AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ನೆರವೇರಿತು ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥ; ಹೇಗಿರುತ್ತದೆ ಸಮಂತಾ ಪ್ರತಿಕ್ರಿಯೆ?

ನಾಗ ಚೈತನ್ಯ ಹಾಗೂ ಸಮಂತಾ ಅವರದ್ದು ಮುಗಿದು ಹೋದ ಕಥೆ. ಇಬ್ಬರೂ ದೂರ ಆಗಿ ಕೆಲವು ವರ್ಷಗಳು ಕಳೆದಿವೆ. ಹೀಗಿರುವಾಗಲೇ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವರಿಸಲು ಸಿದ್ಧರಾಗಿದ್ದಾರೆ ಎಂದು ವರದಿ ಆಗಿತ್ತು. ಇದು ಈಗ ನಿಜವಾಗಿದೆ.

Big Breaking: ನೆರವೇರಿತು ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥ; ಹೇಗಿರುತ್ತದೆ ಸಮಂತಾ ಪ್ರತಿಕ್ರಿಯೆ?
ನಾಗ ಚೈತನ್ಯ-ಸಮಂತಾ
ರಾಜೇಶ್ ದುಗ್ಗುಮನೆ
|

Updated on:Aug 08, 2024 | 1:51 PM

Share

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಪ್ರೀತಿಯಲ್ಲಿ ಇರೋ ವಿಚಾರ ಈಗ ಅಧಿಕೃತ ಆಗಿದೆ. ಇಬ್ಬರೂ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಕ್ಕಿನೇನಿ ನಾಗಾರ್ಜುನ ಅವರ ಬಲಕ್ಕೆ ಶೋಭಿತಾ ಹಾಗೂ ಎಡಕ್ಕೆ ನಾಗ ಚೈತನ್ಯ ಇದ್ದಾರೆ. ನಾಗ ಚೈತನ್ಯ ಅವರ ನಿವಾಸದಲ್ಲೇ ನಿಶ್ಚಿತಾರ್ಥ ನಡೆದಿದೆ. ಸಮಂತಾ ಪ್ರತಿಕ್ರಿಯೆ ಹೇಗೆ ಇರುತ್ತದೆ ಎನ್ನುವ ಕುತೂಹಲ ಮೂಡಿದೆ.

ಸಮಂತಾ ಹಾಗೂ ನಾಗ ಚೈತನ್ಯ ಅವರು ಹಲವು ವರ್ಷಗಳ ಕಾಲ ಪ್ರೀತಿಸಿ ಆ ಬಳಿಕ ಮದುವೆ ಆದರು. 2017ರಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತು. ನಾಲ್ಕೇ ವರ್ಷಕ್ಕೆ ಇವರ ಸಂಬಂಧ ಕೊನೆ ಆಯಿತು. 2021ರ ಅಕ್ಟೋಬರ್​ನಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ದೂರ ಆದರು. ಈಗ ನಾಗ ಚೈತನ್ಯ ಬೇರೆ ನಟಿಯ ಜೊತೆ ಹೊಸ ಬಾಳು ಆರಂಭಿಸುತ್ತಿದ್ದಾರೆ.

ನಾಗ ಚೈತನ್ಯ ಮನೆಯಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನೆರವೇರಿದೆ. ನಾಗ ಚೈತನ್ಯ ತಂದೆ ಅಕ್ಕಿನೇನಿ ನಾಗಾರ್ಜುನ ಅವರು ಈ ನಿಶ್ಚಿತಾರ್ಥದಿಂದ ಖುಷಿ ಆಗಿದ್ದಾರೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ನಿಶ್ಚಿತಾರ್ಥದ ಮತ್ತಷ್ಟು ಫೋಟೋಗಳು ಶೀಘ್ರವೇ ಹೊರ ಬೀಳೋ ಸಾಧ್ಯತೆ ಇದೆ.

ಇದನ್ನೂ ಓದಿ: ಇಂದೇ ನಡೆಯಲಿದೆ ನಾಗ ಚೈತನ್ಯ ಹಾಗೂ ಶೋಭಿತಾ ನಿಶ್ಚಿತಾರ್ಥ? ಅಕ್ಕಿನೇನಿ ನಾಗಾರ್ಜುನ ಸಾರಥ್ಯ

ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿರೋ ಶೋಭಿತಾ ಅವರು ಈವರೆಗೆ ನಾಗ ಚೈತನ್ಯ ಜೊತೆ ತೆರೆ ಹಂಚಿಕೊಂಡಿಲ್ಲ. ಆದಾಗ್ಯೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂಬುದು ಇನ್ನೂ ರಿವೀಲ್ ಆಗಿಲ್ಲ. ಶೋಭಿತಾ ಹಾಗೂ ನಾಗ ಚೈತನ್ಯ ಅವರನ್ನು ಫ್ಯಾನ್ಸ್ ಶಫಿಸುತ್ತಿದ್ದಾರೆ. ಈ ಬಗ್ಗೆ ಸಮಂತಾ ಅವರ ಪ್ರತಿಕ್ರಿಯೆ ಯಾವ ರೀತಿಯಲ್ಲಿ ಇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:38 pm, Thu, 8 August 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ