AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ.

Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ
ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Jun 14, 2023 | 7:41 AM

Share

ನಾಗ ಚೈತನ್ಯ (Naga Chaitanya) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಕೊಟ್ಟಿದೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ಯೋಚಿಸಬೇಕಾದ ಅನಿವಾರ್ಯತೆ ಮೂಡಿದೆ. ಈಗ ನಾಗ ಚೈತನ್ಯ ಅವರು ಗೊಂದಲದಲ್ಲಿದ್ದಾರೆ ಎಂದು ವರದಿ ಆಗಿದೆ. ಮುಂದೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ವರದಿಗಳು ಹರಿದಾಡಿವೆ. ಈ ಬೆಳವಣಿಗೆ ನಾಗ ಚೈತನ್ಯ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಈ ಚಿತ್ರದಿಂದ ಅವರಿಗೆ ಹೀನಾಯ ಸೋಲಾಯಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ. ಈ ಚಿತ್ರ ಕೂಡ ಸೋಲು ಕಂಡಿತು. ಈಗ ನಾಗ ಚೈತನ್ಯ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಅವರು ಮತ್ತೊಮ್ಮೆ ಎಲ್ಲವನ್ನೂ ಪರಾಮರ್ಶಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಚಂದು ಮೊಂಡೇತಿ ಹಾಗೂ ರಾಹುಲ್ ಸಂಕ್ರಿತ್ಯಾನ್ ಜೊತೆ ನಾಗ ಚೈತನ್ಯ ಒಂದೊಂದು ಸಿನಿಮಾ ಮಾಡಬೇಕಿದೆ. ಚಂದು ಅವರು ಗುಜರಾತ್​​ನಲ್ಲಿ ನಡೆದ ನೈಜ ಘಟನೆ ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ. ಗೀತಾ ಆರ್ಟ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ನಾಗ ಚೈತನ್ಯ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಸ್ಕ್ರಿಪ್ಟ್ ಸಿದ್ಧವಾಗಿಲ್ಲ.

ರಾಹುಲ್ ಈಗಾಗಲೇ ಸ್ಕ್ರಿಪ್ಟ್ ಸಿದ್ಧಪಡಿಸಿ ಇಟ್ಟಿದ್ದಾರೆ. ಆದರೆ, ನಾಗ ಚೈತನ್ಯ ಅವರು ಯಾಕೋ ಈ ಚಿತ್ರದ ಬಗ್ಗೆ ಅಷ್ಟಾಗಿ ಒಲವು ತೋರಿಸುತ್ತಿಲ್ಲ. ಈಗ ಎರಡು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲು ಕಂಡಿರುವುದರಿಂದ ನಾಗ ಚೈತನ್ಯ ಸಾಕಷ್ಟು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Naga Chaitanya: ಸೋತು ಸುಣ್ಣವಾಗಿದ್ದ ನಾಗ ಚೈತನ್ಯಗೂ ಬಂತು ಒಳ್ಳೆಯ ಟೈಮ್​; ಹುಡುಕಿಕೊಂಡು ಬಂದ್ರು ನಿರ್ಮಾಪಕರು

ಸಮಂತಾ ಜೊತೆ ವಿಚ್ಛೇದನ ಪಡೆದ ನಂತರದಲ್ಲಿ ನಾಗ ಚೈತನ್ಯ ಅವರನ್ನು ಸ್ಯಾಮ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ಹೀಗಿರುವಾಗ ಬ್ಯಾಕ್ ಟು ಬ್ಯಾಕ್ ಸೋಲು ಕಂಡರೆ ಮತ್ತಷ್ಟು ಟ್ರೋಲ್ ಆಗಬೇಕಾಗುತ್ತದೆ ಎನ್ನುವ ಭಯವೂ ಅವರಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ