AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಬಗ್ಗೆ ನಿರ್ದೇಶಕ ನಾಗ್ ಅಶ್ವಿನ್ ಮಾತು

ನಾಗ್ ಅಶ್ವಿನ್ ನಿರ್ದೇಶನ ಮಾಡಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ 60% ಚಿತ್ರೀಕರಣ ಮುಗಿದಿದೆ ಎನ್ನಲಾಗುತ್ತಿದೆ. ಆದರೆ ನಿರ್ದೇಶಕ ನಾಗ್ ಅಶ್ವಿನ್ ಬೇರೆಯದೇ ಮಾಹಿತಿ ಹೊರಹಾಕಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಬಗ್ಗೆ ನಿರ್ದೇಶಕ ನಾಗ್ ಅಶ್ವಿನ್ ಮಾತು
ಮಂಜುನಾಥ ಸಿ.
|

Updated on: Jul 05, 2024 | 11:48 AM

Share

‘ಕಲ್ಕಿ 2898 ಎಡಿ’ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭರ್ಜರಿ ಹಿಟ್ ಆಗಿದ್ದ 1000 ಕೋಟಿ ಗಳಿಸುವ ನಿರೀಕ್ಷೆ ಹುಟ್ಟಿಸಿದೆ. ಈಗ ಬಿಡುಗಡೆ ಆಗಿರುವುದು ಸಿನಿಮಾದ ಮೊದಲ ಭಾಗವಷ್ಟೆ ಆಗಿದೆ. ಸಿನಿಮಾದ ಎರಡನೇ ಭಾಗ ಇನ್ನೂ ಚಿತ್ರೀಕರಣ ಆಗಬೇಕಿದೆ. ನಿರ್ಮಾಪಕರು ಹೇಳಿರುವಂತೆ ಎರಡನೇ ಭಾಗದ 60% ಚಿತ್ರೀಕರಣ ಆಗಿದೆ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಗ್ ಅಶ್ವಿನ್, ಈ ವಿಷಯವನ್ನು ತಳ್ಳಿ ಹಾಕಿದ್ದು, ಇನ್ನೂ ಸಾಕಷ್ಟು ಕೆಲಸ ಬಾಕಿ ಇದೆ ಎಂದಿದ್ದಾರೆ.

ಎರಡನೇ ಭಾಗದ 60% ಚಿತ್ರೀಕರಣ ಆಗಿದೆ ಎಂದು ಸುದ್ದಿ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗ್ ಅಶ್ವಿನ್, ‘ಕೆಲವು ಭಾಗದ ಚಿತ್ರೀಕರಣ ಆಗಿದೆ ಆದರೆ ಅದು 60% ಚಿತ್ರೀಕರಣ ಎಂದು ಹೇಳಲಾಗದು. ಏಕೆಂದರೆ ಈಗ ಆಗಿರುವುದು ಕೇವಲ 25-30 ದಿನಗಳ ಚಿತ್ರೀಕರಣ ಮಾತ್ರವೇ. ಎರಡನೇ ಭಾಗದ ಹಲವು ದೃಶ್ಯಗಳ ಚಿತ್ರೀಕರಣ ಇನ್ನೂ ಬಾಕಿ ಇದೆ. ಚಿತ್ರೀಕರಣಕ್ಕೆ ಮಾಡಿಕೊಳ್ಳಬೇಕಾದ ತಯಾರಿಯೇ ಇನ್ನೂ ಸಾಕಷ್ಟಿದೆ’ ಎಂದಿದ್ದಾರೆ.

ಎರಡನೇ ಭಾಗಕ್ಕಾಗಿ ನಾವು ಡಿಸೈನ್​ನಿಂದ ಪ್ರಾರಂಭಿಸಬೇಕಿದೆ. ಲೊಕೇಶನ್, ಸೆಟ್, ಕಾಸ್ಟ್ಯೂಮ್, ಪಾತ್ರಗಳು ಎಲ್ಲದರ ಡಿಸೈನ್ ಮಾಡಿ ಆ ನಂತರವಷ್ಟೆ ನಾವು ಚಿತ್ರೀಕರಣ ಆರಂಭ ಮಾಡಬೇಕಾಗುತ್ತದೆ. ಹಾಗಾಗಿ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುಂಚಿನ ಕೆಲಸವೇ ಸಾಕಷ್ಟಿದೆ. ನಟರನ್ನು ಸೆಟ್​ಗೆ ಕರೆತರುವಷ್ಟರಲ್ಲಿ ಇನ್ನೂ ಹೆಚ್ಚು ಸಮಯ ಹಿಡಿಯಲಿದೆ’ ಎಂದಿದ್ದಾರೆ ನಾಗ್ ಅಶ್ವಿನ್.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಜಪಾನ್​ನಿಂದ ಭಾರತಕ್ಕೆ ಬಂದ ಪ್ರಭಾಸ್ ಫ್ಯಾನ್ಸ್

‘ಕಲ್ಕಿ 2898 ಎಡಿ’ ಸಿನಿಮಾವನ್ನು ವೈಜಯಂತಿ ಮೂವೀಸ್ ನಿರ್ಮಾಣ ಮಾಡಿದ್ದು, ಸಿನಿಮಾಕ್ಕೆ ಸುಮಾರು 600 ಕೋಟಿ ಬಜೆಟ್ ಹೂಡಿಕೆ ಮಾಡಿದ್ದಾರೆ. ಇದು ಈವರೆಗಿನ ಅತಿ ಹೆಚ್ಚು ಬಜೆಟ್​ನ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾಣಿ ಸೇರಿದಂತೆ ಇನ್ನೂ ಹಲವು ಸ್ಟಾರ್ ನಟ-ನಟಿಯರಿದ್ದಾರೆ. ಸಿನಿಮಾದ ಮೊದಲ ಭಾಗವಷ್ಟೆ ಈಗ ಮುಗಿದಿದ್ದು, ಸಿನಿಮಾದ ಕತೆ ಅಪೂರ್ಣವಾಗಿದೆ. ಎರಡನೇ ಭಾಗ ಯಾವಾಗ ಬಿಡುಗಡೆ ಆಗಲಿದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?