AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಜೊತೆಗಿನ ಕೊನೆಯ ಫೋಟೋವನ್ನೂ ಡಿಲೀಟ್ ಮಾಡಿದ ನಾಗ ಚೈತನ್ಯ

ನಾಗ ಚೈತನ್ಯ ಅವರು ಹೊಸ ಜೀವನ ಆರಂಭಿಸುತ್ತಿದ್ದಾರೆ. ಶೋಭಿತಾ ಜೊತೆ ಅವರ ಮದುವೆ ನೆರವೇರಲಿದೆ. ಈ ಸಂದರ್ಭದಲ್ಲಿ ಮಾಜಿ ಪತ್ನಿಯ ಒಂದು ಫೋಟೋ ಅವರ ಸೋಶಿಯಲ್ ಮೀಡಿಯಾದಲ್ಲಿ ಹಾಗೆಯೇ ಉಳಿದುಕೊಂಡಿತ್ತು. ಅದನ್ನು ಡಿಲೀಟ್ ಮಾಡಿ ಎಂದು ಜನರು ಒತ್ತಾಯಿಸಿದ್ದರು. ಹಾಗಾಗಿ ನಾಗ ಚೈತನ್ಯ ಅವರು ಆ ಫೋಟೋ ಡಿಲೀಟ್​ ಮಾಡಿದ್ದಾರೆ.

ಸಮಂತಾ ಜೊತೆಗಿನ ಕೊನೆಯ ಫೋಟೋವನ್ನೂ ಡಿಲೀಟ್ ಮಾಡಿದ ನಾಗ ಚೈತನ್ಯ
ಸಮಂತಾ, ನಾಗ ಚೈತನ್ಯ
ಮದನ್​ ಕುಮಾರ್​
|

Updated on: Oct 27, 2024 | 9:40 PM

Share

ಪ್ರೀತಿಸಿ ಮದುವೆ ಆಗಿದ್ದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಘೋಷಿಸುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಆದರೆ ಅಂಥದ್ದೊಂದು ಶಾಕಿಂಗ್ ಸುದ್ದಿ ಬಂದಾಗ ಬಹುತೇಕರಿಗೆ ನಂಬಲು ಸಾಧ್ಯವಾಗಲೇ ಇಲ್ಲ. ಈಗ ಅದೆಲ್ಲ ಹಳೇ ವಿಷಯ ಆಗಿದೆ. ಹಾಗಿದ್ದರೂ ಕೂಡ ಸಮಂತಾ ಮತ್ತು ನಾಗ ಚೈತನ್ಯ ಅವರ ಬಗೆಗಿನ ಚರ್ಚೆ ನಿಂತಿಲ್ಲ. ಶೀಘ್ರದಲ್ಲೇ ನಾಗ ಚೈತನ್ಯ ಅವರು ಎರಡನೇ ಮದುವೆ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇದ್ದ ಮಾಜಿ ಪತ್ನಿಯ ಕೊನೇ ಫೋಟೋವನ್ನು ಡಿಲೀಟ್​ ಮಾಡಿ ಸುದ್ದಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ಅವರು ಡಿವೋರ್ಸ್​ ಪಡೆದ ನಂತರ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇದ್ದ ಎಲ್ಲ ಫೋಟೋಗಳನ್ನೂ ಡಿಲೀಟ್ ಮಾಡಿದರು. ಆದರೆ ಸಮಂತಾ ಅವರಿಗೆ ಸಂಬಂಧಿಸಿ 3 ಪೋಸ್ಟ್​ಗಳು ನಾಗ ಚೈತನ್ಯ ಅವರ ಇನ್​ಸ್ಟಾಗ್ರಾಮ್​ ವಾಲ್​ನಲ್ಲಿ ಹಾಗೆಯೇ ಇತ್ತು. ಒಂದು- ವಿಚ್ಛೇದನ ಘೋಷಿಸಿದ್ದು, ಎರಡು- ಮಜಿಲಿ ಸಿನಿಮಾದ ಪೋಸ್ಟರ್​, ಮೂರು- ಸಮಂತಾ ಹಾಗೂ ನಾಗ ಚೈತನ್ಯ ಜೊತೆಯಾಗಿ ರೇಸ್​ ಕಾರ್​ ಜೊತೆ ನಿಂತಿದ್ದ ಫೋಟೋ.

ಮೊದಲ ಎರಡು ಫೋಟೋವನ್ನು ನಂತರದ ದಿನಗಳಲ್ಲಿ ನಾಗ ಚೈತನ್ಯ ಅವರು ಡಿಲೀಟ್ ಮಾಡಿದರು. ಆದರೆ ರೇಸ್​ ಕಾರ್​ ಜೊತೆ ನಿಂತಿದ್ದ ಫೋಟೋವನ್ನು ಅವರು ಡಿಲೀಟ್ ಮಾಡಿರಲಿಲ್ಲ. ಈ ವಿಚಾರವನ್ನು ಇಟ್ಟುಕೊಂಡು ಇತ್ತೀಚೆಗೆ ಸಮಂತಾ ಅವರ ಅಭಿಮಾನಿಗಳು ನಾಗ ಚೈತನ್ಯಗೆ ಕ್ಲಾಸ್ ತೆಗೆದುಕೊಂಡಿದ್ದರು. ‘ಆ ಫೋಟೋವನ್ನು ಡಿಲೀಟ್ ಮಾಡಿ’ ಎಂದು ಒತ್ತಾಯಿಸಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಶೋಭಿತಾ ಜೊತೆ ಮದುವೆ ಆಗಲಿರುವ ನಾಗ ಚೈತನ್ಯ ಅವರು ಮಾಜಿ ಪತ್ನಿಯ ಆ ಕಟ್ಟಕಡೆಯ ಫೋಟೋವನ್ನು ಈಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಸಿಟಾಡೆಲ್: ಹನಿ ಬನಿ’ ಟ್ರೇಲರ್​ನಲ್ಲಿ ಸಮಂತಾ, ವರುಣ್ ಧವನ್ ಆ್ಯಕ್ಷನ್ ಅಬ್ಬರ

ಇತ್ತೀಚೆಗೆ ಕೊಂಡ ಸುರೇಖಾ ಅವರು ಸಮಂತಾ ಮತ್ತು ನಾಗಾರ್ಜುನ ಅವರ ಕುಟುಂಬದ ಬಗ್ಗೆ ಕೆಟ್ಟದಾಗಿ ಹೇಳಿಕೆಗಳನ್ನು ನೀಡಿದ್ದರು. ಆ ವಿಚಾರವನ್ನು ಖಂಡಿಸುವ ಸಲುವಾಗಿ ನಾಗ ಚೈತನ್ಯ ಅವರು ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ‘ನನ್ನ ಮಾಜಿ ಪತ್ನಿ’ ಎಂಬ ಪದ ಬಳಕೆ ಮಾಡಿದ್ದರು. ಈ ರೀತಿ ಹೇಳುವ ಬದಲು ನೇರವಾಗಿ ‘ಸಮಂತಾ’ ಅಂತ ಹೇಳಬಹುದಿತ್ತು ಎಂದು ಕೂಡ ನೆಟ್ಟಿಗರು ನಾಗ ಚೈತನ್ಯಗೆ ಚಾಟಿ ಬೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ