MM Keeravani: ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು’ ಗೀತೆ ಹಾಡಲಿರುವ ಎಂಎಂ ಕೀರವಾಣಿ

Naatu Naatu Song | Oscar Awards 2023: ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ವೇದಿಕೆಯಲ್ಲಿ ಪರ್ಫಾರ್ಮೆನ್ಸ್​ ನೀಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ.

MM Keeravani: ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು’ ಗೀತೆ ಹಾಡಲಿರುವ ಎಂಎಂ ಕೀರವಾಣಿ
ಎಂಎಂ ಕೀರವಾಣಿ

Updated on: Feb 07, 2023 | 6:01 PM

ಟಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರಿಗೆ ವಿಶ್ವಾದ್ಯಂತ ಜನಪ್ರಿಯತೆ ಸಿಕ್ಕಿದೆ. ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾದ ಎಲ್ಲ ಹಾಡುಗಳು ಜನಮನ ಗೆದ್ದವು. ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಗೆಲ್ಲುವ ಮೂಲಕ ಭಾರತಕ್ಕೆ ಎಂಎಂ ಕೀರವಾಣಿ ಖ್ಯಾತಿ ತಂದುಕೊಟ್ಟರು. ‘ನಾಟು ನಾಟು..’ ಹಾಡು (Naatu Naatu Song) ‘ಆಸ್ಕರ್​’ ಪ್ರಶಸ್ತಿಗೆ ನಾಮಿನೇಟ್​ ಆಗಿದೆ. ಅಷ್ಟೇ ಅಲ್ಲದೇ ಎಂಎಂ ಕೀರವಾಣಿ ಅವರಿಗೆ ಒಂದು ಬಂಪರ್​ ಅವಕಾಶ ಸಿಕ್ಕಿದೆ. ಆಸ್ಕರ್​ ಪ್ರಶಸ್ತಿ (Oscar Awards 2023) ಪ್ರದಾನ ಸಮಾರಂಭದಲ್ಲಿ ಈ ಗೀತೆಯನ್ನು ಹಾಡಲು ಅವರಿಗೆ ವೇದಿಕೆ ಒದಗಿಸಿಕೊಡಲಾಗುತ್ತಿದೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಅದರಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ಪರ್ಫಾರ್ಮೆನ್ಸ್​ ನೀಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ. ಈ ಬಗ್ಗೆ ಅವರು ಕೊಂಚ ನರ್ವಸ್​ ಆಗಿದ್ದಾರೆ. ಅದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಚಿಂತೆ ಕಾಡುತ್ತಿದೆ ಎಂದು ಅವರು ಹೇಳಿರುವುದಾಗಿ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಇದನ್ನೂ ಓದಿ: MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ

ಇದನ್ನೂ ಓದಿ
‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ
Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ
Golden Globes 2023: ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಬಾಚಿಕೊಂಡ ಆರ್​ಆರ್​ಆರ್​ನ ನಾಟು ನಾಟು ಹಾಡು
RRR: ಜಪಾನ್​ನಲ್ಲಿ ಮೊದಲ ದಿನವೇ 1 ಕೋಟಿ ರೂಪಾಯಿ ಗಳಿಸಿದ ‘ಆರ್​ಆರ್​ಆರ್​’: ಜೋರಾಗಿದೆ ಕ್ರೇಜ್​

‘ನಾವು ಆಸ್ಕರ್​ ಗೆಲ್ಲುತ್ತೇವೆ ಎಂಬ ಬಗ್ಗೆ ನನಗೆ ಆತ್ಮವಿಶ್ವಾಸ ಇದೆ. ಆದರೆ ಅಷ್ಟು ಜನರ ಎದುರಿನಲ್ಲಿ ಪರ್ಫಾರ್ಮೆನ್ಸ್​ ನೀಡಲು ಸಾಕಷ್ಟು ತಯಾರಿ ಬೇಕು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ. ಅವರ ದೇಹದ ತೂಕ ಹೆಚ್ಚಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ತುಂಬ ಸಮಯದಿಂದ ನಾನು ಆರೋಗ್ಯವನ್ನು ನಿರ್ಲಕ್ಷಿಸಿದೆ. ಗೋಲ್ಡನ್​ ಗ್ಲೋಬ್​ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತುಕೊಂಡು ಮಾತನಾಡುವುದು ಕೂಡ ನನಗೆ ಸಮಸ್ಯೆ ಆಯಿತು’ ಎಂದು ಕೀರವಾಣಿ ಹೇಳಿದ್ದಾರೆ.

ಇದನ್ನೂ ಓದಿ: 2015ರಲ್ಲಿ ಚಿತ್ರರಂಗ ತೊರೆಯಬೇಕೆಂದುಕೊಂಡಿದ್ದ ಕೀರವಾಣಿ; ಆ ವರ್ಷ ನಡೆಯಿತು ಚಮತ್ಕಾರ

‘ನನ್ನ ದೇಹ ತೂಕದ ಬಗ್ಗೆ ನನಗೆ ಅರಿವು ಮೂಡಿದೆ. ನಾನು ಶೇಪ್​ ಕಳೆದುಕೊಂಡಿದ್ದೇನೆ. ದೇಹವು ಆರೋಗ್ಯಕರವಾಗಿ ಇಲ್ಲದಿದ್ದರೆ ಮನಸ್ಸು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಹೆಮ್ಮೆ ತರುವಂತಹ ಇನ್ನಷ್ಟು ಹಾಡುಗಳನ್ನು ಕಂಪೋಸ್​ ಮಾಡಬೇಕಿದ್ದರೆ ನಾನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿ ಇರಬೇಕು’ ಎಂದು ಎಂಎಂ ಕೀರವಾಣಿ ಹೇಳಿದ್ದಾರೆ.

ಇದನ್ನೂ ಓದಿ: MM Keeravani: ‘ಗೋಲ್ಡನ್ ಗ್ಲೋಬ್’: ವೃತ್ತಿಜೀವನದ ಆರಂಭದಲ್ಲಿ ಚಾನ್ಸ್​ ನೀಡಿದ ಅರ್ಜುನ್ ಸರ್ಜಾಗೆ ಕೀರವಾಣಿ ಧನ್ಯವಾದ

ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’, ‘ಜಮೀನ್ದಾರ್ರು’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದು ಎಂಎಂ ಕೀರವಾಣಿ ಅವರೇ. ತೆಲುಗಿನಿಂದ ರಿಮೇಕ್​ ಆದ ‘ಮರ್ಯಾದೆ ರಾಮಣ್ಣ’ ಹಾಗೂ ‘ವೀರ ಮದಕರಿ’ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದು ಕೂಡ ಎಂಎಂ ಕೀರವಾಣಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:01 pm, Tue, 7 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us