AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವಿಚ್ಛೇದನದ ಬಳಿಕ ಮೊದಲ ಬಾರಿಗೆ ಸಮಂತಾರನ್ನು ಹೊಗಳಿದ ನಾಗ ಚೈತನ್ಯ

ನಾಗ ಚೈತನ್ಯ ಹಾಗು ಸಮಂತಾ ಒಟ್ಟಾಗಿ ನಟಿಸಿದ ಬಹುತೇಕ ಸಿನಿಮಾಗಳು ಹಿಟ್​ ಆಗಿವೆ. ಇವರ ಜೋಡಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೇ ಅಭಿಪ್ರಾಯವನ್ನು ನಾಗ ಚೈತನ್ಯ ಹೊಂದಿದ್ದಾರೆ.

Samantha: ವಿಚ್ಛೇದನದ ಬಳಿಕ ಮೊದಲ ಬಾರಿಗೆ ಸಮಂತಾರನ್ನು ಹೊಗಳಿದ ನಾಗ ಚೈತನ್ಯ
ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Jan 15, 2022 | 1:16 PM

Share

ಚಿತ್ರರಂಗದ (Cinema Industry) ಪಾಲಿಗೆ ವಿಚ್ಛೇದನ ಎಂಬುದು ಒಂದು ಸಾಮಾನ್ಯ ವಿಚಾರ. ಸಾಕಷ್ಟು ಸೆಲೆಬ್ರಿಗಳು ಮದುವೆ ಆಗಿ ಕೆಲವೇ ವರ್ಷಗಳಲ್ಲಿ ವಿಚ್ಛೇದನ ಪಡೆದ ಉದಾಹರಣೆ ಸಾಕಷ್ಟಿದೆ. ವಿಶೇಷ ಎಂದರೆ, ಮದುವೆ ಬಳಿಕವೂ ಅವರು ಒಟ್ಟಾಗಿ ಹಲವು ಕಡೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಹುಟ್ಟುಹಬ್ಬದ ದಿನ ವಿಶ್​ ಮಾಡುತ್ತಾರೆ. ಪತಿಯ ಚಿತ್ರಕ್ಕೆ ಹೆಂಡತಿಯೇ ಬಂಡವಾಳ ಹೂಡಿದ ಉದಾಹರಣೆ ಕೂಡ ಸಾಕಷ್ಟಿದೆ. ಆದರೆ, ನಾಗ ಚೈತನ್ಯ (Naga Chaitanya) ಹಾಗೂ ಸಮಂತಾ (Samantha)ವಿಚ್ಛೇದನ ಪಡೆದ ನಂತರದಲ್ಲಿ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಪರಸ್ಪರ ವಿಶ್​ ಮಾಡಿಕೊಂಡಿಲ್ಲ. ನಾಗ ಚೈತನ್ಯ ಜನ್ಮದಿನದಂದು ಸಮಂತಾ ವಿಶ್​ ಮಾಡಲಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿರಲಿಲ್ಲ. ಇತ್ತೀಚೆಗೆ ನಾಗ ಚೈತನ್ಯ ಅವರು ವಿಚ್ಛೇದನದ ಬಗ್ಗೆ ಮೌನ ಮುರಿದಿದ್ದರು. ಈಗ ಸಮಂತಾ ಬಗ್ಗೆ ಅವರು ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಈ ಸುದ್ದಿ ಸಾಕಷ್ಟು ಚರ್ಚೆ ಆಗುತ್ತಿದೆ.

ಸಮಂತಾ ಹಾಗೂ ನಾಗ ಚೈತನ್ಯ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಪ್ರೀತಿ ಹುಟ್ಟಿದ್ದು ಕೂಡ ಸಿನಿಮಾ ಸೆಟ್​ನಲ್ಲೇ. ನಾಗ ಚೈತನ್ಯ ಹಾಗು ಸಮಂತಾ ಒಟ್ಟಾಗಿ ನಟಿಸಿದ ಬಹುತೇಕ ಸಿನಿಮಾಗಳು ಹಿಟ್​ ಆಗಿವೆ. ಇವರ ಜೋಡಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೇ ಅಭಿಪ್ರಾಯವನ್ನು ನಾಗ ಚೈತನ್ಯ ಹೊಂದಿದ್ದಾರೆ.

ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಸಿನಿಮಾ ಜನವರಿ 14ರಂದು ತೆರೆಗೆ ಬಂದಿದೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಕೆಲ ಬಾಲಿವುಡ್​ ಮೀಡಿಯಾಗಳ ಜತೆ ನಾಗ ಚೈತನ್ಯ ಮಾತನಾಡಿದ್ದಾರೆ. ಈ ವೇಳೆ ಆ ಮಾಧ್ಯಮಗಳು ‘ನೀವು ತೆರೆಮೇಲೆ ಯಾವ ನಟಿಯ ಜತೆ ಉತ್ತಮ ಕೆಮಿಸ್ಟ್ರಿ’ ಹೊಂದಿದ್ದೀರಿ ಎನ್ನುವ ಪ್ರಶ್ನೆ ಎದುರಾಯಿತು. ಇದಕ್ಕೆ ನಾಗ ಚೈತನ್ಯ ನೀಡಿದ ಉತ್ತರ ನಿಜಕ್ಕೂ ಅಚ್ಚರಿ ಮೂಡಿಸಿತ್ತು. ಏಕೆಂದರೆ, ಅವರು ತೆಗೆದುಕೊಂಡಿದ್ದು ಸಮಂತಾ ಅವರ ಹೆಸರನ್ನು! ಸಮಂತಾ ಬಗ್ಗೆ ಅವರು ಹೇಳಿದ ಒಳ್ಳೆಯ ಮಾತನ್ನು ಕೇಳಿ ಎಲ್ಲರೂ ಅಚ್ಚರಿ ಹೊರ ಹಾಕಿದ್ದಾರೆ.

ಇತ್ತೀಚೆಗೆ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತನಾಡಿದ್ದರು. ಈ ವೇಳೆ ‘ಅವಳು ಖುಷಿಯಾಗಿದ್ದಾಳೆ ಎಂದರೆ ನನಗೂ ಸಂತೋಷವೇ’ ಎನ್ನುವ ಮಾತನ್ನು ನಾಗ ಚೈತನ್ಯ ಹೇಳಿದ್ದರು.

ಇದನ್ನೂ ಓದಿ: ಚಿತ್ರರಂಗದ ಅನಿಶ್ಚಿತತೆ ನಡುವೆ ಹೊಸ ಸಾಹಸಕ್ಕೆ ಮುಂದಾದ ಅಕ್ಕಿನೇನಿ ನಾಗಾರ್ಜುನ-ನಾಗ ಚೈತನ್ಯ

Samantha: ‘ಸಮಂತಾ ಖುಷಿಯಾಗಿದ್ದರೆ ನನಗೂ ಖುಷಿ’; ಬ್ರೇಕಪ್ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಾಗ ಚೈತನ್ಯ

Follow Us
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ