‘ಕಲ್ಕಿ’ ಸಿನಿಮಾಕ್ಕೆ ಪ್ರಭಾಸ್ ಅನ್ನೇ ಆಯ್ಕೆ ಮಾಡಿದ್ದೇಕೆ: ನಿರ್ದೇಶಕ ಕೊಟ್ಟ ಕಾರಣವಿದು?

‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಗುವತ್ತ ದಾಪುಗಾಲು ಹಾಕುತ್ತಿದೆ. ಇದರ ನಡುವೆ ನಿರ್ದೇಶಕ ನಾಗ್ ಅಶ್ವಿನ್ ಪ್ರಭಾಸ್ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ವಿಡಿಯೋನಲ್ಲಿ ತಾವು ಈ ಸಿನಿಮಾಕ್ಕೆ ಪ್ರಭಾಸ್ ಅವರನ್ನೇ ಆಯ್ಕೆ ಮಾಡಿಕೊಂಡಿದ್ದೇಕೆ ಎಂದು ಹೇಳಿದ್ದಾರೆ.

‘ಕಲ್ಕಿ’ ಸಿನಿಮಾಕ್ಕೆ ಪ್ರಭಾಸ್ ಅನ್ನೇ ಆಯ್ಕೆ ಮಾಡಿದ್ದೇಕೆ: ನಿರ್ದೇಶಕ ಕೊಟ್ಟ ಕಾರಣವಿದು?
Follow us
|

Updated on: Jun 28, 2024 | 6:28 PM

ತೆಲುಗು ಚಿತ್ರರಂಗದಲ್ಲಿ ದೊಡ್ಡ ಸಂಖ್ಯೆಯ ಸ್ಟಾರ್ ನಟರಿದ್ದಾರೆ. ಪರಭಾಷೆಯ ಚಿತ್ರರಂಗಗಳಿಗೆ ಹೋಲಿಸಿದರೆ ತೆಲುಗು ಚಿತ್ರರಂಗ ಹೊಂದಿರುವ ಸ್ಟಾರ್ ನಟರ ಸಂಖ್ಯೆ ತುಸು ಹೆಚ್ಚು, ಅದಕ್ಕೆ ತಕ್ಕಂತೆ ಭಾರಿ ಬಜೆಟ್​ನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿಯಮಿತವಾಗಿ ನೀಡುತ್ತಲೇ ಬಂದಿದೆ ತೆಲುಗು ಚಿತ್ರರಂಗ. ಇದೀಗ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸತತ ಸೋಲು ಕಂಡಿದ್ದ ಪ್ರಭಾಸ್​ಗೆ ಭಾರಿ ಗೆಲುವನ್ನು ‘ಕಲ್ಕಿ’ ನೀಡಲಿದೆ ಎನ್ನಲಾಗುತ್ತಿದೆ. ಕಲ್ಕಿ ಸಿನಿಮಾದ ಪಾತ್ರಕ್ಕೆ ಪ್ರಭಾಸ್ ಅದ್ಭುತವಾಗಿ ಸೂಟ್ ಸಹ ಆಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಅಷ್ಟೋಂದು ಸೂಪರ್ ಸ್ಟಾರ್​ಗಳಿರುವಾಗ ‘ಕಲ್ಕಿ’ ಸಿನಿಮಾಕ್ಕೆ ಪ್ರಭಾಸ್ ಅವರನ್ನೇ ಆರಿಸಿಕೊಂಡಿದ್ದೇಕೆ? ನಿರ್ದೇಶಕ ನಾಗ್ ಅಶ್ವಿನ್ ಉತ್ತರ ನೀಡಿದ್ದಾರೆ.

ಈ ಹಿಂದಿನ ಸಂದರ್ಶನವೊಂದರಲ್ಲಿ ನಾಗ್ ಅಶ್ವಿನ್​ಗೆ ಈ ಪ್ರಶ್ನೆ ಎದುರಾಗಿತ್ತು, ‘ಇಷ್ಟು ದೊಡ್ಡ ಬಜೆಟ್ ಭಿನ್ನ ಕತೆಯುಳ್ಳ ಸಿನಿಮಾ, ಈ ಸಿನಿಮಾಕ್ಕೆ ಪ್ರಭಾಸ್ ಅವರನ್ನೇ ಆಯ್ಕೆ ಮಾಡಿಕೊಂಡಿದ್ದೇಕೆ? ಎಂದು ಸಂದರ್ಶಕಿ ಪ್ರಶ್ನೆ ಕೇಳಿದ್ದರು. ‘ಕತೆಗೆ ಸೂಕ್ತವಾಗುತ್ತಾರೆ ಎಂಬುದು ಮಾತ್ರವೇ ಕಾರಣವಲ್ಲ, ಈ ಕತೆಯನ್ನು ಅವರು ಬಿಟ್ಟು ಇನ್ಯಾರೂ ಸಹ ಮಾಡಲು ಸಾಧ್ಯವಿಲ್ಲ. ಇದು ಬಹಳ ದೊಡ್ಡ ಕತೆ, ಭಾರವಾದ ಕತೆ, ಈ ಕತೆಯನ್ನು ಹೆಗಲ ಮೇಲೆ ಹೊರುವ ಛಾತಿ ಈಗಿರುವ ನಟರಲ್ಲಿ ಪ್ರಭಾಸ್ ಅವರನ್ನು ಬಿಟ್ಟು ಇನ್ಯಾರಿಗೂ ಇಲ್ಲ’ ಎಂದಿದ್ದರು ನಾಗ್ ಅಶ್ವಿನ್.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಮುರಿದ ದಾಖಲೆಗಳೆಷ್ಟು? ನಿರ್ಮಾಪಕರು ಕೊಟ್ಟರು ಉತ್ತರ

ನಾಗ್ ಅಶ್ವಿನ್ ಅವರು ಆ ಸಂದರ್ಶನದಲ್ಲಿ ಆಡಿದ ಮಾತುಗಳ ವಿಡಿಯೋ ಇಂದು ವೈರಲ್ ಆಗುತ್ತಿವೆ. ಜೂ ಎನ್​ಟಿಆರ್, ಅಲ್ಲು ಅರ್ಜುನ್, ರಾಮ್ ಚರಣ್, ಮಹೇಶ್ ಬಾಬು, ಚಿರಂಜೀವಿ, ಪವನ್ ಕಲ್ಯಾಣ್, ವಿಜಯ್ ದೇವರಕೊಂಡ ಇನ್ನೂ ಹಲವಾರು ಸ್ಟಾರ್ ನಟರನ್ನು ಹೊಂದಿರುವ ಚಿತ್ರರಂಗದಲ್ಲಿ ದೊಡ್ಡ ಕತೆಯನ್ನು ಹೊರುವ ಛಾತಿ, ಕತೆಗೆ ಪಾತ್ರಕ್ಕೆ ನ್ಯಾಯ ಒದಗಿಸುವ ಛಾತಿ ಪ್ರಭಾಸ್​ಗೆ ಮಾತ್ರವೇ ಇದೆ ಎಂದು ನಾಗ್ ಅಶ್ವಿನ್ ಸ್ಪಷ್ಟವಾಗಿ ಹೇಳಿದ್ದರು. ನಾಗ್ ಅಶ್ವಿನ್​ರ ವಿಡಿಯೋವನ್ನು ಪ್ರಭಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಖುಷಿ ಪಡುತ್ತಿದ್ದಾರೆ.

ನಾಗ್ ಅಶ್ವಿನ್ ಹೇಳಿರುವುದು ನಿಜ ಸಹ. ಬಾಹುಬಲಿ ಬಳಿಕ ಪ್ರಭಾಸ್​ಗೆ ಎಲ್ಲವೂ ಲಾರ್ಜರ್ ದ್ಯಾನ್ ಲೈಫ್ ಪಾತ್ರಗಳೇ ದೊರೆತಿವೆ. ಅಂಥಹಾ ಪಾತ್ರಗಳನ್ನು ಅವರನ್ನು ಬಿಟ್ಟು ಇನ್ಯಾರೂ ಮಾಡಲು ಸಾಧ್ಯವಿಲ್ಲ ಎಂಬ ನಂಬಿಕೆಯಿಂದಲೇ ಪಾತ್ರಗಳು ಪ್ರಭಾಸ್ ಅನ್ನು ಅರಸಿ ಬಂದಿವೆ. ‘ರಾಧೆ-ಶ್ಯಾಮ್’, ‘ಆದಿಪುರುಷ್’ ಸಿನಿಮಾಗಳು ಸಹ ಸಾಮಾನ್ಯ ಕತೆಗಳಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ