AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಸಿನಿಮಾ ಭಾರತ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ ಎಂದ ರಜನಿಕಾಂತ್

ಮೊದಲ ದಿನ ‘ಕಲ್ಕಿ 2898 ಎಡಿ’ ಚಿತ್ರ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಈ ಚಿತ್ರ ಭಾರತದಲ್ಲಿ 54 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಸಿನಿಮಾದ ಒಟ್ಟಾರೆ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ. ಸಿನಿಮಾ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಭಾರತ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ ಎಂದ ರಜನಿಕಾಂತ್
ರಜನಿಕಾಂತ್-ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jun 29, 2024 | 1:29 PM

Share

‘ಕಲ್ಕಿ 2898 ಎಡಿ’ ಸಿನಿಮಾ ಎಲ್ಲ ಕಡೆಗಳಲ್ಲಿ ಹವಾ ಮಾಡುತ್ತಿದೆ. ಈ ಚಿತ್ರ ನೋಡಿದವರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಿನಿಮಾ ನೋಡಿ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈಗ ನಟ ರಜನಿಕಾಂತ್ ಅವರ ಸರದಿ. ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ವೀಕ್ಷಿಸಿದ್ದಾರೆ. ಜೊತೆಗೆ ನಿರ್ದೇಶಕನ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಮೂಡಿ ಬಂದಿದೆ. ಸಂಪೂರ್ಣ ಕಲ್ಪನಾತ್ಮಕವಾಗಿ ಚಿತ್ರ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಇರೋ ಗ್ರಾಫಿಕ್ಸ್ ಹಾಗೂ ವಿಶ್ಯುವಲ್ಸ್ ಗಮನ ಸೆಳೆದಿದೆ. ಈ ಕಾರಣಕ್ಕೆ ಜನರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ರಜನಿಕಾಂತ್ ಅವರಿಗೂ ಚಿತ್ರ ಇಷ್ಟ ಆಗಿದೆ.

‘ಕಲ್ಕಿ ಸಿನಿಮಾ ನೋಡಿದೆ. ಎಂತಹ ಅದ್ಭುತ ಸಿನಿಮಾ. ನಾಗ್ ಅಶ್ವಿನ್ ಅವರು ಭಾರತೀಯ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಶ್ವಿನಿ ದತ್, ಅಮಿತಾಭ್ ಬಚ್ಚನ್, ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಹಾಗೂ ತಂಡಕ್ಕೆ ಅಭಿನಂದನೆ. ಎರಡನೇ ಪಾರ್ಟ್​ಗಾಗಿ ಕಾಯುತ್ತಿದ್ದೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?

‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ. ಈಗಾಗಲೇ ಸಿನಿಮಾದ ಗಳಿಕೆ ಭರ್ಜರಿಯಾಗಿ ಸಾಗುತ್ತಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ