AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಜೊತೆಗಿನ ಕೊನೆಯ ಫೋಟೋವನ್ನೂ ಡಿಲೀಟ್ ಮಾಡಿದ ನಾಗ ಚೈತನ್ಯ

ನಾಗ ಚೈತನ್ಯ ಅವರು ಹೊಸ ಜೀವನ ಆರಂಭಿಸುತ್ತಿದ್ದಾರೆ. ಶೋಭಿತಾ ಜೊತೆ ಅವರ ಮದುವೆ ನೆರವೇರಲಿದೆ. ಈ ಸಂದರ್ಭದಲ್ಲಿ ಮಾಜಿ ಪತ್ನಿಯ ಒಂದು ಫೋಟೋ ಅವರ ಸೋಶಿಯಲ್ ಮೀಡಿಯಾದಲ್ಲಿ ಹಾಗೆಯೇ ಉಳಿದುಕೊಂಡಿತ್ತು. ಅದನ್ನು ಡಿಲೀಟ್ ಮಾಡಿ ಎಂದು ಜನರು ಒತ್ತಾಯಿಸಿದ್ದರು. ಹಾಗಾಗಿ ನಾಗ ಚೈತನ್ಯ ಅವರು ಆ ಫೋಟೋ ಡಿಲೀಟ್​ ಮಾಡಿದ್ದಾರೆ.

ಸಮಂತಾ ಜೊತೆಗಿನ ಕೊನೆಯ ಫೋಟೋವನ್ನೂ ಡಿಲೀಟ್ ಮಾಡಿದ ನಾಗ ಚೈತನ್ಯ
ಸಮಂತಾ, ನಾಗ ಚೈತನ್ಯ
ಮದನ್​ ಕುಮಾರ್​
|

Updated on: Oct 27, 2024 | 9:40 PM

Share

ಪ್ರೀತಿಸಿ ಮದುವೆ ಆಗಿದ್ದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಘೋಷಿಸುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಆದರೆ ಅಂಥದ್ದೊಂದು ಶಾಕಿಂಗ್ ಸುದ್ದಿ ಬಂದಾಗ ಬಹುತೇಕರಿಗೆ ನಂಬಲು ಸಾಧ್ಯವಾಗಲೇ ಇಲ್ಲ. ಈಗ ಅದೆಲ್ಲ ಹಳೇ ವಿಷಯ ಆಗಿದೆ. ಹಾಗಿದ್ದರೂ ಕೂಡ ಸಮಂತಾ ಮತ್ತು ನಾಗ ಚೈತನ್ಯ ಅವರ ಬಗೆಗಿನ ಚರ್ಚೆ ನಿಂತಿಲ್ಲ. ಶೀಘ್ರದಲ್ಲೇ ನಾಗ ಚೈತನ್ಯ ಅವರು ಎರಡನೇ ಮದುವೆ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇದ್ದ ಮಾಜಿ ಪತ್ನಿಯ ಕೊನೇ ಫೋಟೋವನ್ನು ಡಿಲೀಟ್​ ಮಾಡಿ ಸುದ್ದಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ಅವರು ಡಿವೋರ್ಸ್​ ಪಡೆದ ನಂತರ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇದ್ದ ಎಲ್ಲ ಫೋಟೋಗಳನ್ನೂ ಡಿಲೀಟ್ ಮಾಡಿದರು. ಆದರೆ ಸಮಂತಾ ಅವರಿಗೆ ಸಂಬಂಧಿಸಿ 3 ಪೋಸ್ಟ್​ಗಳು ನಾಗ ಚೈತನ್ಯ ಅವರ ಇನ್​ಸ್ಟಾಗ್ರಾಮ್​ ವಾಲ್​ನಲ್ಲಿ ಹಾಗೆಯೇ ಇತ್ತು. ಒಂದು- ವಿಚ್ಛೇದನ ಘೋಷಿಸಿದ್ದು, ಎರಡು- ಮಜಿಲಿ ಸಿನಿಮಾದ ಪೋಸ್ಟರ್​, ಮೂರು- ಸಮಂತಾ ಹಾಗೂ ನಾಗ ಚೈತನ್ಯ ಜೊತೆಯಾಗಿ ರೇಸ್​ ಕಾರ್​ ಜೊತೆ ನಿಂತಿದ್ದ ಫೋಟೋ.

ಮೊದಲ ಎರಡು ಫೋಟೋವನ್ನು ನಂತರದ ದಿನಗಳಲ್ಲಿ ನಾಗ ಚೈತನ್ಯ ಅವರು ಡಿಲೀಟ್ ಮಾಡಿದರು. ಆದರೆ ರೇಸ್​ ಕಾರ್​ ಜೊತೆ ನಿಂತಿದ್ದ ಫೋಟೋವನ್ನು ಅವರು ಡಿಲೀಟ್ ಮಾಡಿರಲಿಲ್ಲ. ಈ ವಿಚಾರವನ್ನು ಇಟ್ಟುಕೊಂಡು ಇತ್ತೀಚೆಗೆ ಸಮಂತಾ ಅವರ ಅಭಿಮಾನಿಗಳು ನಾಗ ಚೈತನ್ಯಗೆ ಕ್ಲಾಸ್ ತೆಗೆದುಕೊಂಡಿದ್ದರು. ‘ಆ ಫೋಟೋವನ್ನು ಡಿಲೀಟ್ ಮಾಡಿ’ ಎಂದು ಒತ್ತಾಯಿಸಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಶೋಭಿತಾ ಜೊತೆ ಮದುವೆ ಆಗಲಿರುವ ನಾಗ ಚೈತನ್ಯ ಅವರು ಮಾಜಿ ಪತ್ನಿಯ ಆ ಕಟ್ಟಕಡೆಯ ಫೋಟೋವನ್ನು ಈಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಸಿಟಾಡೆಲ್: ಹನಿ ಬನಿ’ ಟ್ರೇಲರ್​ನಲ್ಲಿ ಸಮಂತಾ, ವರುಣ್ ಧವನ್ ಆ್ಯಕ್ಷನ್ ಅಬ್ಬರ

ಇತ್ತೀಚೆಗೆ ಕೊಂಡ ಸುರೇಖಾ ಅವರು ಸಮಂತಾ ಮತ್ತು ನಾಗಾರ್ಜುನ ಅವರ ಕುಟುಂಬದ ಬಗ್ಗೆ ಕೆಟ್ಟದಾಗಿ ಹೇಳಿಕೆಗಳನ್ನು ನೀಡಿದ್ದರು. ಆ ವಿಚಾರವನ್ನು ಖಂಡಿಸುವ ಸಲುವಾಗಿ ನಾಗ ಚೈತನ್ಯ ಅವರು ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ‘ನನ್ನ ಮಾಜಿ ಪತ್ನಿ’ ಎಂಬ ಪದ ಬಳಕೆ ಮಾಡಿದ್ದರು. ಈ ರೀತಿ ಹೇಳುವ ಬದಲು ನೇರವಾಗಿ ‘ಸಮಂತಾ’ ಅಂತ ಹೇಳಬಹುದಿತ್ತು ಎಂದು ಕೂಡ ನೆಟ್ಟಿಗರು ನಾಗ ಚೈತನ್ಯಗೆ ಚಾಟಿ ಬೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?