AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕೂಡ ಒಡೆದ ಕುಟುಂಬದ ಮಗು’; ಟೀಕಿಸಿದವರಿಗೆ ನಾಗ ಚೈತನ್ಯ ಉತ್ತರ

ನಾಗ ಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು. ಆದರೆ, ಇದು ಇಬ್ಬರೂ ಸೇರಿ ತೆಗೆದುಕೊಂಡ ಪರಸ್ಪರ ಒಪ್ಪಿಗೆಯ ನಿರ್ಧಾರ ಎಂದು ನಾಗ ಚೈತನ್ಯ ಸ್ಪಷ್ಟಪಡಿಸಿದ್ದಾರೆ. ಅವರು ತಮ್ಮ ಹೊಸ ಸಂಬಂಧದ ಬಗ್ಗೆಯೂ ಮಾತನಾಡಿದ್ದು, ಸಮಂತಾ ಅವರ ಬಗ್ಗೆ ಗೌರವ ಇದೆ ಎಂದಿದ್ದಾರೆ.

‘ನಾನು ಕೂಡ ಒಡೆದ ಕುಟುಂಬದ ಮಗು’; ಟೀಕಿಸಿದವರಿಗೆ ನಾಗ ಚೈತನ್ಯ ಉತ್ತರ
ಸಮಂತಾ-ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Feb 08, 2025 | 11:56 AM

Share

ನಾಗ ಚೈತನ್ಯ ವಿಚ್ಛೇದನ ಬಗ್ಗೆ ಹಲವು ವದಂತಿಗಳು ಇವೆ. ಈ ವದಂತಿಗೆ ಇಬ್ಬರೂ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಇದು ಇಬ್ಬರೂ ಸೇರಿ ತೆಗೆದುಕೊಂಡ ನಿರ್ಧಾರ ಎಂದು ಹೇಳಿದರೂ ಅದನ್ನು ಯಾರೂ ಒಪ್ಪುತ್ತಿಲ್ಲ. ಈಗ ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಬೇರೆ ಜೀವನ ಕಟ್ಟಿಕೊಂಡಿದ್ದಾರೆ. ತಮ್ಮ ಸಂಬಂಧವನ್ನು ಮುರಿದುಕೊಳ್ಳುವುದಕ್ಕೂ ಮೊದಲು ಸಾವಿರ ಬಾರಿ ಯೋಚಿಸಿದ್ದಾಗಿ ನಾಗ ಚೈತನ್ಯ ಅವರು ಹೇಳಿದ್ದಾರೆ.

‘ರಾ ಟಾಕ್ಸ್ ವಿತ್ ವಿಕೆ ಪಾಡ್​ಕಾಸ್ಟ್’​ನಲ್ಲಿ ನಾಗ ಚೈತನ್ಯ ಅವರು ಮಾತನಾಡಿದ್ದಾರೆ. ‘ನಮ್ಮದೇ ಕಾರಣಗಳಿಂದ ನಾವು ದೂರ ಆಗಲು ನಿರ್ಧರಿಸಿದೆವು. ನಾವು ನಿರ್ಧಾರ ತೆಗೆದುಕೊಂಡ ಬಳಿಕವೂ ಒಬ್ಬರಿಗೊಬ್ಬರು ಗೌರವಿಸುತ್ತಿದ್ದೆವು. ನಾವು ನಮ್ಮದೇ ಜೀವನದಲ್ಲಿ ವಾಸಿಸುತ್ತಿದ್ದೇವೆ. ಇದಕ್ಕೂ ಹೆಚ್ಚಿನ ವಿವರಣೆ ಏನು ಬೇಕು ಎಂಬುದು ಅರ್ಥವಾಗುತ್ತಿಲ್ಲ. ಜನರು ಹಾಗೂ ಮಾಧ್ಯಮದವರು ಇದನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ. ನಾವು ಖಾಸಗಿತನಕ್ಕೆ ಗೌರವ ನೀಡಿ ಎಂದು ಕೋರಿದ್ದೆವು. ಆದರೆ, ಇದುವೇ ಹೆಡ್​ಲೈನ್ ಆಯ್ತು. ಗಾಸಿಪ್​ಗೆ ಎಡೆ ಮಾಟಿಕೊಟ್ಟಿತ್ತು, ಮನರಂಜನೆಯ ವಿಚಾರ ಆಯ್ತು’ ಎಂದು ಅವರು ಬೇಸರ ಹೊರಹಾಕಿದ್ದಾರೆ.

‘ನಾವಿಬ್ಬರೂ ನಮ್ಮದೇ ಜೀವನ ನಡೆಸುತ್ತಿದ್ದೇವೆ. ನನಗೆ ಮತ್ತೆ ಪ್ರೀತಿ ಸಿಕ್ಕಿತು. ನನಗೆ ಆ ಬಗ್ಗೆ ಖುಷಿ ಇದೆ. ನಾವಿಬ್ಬರೂ (ಶೋಭಿತಾ) ಪರಸ್ಪರ ಗೌರವಿಸುತ್ತೇವೆ’ ಎಂದು ನಾಗ ಚೈತನ್ಯ ಹೇಳಿದ್ದಾರೆ. ಸಮಂತಾ ಬಗ್ಗೆಯೂ ಸಾಕಷ್ಟು ಗೌರವ ಇದೆ ಎಂದು ಹೇಳಿದ್ದಾರೆ.

ನಾಗ ಚೈತನ್ಯ ತಂದೆ ನಾಗಾರ್ಜುನ ಕೂಡ ಡಿವೋರ್ಸ್ ಪಡೆದಿದ್ದರು. ಹೀಗಾಗಿ ಆ ನೋವು ಗೊತ್ತು ಎಂದಿದ್ದಾರೆ ನಾಗ ಚೈತನ್ಯ. ‘ಇದು ನನಗೆ ಸೆನ್ಸಿಟಿವ್ ವಿಚಾರ. ನಾನು ಕೂಡ ಒಡೆದು ಹೋದ ಕುಟುಂಬದಿಂದ ಬಂದವನು. ನಾನು ಕೂಡ ಒಡೆದ ಕುಟುಂಬದ ಮಗು. ನನಗೆ ಆ ನೋವು ಗೊತ್ತು. ಹೀಗಾಗಿ, ಸಾವಿರ ಬಾರಿ ನಾನು ಯೋಚಿಸಿ ನಿರ್ಧಾರ ತೆಗೆದುಕೊಂಡಿದ್ದೇವೆ. ಇದು ಮ್ಯೂಚುವಲ್ ನಿರ್ಧಾರ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಾಲಕೃಷ್ಣಗಾಗಿ ಸಿನಿಮಾ ಪ್ರೀ ರಿಲೀಸ್ ಅನ್ನೇ ಮುಂದೂಡಿದ ಅಲ್ಲು ಅರ್ಜುನ್, ನಾಗ ಚೈತನ್ಯ

ನಾಗ ಚೈತನ್ಯ ಹಾಗೂ ಸಮಂತಾ 2017ರಲ್ಲಿ ವಿವಾಹ ಆದರು. 2021ರಲ್ಲಿ ಇವರು ಬೇರೆ ಆದರು. ಈಗ ನಾಗ ಚೈತನ್ಯ ಶೋಭಿತಾನ ವಿವಾಹ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ