AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ ಜೊತೆ ಕಾಡಿನಲ್ಲಿ ನಾಗ ಚೈತನ್ಯ ಸುತ್ತಾಟ? ಇಲ್ಲಿದೆ ಫೋಟೋ ಸಾಕ್ಷಿ

ನಾಗಪುರದ ತಿಪೇಶ್ವರ್ ವನ್ಯಜೀವಿಧಾಮಕ್ಕೆ ಶೋಭಿತಾ ಭೇಟಿ ನೀಡಿದ್ದರು. ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಕಾಡು ಸುತ್ತಾಡುತ್ತಿರುವ ಫೋಟೋ ಇದೆ. ಅದೇ ರೀತಿ ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ.

ಶೋಭಿತಾ ಜೊತೆ ಕಾಡಿನಲ್ಲಿ ನಾಗ ಚೈತನ್ಯ ಸುತ್ತಾಟ? ಇಲ್ಲಿದೆ ಫೋಟೋ ಸಾಕ್ಷಿ
ಶೋಭಿತಾ-ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Apr 23, 2024 | 7:25 AM

Share

ಸಮಂತಾ ರುತ್ ಪ್ರಭು (Samantha Ruth Prabhu) ಜೊತೆ ವಿಚ್ಛೇದನ ಪಡೆದ ನಂತರ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ, ಇದನ್ನು ಈ ಜೋಡಿ ಅಲ್ಲಗಳೆಯುತ್ತಲೇ ಬಂದಿದೆ. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್ ಎಂದು ಇವರು ಹೇಳಿಕೊಂಡಿದ್ದಿದೆ. ಈಗ ಇವರು ಪೋಸ್ಟ್ ಮಾಡಿರೋ ಫೋಟೋ ಒಂದು ವೈರಲ್ ಆಗಿದೆ. ಇಬ್ಬರೂ ಒಂದೇ ಲೊಕೇಷನ್​ನಿಂದ ಫೋಟೋ ಪೋಸ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲವು ಸಮಯದ ಹಿಂದೆ ನಾಗಪುರದ ತಿಪೇಶ್ವರ್ ವನ್ಯಜೀವಿಧಾಮಕ್ಕೆ ಶೋಭಿತಾ ಭೇಟಿ ನೀಡಿದ್ದರು. ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಕಾಡು ಸುತ್ತಾಡುತ್ತಿರುವ ಫೋಟೋ ಇದೆ. ಅದೇ ರೀತಿ ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ.

ಈ ಮೊದಲು ನಾಗ ಚೈತನ್ಯ ಹಾಗೂ ಶೋಭಿತಾ ಲಂಡನ್​ಗೆ ತೆರಳಿದ್ದರು. ಅಲ್ಲಿ ಒಂದು ಹೋಟೆಲ್​ನಲ್ಲಿ ಇವರು ಊಟಕ್ಕೆ ತೆರಳಿದ್ದರು. ಅಲ್ಲಿಯ ಶೆಫ್ ನಾಗ ಚೈತನ್ಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಹಿಂಭಾಗದಲ್ಲಿ ಶೋಭಿತಾ ಇದ್ದರು. ಇದರಿಂದ ಇವರ ಡೇಟಿಂಗ್ ಚಿಚಾರ ಖಚಿತ ಆಗಿತ್ತು.

ನಾಗ ಚೈತನ್ಯ ಹಾಗೂ ಶೋಭಿತಾ ಡೇಟಿಂಗ್ ಮಾಡುತ್ತಿದ್ದಾರೆ ಅನ್ನೋದು ಸದ್ಯಕ್ಕೆ ವದಂತಿ ಮಾತ್ರ. ಇದನ್ನು ಸಂಪೂರ್ಣವಾಗಿ ಖಚಿತಪಡಿಸೋ ಫೋಟೋಗಳು ಲಭ್ಯವಾಗಿಲ್ಲ. ಸಮಂತಾ ಜೊತೆ ಬ್ರೇಕಪ್ ಆದ ಬಳಿಕ ಅವರು ಶೋಭಿತಾ ಜೊತೆ ಕ್ಲೋಸ್ ಆದರು ಎನ್ನಲಾಗಿದೆ. ಇದು ಸಮಂತಾ ಅಭಿಮಾನಿಗಳಿಗೆ ಖುಷಿ ನೀಡಿಲ್ಲ. ಅವರು ನಾಗ ಚೈತನ್ಯ ಅವರನ್ನು ತೆಗಳುತ್ತಿದ್ದಾರೆ.

ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಒಂದೊಮ್ಮೆ ನಾಗ ಚೈತನ್ಯ ಹಾಗೂ ಶೋಭಿತಾ ಮತ್ತೆ ಡೇಟಿಂಗ್ ಮಾಡುತ್ತಿರುವ ಚಿಚಾರ ನಿಜವಾಗಿದ್ದೇ ಹೌದಾದಲ್ಲಿ ಸಮಂತಾ ಫ್ಯಾನ್ಸ್ ಸಿಟ್ಟಿಗೇಳೋದ ಪಕ್ಕಾ. ಈಗ ಅವರು ಫೋಟೋ ಪೋಸ್ಟ್ ಮಾಡಿದಾಗೆಲ್ಲ ಸಮಂತಾ ಅಭಿಮಾನಿಗಳು ಕಮೆಂಟ್​ಗಳ ಸುರಿಮಳೆ ಸುರಿಸುತ್ತಾರೆ. ‘ಸಮಂತಾ ಅವರನ್ನು ಬಿಟ್ಟಿದ್ದೇಕೆ’ ಎಂದು ಪ್ರಶ್ನೆ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು