Big Breaking: ನೆರವೇರಿತು ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥ; ಹೇಗಿರುತ್ತದೆ ಸಮಂತಾ ಪ್ರತಿಕ್ರಿಯೆ?

ನಾಗ ಚೈತನ್ಯ ಹಾಗೂ ಸಮಂತಾ ಅವರದ್ದು ಮುಗಿದು ಹೋದ ಕಥೆ. ಇಬ್ಬರೂ ದೂರ ಆಗಿ ಕೆಲವು ವರ್ಷಗಳು ಕಳೆದಿವೆ. ಹೀಗಿರುವಾಗಲೇ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವರಿಸಲು ಸಿದ್ಧರಾಗಿದ್ದಾರೆ ಎಂದು ವರದಿ ಆಗಿತ್ತು. ಇದು ಈಗ ನಿಜವಾಗಿದೆ.

Big Breaking: ನೆರವೇರಿತು ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥ; ಹೇಗಿರುತ್ತದೆ ಸಮಂತಾ ಪ್ರತಿಕ್ರಿಯೆ?
ನಾಗ ಚೈತನ್ಯ-ಸಮಂತಾ
Follow us
|

Updated on:Aug 08, 2024 | 1:51 PM

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಪ್ರೀತಿಯಲ್ಲಿ ಇರೋ ವಿಚಾರ ಈಗ ಅಧಿಕೃತ ಆಗಿದೆ. ಇಬ್ಬರೂ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಕ್ಕಿನೇನಿ ನಾಗಾರ್ಜುನ ಅವರ ಬಲಕ್ಕೆ ಶೋಭಿತಾ ಹಾಗೂ ಎಡಕ್ಕೆ ನಾಗ ಚೈತನ್ಯ ಇದ್ದಾರೆ. ನಾಗ ಚೈತನ್ಯ ಅವರ ನಿವಾಸದಲ್ಲೇ ನಿಶ್ಚಿತಾರ್ಥ ನಡೆದಿದೆ. ಸಮಂತಾ ಪ್ರತಿಕ್ರಿಯೆ ಹೇಗೆ ಇರುತ್ತದೆ ಎನ್ನುವ ಕುತೂಹಲ ಮೂಡಿದೆ.

ಸಮಂತಾ ಹಾಗೂ ನಾಗ ಚೈತನ್ಯ ಅವರು ಹಲವು ವರ್ಷಗಳ ಕಾಲ ಪ್ರೀತಿಸಿ ಆ ಬಳಿಕ ಮದುವೆ ಆದರು. 2017ರಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತು. ನಾಲ್ಕೇ ವರ್ಷಕ್ಕೆ ಇವರ ಸಂಬಂಧ ಕೊನೆ ಆಯಿತು. 2021ರ ಅಕ್ಟೋಬರ್​ನಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ದೂರ ಆದರು. ಈಗ ನಾಗ ಚೈತನ್ಯ ಬೇರೆ ನಟಿಯ ಜೊತೆ ಹೊಸ ಬಾಳು ಆರಂಭಿಸುತ್ತಿದ್ದಾರೆ.

ನಾಗ ಚೈತನ್ಯ ಮನೆಯಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನೆರವೇರಿದೆ. ನಾಗ ಚೈತನ್ಯ ತಂದೆ ಅಕ್ಕಿನೇನಿ ನಾಗಾರ್ಜುನ ಅವರು ಈ ನಿಶ್ಚಿತಾರ್ಥದಿಂದ ಖುಷಿ ಆಗಿದ್ದಾರೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ನಿಶ್ಚಿತಾರ್ಥದ ಮತ್ತಷ್ಟು ಫೋಟೋಗಳು ಶೀಘ್ರವೇ ಹೊರ ಬೀಳೋ ಸಾಧ್ಯತೆ ಇದೆ.

ಇದನ್ನೂ ಓದಿ: ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ

ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿರೋ ಶೋಭಿತಾ ಅವರು ಈವರೆಗೆ ನಾಗ ಚೈತನ್ಯ ಜೊತೆ ತೆರೆ ಹಂಚಿಕೊಂಡಿಲ್ಲ. ಆದಾಗ್ಯೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂಬುದು ಇನ್ನೂ ರಿವೀಲ್ ಆಗಿಲ್ಲ. ಶೋಭಿತಾ ಹಾಗೂ ನಾಗ ಚೈತನ್ಯ ಅವರನ್ನು ಫ್ಯಾನ್ಸ್ ಶಫಿಸುತ್ತಿದ್ದಾರೆ. ಈ ಬಗ್ಗೆ ಸಮಂತಾ ಅವರ ಪ್ರತಿಕ್ರಿಯೆ ಯಾವ ರೀತಿಯಲ್ಲಿ ಇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:38 pm, Thu, 8 August 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್