01 pm, Tue, 7 February 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ