Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ.

Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ
ನಾಗ ಚೈತನ್ಯ
Follow us
|

Updated on: Jun 14, 2023 | 7:41 AM

ನಾಗ ಚೈತನ್ಯ (Naga Chaitanya) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಕೊಟ್ಟಿದೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ಯೋಚಿಸಬೇಕಾದ ಅನಿವಾರ್ಯತೆ ಮೂಡಿದೆ. ಈಗ ನಾಗ ಚೈತನ್ಯ ಅವರು ಗೊಂದಲದಲ್ಲಿದ್ದಾರೆ ಎಂದು ವರದಿ ಆಗಿದೆ. ಮುಂದೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ವರದಿಗಳು ಹರಿದಾಡಿವೆ. ಈ ಬೆಳವಣಿಗೆ ನಾಗ ಚೈತನ್ಯ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಈ ಚಿತ್ರದಿಂದ ಅವರಿಗೆ ಹೀನಾಯ ಸೋಲಾಯಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ. ಈ ಚಿತ್ರ ಕೂಡ ಸೋಲು ಕಂಡಿತು. ಈಗ ನಾಗ ಚೈತನ್ಯ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಅವರು ಮತ್ತೊಮ್ಮೆ ಎಲ್ಲವನ್ನೂ ಪರಾಮರ್ಶಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಚಂದು ಮೊಂಡೇತಿ ಹಾಗೂ ರಾಹುಲ್ ಸಂಕ್ರಿತ್ಯಾನ್ ಜೊತೆ ನಾಗ ಚೈತನ್ಯ ಒಂದೊಂದು ಸಿನಿಮಾ ಮಾಡಬೇಕಿದೆ. ಚಂದು ಅವರು ಗುಜರಾತ್​​ನಲ್ಲಿ ನಡೆದ ನೈಜ ಘಟನೆ ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ. ಗೀತಾ ಆರ್ಟ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ನಾಗ ಚೈತನ್ಯ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಸ್ಕ್ರಿಪ್ಟ್ ಸಿದ್ಧವಾಗಿಲ್ಲ.

ರಾಹುಲ್ ಈಗಾಗಲೇ ಸ್ಕ್ರಿಪ್ಟ್ ಸಿದ್ಧಪಡಿಸಿ ಇಟ್ಟಿದ್ದಾರೆ. ಆದರೆ, ನಾಗ ಚೈತನ್ಯ ಅವರು ಯಾಕೋ ಈ ಚಿತ್ರದ ಬಗ್ಗೆ ಅಷ್ಟಾಗಿ ಒಲವು ತೋರಿಸುತ್ತಿಲ್ಲ. ಈಗ ಎರಡು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲು ಕಂಡಿರುವುದರಿಂದ ನಾಗ ಚೈತನ್ಯ ಸಾಕಷ್ಟು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Naga Chaitanya: ಸೋತು ಸುಣ್ಣವಾಗಿದ್ದ ನಾಗ ಚೈತನ್ಯಗೂ ಬಂತು ಒಳ್ಳೆಯ ಟೈಮ್​; ಹುಡುಕಿಕೊಂಡು ಬಂದ್ರು ನಿರ್ಮಾಪಕರು

ಸಮಂತಾ ಜೊತೆ ವಿಚ್ಛೇದನ ಪಡೆದ ನಂತರದಲ್ಲಿ ನಾಗ ಚೈತನ್ಯ ಅವರನ್ನು ಸ್ಯಾಮ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ಹೀಗಿರುವಾಗ ಬ್ಯಾಕ್ ಟು ಬ್ಯಾಕ್ ಸೋಲು ಕಂಡರೆ ಮತ್ತಷ್ಟು ಟ್ರೋಲ್ ಆಗಬೇಕಾಗುತ್ತದೆ ಎನ್ನುವ ಭಯವೂ ಅವರಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ