AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lucky Ali Death Hoax: ಗಾಯಕ ಲಕ್ಕಿ ಅಲಿ ನಿಧನರಾಗಿದ್ದಾರೆ ಎಂಬುದು ಸುಳ್ಳುಸುದ್ದಿ: ನಫೀಸಾ ಅಲಿ

ಗಾಯಕ ಲಕ್ಕಿ ಅಲಿ ಬೆಂಗಳೂರಿನಲ್ಲಿರುವ ತೋಟದ ಮನೆಯಲ್ಲಿದ್ದಾರೆ. ಅವರು ಆರೋಗ್ಯದಿಂದಿದ್ದಾರೆ ಎಂದು ಹೇಳಿದ್ದಾರೆ. ನಾನು ಎರಡು ಮೂರು ಬಾರಿ ಲಕ್ಕಿ ಜತೆ ಮಾತನಾಡಿದ್ದೇನೆ. ಅವರು ಆರೋಗ್ಯದಿಂದಿದ್ದಾರೆ. ಅವರಿಗೆ ಕೊವಿಡ್ ಇಲ್ಲ ಎಂದು ನಫೀಸಾ ಅಲಿ ಹೇಳಿದ್ದಾರೆ.

Lucky Ali Death Hoax: ಗಾಯಕ ಲಕ್ಕಿ ಅಲಿ ನಿಧನರಾಗಿದ್ದಾರೆ ಎಂಬುದು ಸುಳ್ಳುಸುದ್ದಿ: ನಫೀಸಾ ಅಲಿ
ಲಕ್ಕಿ ಅಲಿ (ಕೃಪೆ: ಫೇಸ್​ಬುಕ್)
ರಶ್ಮಿ ಕಲ್ಲಕಟ್ಟ
| Edited By: |

Updated on:May 05, 2021 | 2:42 PM

Share

ಮುಂಬೈ: ದೇಶದಲ್ಲಿ ಕೊವಿಡ್ ಸಾಂಕ್ರಾಮಿಕದಿಂದ ಜನರು ಸಾವಿಗೀಡಾಗುತ್ತಿರುವ ಆತಂಕದ ಹೊತ್ತಿನಲ್ಲಿ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಕೊರೊನಾವೈರಸ್​ನಿಂದ ಮೃತಪಟ್ಟಿದ್ದಾರೆ ಎಂಬ ಸುಳ್ಳುಸುದ್ದಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಆದರೆ ಇದು ಸುಳ್ಳುಸುದ್ದಿ ಎಂದು ಲಕ್ಕಿ ಅಲಿಯ ಆಪ್ತ ಗೆಳತಿ ನಫೀಸಾ ಅಲಿ ಹೇಳಿದ್ದಾರೆ.

ಇಟಿ ಟೈಮ್ಸ್ ಜತೆ ಮಾತನಾಡಿದ ನಫೀಸಾ ಅಲಿ, ಗಾಯಕ ಲಕ್ಕಿ ಅಲಿ ಬೆಂಗಳೂರಿನಲ್ಲಿರುವ ತೋಟದ ಮನೆಯಲ್ಲಿದ್ದಾರೆ. ಅವರು ಆರೋಗ್ಯದಿಂದಿದ್ದಾರೆ ಎಂದು ಹೇಳಿದ್ದಾರೆ. ನಾನು ಎರಡು ಮೂರು ಬಾರಿ ಲಕ್ಕಿ ಜತೆ ಮಾತನಾಡಿದ್ದೇನೆ. ಅವರು ಆರೋಗ್ಯದಿಂದಿದ್ದಾರೆ. ಅವರಿಗೆ ಕೊವಿಡ್ ಇಲ್ಲ. ಅವರಲ್ಲಿ ಪ್ರತಿರೋಧ ಶಕ್ತಿ ಇದೆ. ಅವರು ಸಂಗೀತ ಸಂಯೋಜನೆಯಲ್ಲಿ ಬ್ಯುಸಿಯಾಗಿದ್ದಾರೆ. ವರ್ಚುವಲ್ ಸಂಗೀತೋತ್ಸವದ ಬಗ್ಗೆಯೇ ನಾವು ಮಾತನಾಡಿದ್ದೆವು. ಅವರು ಅವರ ಕುಟುಂಬದೊಂದಿಗೆ ಬೆಂಗಳೂರಿನ ತೋಟದ ಮನೆಯಲ್ಲಿದ್ದಾರೆ. ನಾನು ಈಗಷ್ಟೇ ಅವರಲ್ಲಿ ಮಾತನಾಡಿದೆ. ಅವರು ಆರಾಮವಾಗಿದ್ದಾರೆ ಎಂದಿದ್ದಾರೆ.

ಲಕ್ಕಿ ಅಲಿ ಸದ್ಯ ಎಲ್ಲಿಯೂ ಸುದ್ದಿಯಲ್ಲಿಲ್ಲ. ಕಳೆದ ಬಾರಿ ವಿಡಿಯೊವೊಂದನ್ನು ಹರಿಬಿಟ್ಟು ಅಭಿಮಾನಿಗಳನ್ನು ಸಂತಸಗೊಳಿಸಿದ್ದರು. 90ರ ದಶಕದಲ್ಲಿ ಹಿಟ್ ಆಗಿದ್ದ ಓ ಸನಂ ಹಾಡನ್ನು ಗಿಟಾರ್ ನುಡಿಸಿ ಹಾಡುತ್ತಿರುವ ವಿಡಿಯೊವನ್ನು ಲಕ್ಕಿ ಅಲಿ ಕಳೆದ ವರ್ಷ ಪೋಸ್ಟಿಸಿದ್ದು, ಅದು ವೈರಲ್ ಆಗಿತ್ತು. ಈ ಹಾಡಿನಲ್ಲಿ ಮರ್ ಭೀ ಗಯೇ ತೋ ಬೂಲ್ ನ ಜಾನಾ ( ನಾನು ಸತ್ತರೂ ಮರೆಯಬೇಡ) ಎಂಬ ಸಾಲು ಬಂದಾಗ ಲಕ್ಕಿ ಹಾಡು ನಿಲ್ಲಿಸಿ ಸ್ವಲ್ಪ ಸಾವರಿಸಿಕೊಂಡು ಮುಂದಿನ ಸಾಲು ಹಾಡಿದ್ದರು. ಇದು ಅಭಿಮಾನಿಗಳನ್ನು ಭಾವುಕರನ್ನಾಗಿಸಿತ್ತು.

ಗೋವಾದಲ್ಲಿ ಲಕ್ಕಿ ಅಲಿಯ ಸಂಗೀತ ಕಾರ್ಯಕ್ರಮದ ವಿಡಿಯೊವನ್ನು ಶೇರ್ ಮಾಡಿದ ನಫೀಸಾಅಲಿ , ಅರಂಬೋಲ್ ನಲ್ಲಿ ಲಕ್ಕಿ ಅಲಿಯವರ ಲೈವ್ ಸಂಗೀತ ಕಾರ್ಯಕ್ರಮದ ವಿಡಿಯೊ ಎಂದು ಬರೆದಿದ್ದಾರೆ.

ಇದನ್ನೂ ಓದಿ: Maratha Reservation: ಮರಾಠಾ ಮೀಸಲಾತಿ ಕಾನೂನಿನ ಪ್ರಕಾರ ಇಲ್ಲ ಎಂದು ತೀರ್ಪು ನೀಡಿದ ಸರ್ವೋಚ್ಛ ನ್ಯಾಯಾಲಯ

Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

Published On - 1:34 pm, Wed, 5 May 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ