AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ

ಡೀಪ್‌ಫೇಕ್ ಮತ್ತು ಸುಳ್ಳು ಸುದ್ದಿಗಳು ನಟ ನಾಗ ಚೈತನ್ಯ ಅವರ ಗೌರವ, ಘನತೆ, ಖಾಸಗಿತನ ಮತ್ತು ಸಾರ್ವಜನಿಕ ಇಮೇಜ್‌ಗೆ ತೀವ್ರ ಧಕ್ಕೆ ತಂದಿವೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಬಳಿಕ ಕೆಲವು ಲಿಂಕ್‌ಗಳನ್ನು ಇಂಟರ್ನೆಟ್‌ನಿಂದ ತೆಗೆದುಹಾಕಲಾಗಿದೆ.

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ
Naga Chaitanya, Samantha
ಮದನ್​ ಕುಮಾರ್​
|

Updated on: May 29, 2026 | 10:03 PM

Share

ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಹೆಸರು, ಫೋಟೋಗಳು, ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ ಹಾಗೂ ಅಶ್ಲೀಲ ಕಂಟೆಂಟ್‌ಗಳ ಅನಧಿಕೃತ ಬಳಕೆಯನ್ನು ತಡೆಯಲು ಅವರು ಮೊಕದ್ದಮೆ ಹೂಡಿದ್ದಾರೆ. ಪ್ರಮುಖವಾಗಿ, ಅವರು ಮಾಜಿ ಪತ್ನಿ ಸಮಂತಾ (Samantha) ರುತ್ ಪ್ರಭುಗೆ ವಂಚಿಸಿ, ಆಕೆಯ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಮತ್ತು ನಿಂದನಾತ್ಮಕ ಸುದ್ದಿಗಳ ವಿರುದ್ಧ ನಾಗ ಚೈತನ್ಯ ಅವರ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ನಾಗ ಚೈತನ್ಯ ಪರ ಹಿರಿಯ ವಕೀಲ ವೈಭವ್ ಗಗ್ಗರ್ ವಾದ ಮಂಡಿಸಿ, ಹಲವು ವೆಬ್‌ಸೈಟ್‌ಗಳು ಹಾಗೂ ಯೂಟ್ಯೂಬ್ ಚಾನೆಲ್‌ಗಳು ಹೆಚ್ಚಿನ ವೀವ್ಸ್ ಮತ್ತು ಹಣ ಗಳಿಸುವ ಉದ್ದೇಶಕ್ಕಾಗಿ ನಟನ ಹೆಸರನ್ನು ಅಶ್ಲೀಲ ಪದಗಳೊಂದಿಗೆ ಬಳಸಿ ಆಕ್ಷೇಪಾರ್ಹ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿವೆ ಎಂದು ಕೋರ್ಟ್ ಗಮನಕ್ಕೆ ತಂದರು.

‘ನಾಗ ಚೈತನ್ಯ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಎಐ ತಂತ್ರಜ್ಞಾನ ಮತ್ತು ಧ್ವನಿ ನಕಲು ಮಾಡಿ ಸುಳ್ಳು ಹಾಗೂ ವಿಕೃತ ವೀಡಿಯೊಗಳನ್ನು ಹರಿಬಿಡಲಾಗುತ್ತಿದೆ. ಮುಖ್ಯವಾಗಿ ಮಾಜಿ ಪತ್ನಿ ಸಮಂತಾ ಅವರಿಗೆ ನಾಗ ಚೈತನ್ಯ ವಂಚಿಸಿದ್ದಾರೆ ಮತ್ತು ಅವರ ಕೆರಿಯರ್ ಹಾಳು ಮಾಡಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಇದು ಟ್ರೋಲಿಂಗ್ ಮತ್ತು ನಿಂದನೆಯಾಗಿದೆ, ಇದನ್ನು ವಿಮರ್ಶೆ ಎನ್ನಲು ಸಾಧ್ಯವಿಲ್ಲ’ ಎಂದು ವಕೀಲರು ವಾದಿಸಿದರು.

ಅಷ್ಟೇ ಅಲ್ಲದೆ, ನಾಗ ಚೈತನ್ಯ ಅವರ ಅನುಮತಿಯಿಲ್ಲದೆ ಅವರ ಮುಖ ಮತ್ತು ಹೆಸರನ್ನು ಬಳಸಿ ಟಿ-ಶರ್ಟ್ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಅನಧಿಕೃತ ಲಿಸ್ಟಿಂಗ್‌ಗಳನ್ನು ಸಹ ಕೋರ್ಟ್‌ಗೆ ತೋರಿಸಲಾಯಿತು. ಈ ಹಿಂದೆ ನಾಗ ಚೈತನ್ಯ ಅವರ ತಂದೆ, ಹಿರಿಯ ನಟ ನಾಗಾರ್ಜುನ ಅವರ ವ್ಯಕ್ತಿತ್ವದ ಹಕ್ಕುಗಳಿಗೂ ಇದೇ ನ್ಯಾಯಾಲಯ ರಕ್ಷಣೆ ನೀಡಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಲಾಯಿತು.

ಇದನ್ನೂ ಓದಿ: ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್

ವಾದವನ್ನು ಆಲಿಸಿದ ನ್ಯಾಯಾಧೀಶರು, ‘ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಸಾರ್ವಜನಿಕರ ಸೂಕ್ಷ್ಮ ಅವಲೋಕನಕ್ಕೆ ಒಳಗಾಗುವುದು ಸಹಜ. ನೀವು ಇತರರಿಗಿಂತ ಹೆಚ್ಚು ಸಾಫ್ಟ್ ಟಾರ್ಗೆಟ್ ಆಗುತ್ತೀರಿ ನಿಜ, ಆದರೆ ಅದಕ್ಕೂ ಕೆಲವು ಮಿತಿಗಳಿವೆ’ ಎಂದು ಅಭಿಪ್ರಾಯಪಟ್ಟರು. ಡಿಜಿಟಲ್ ಲೋಕದಲ್ಲಿ ಪ್ರತಿದಿನ ಇಂತಹ ಆಕ್ಷೇಪಾರ್ಹ ಕಂಟೆಂಟ್‌ಗಳು ಸೃಷ್ಟಿಯಾಗುತ್ತಿರುವುದರಿಂದ ಭವಿಷ್ಯದಲ್ಲೂ ಇವುಗಳನ್ನು ತಡೆಯಲು ಮುನ್ನೆಚ್ಚರಿಕಾ ನಿಷೇಧಾಜ್ಞೆ ನೀಡಬೇಕು ಎಂದು ಚೈತನ್ಯ ಪರ ವಕೀಲರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ