AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Chaitanya: ಕಾರಿನಲ್ಲಿ ಕದ್ದುಮುಚ್ಚಿ ಕಿಸ್​ ಮಾಡುತ್ತಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಸಮಂತಾ ಮಾಜಿ ಪತಿ ನಾಗ ಚೈತನ್ಯ

Naga Chaitanya | Samantha Ruth Prabhu: ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಬಳಿಕ ನಾಗ ಚೈತನ್ಯ ಬದುಕಿನಲ್ಲಿ ಮಹಿಳೆಯರ ಆಕರ್ಷಣೆ ಹೆಚ್ಚಿದೆಯೇ? ಸಂದರ್ಶನದಲ್ಲಿ ಈ ಪ್ರಶ್ನೆ ಎದುರಾಯಿತು.

Naga Chaitanya: ಕಾರಿನಲ್ಲಿ ಕದ್ದುಮುಚ್ಚಿ ಕಿಸ್​ ಮಾಡುತ್ತಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಸಮಂತಾ ಮಾಜಿ ಪತಿ ನಾಗ ಚೈತನ್ಯ
ನಾಗ ಚೈತನ್ಯ
TV9 Web
| Edited By: |

Updated on: Aug 16, 2022 | 2:46 PM

Share

ಟಾಲಿವುಡ್​ ಸ್ಟಾರ್​ ನಟ ನಾಗ ಚೈತನ್ಯ (Naga Chaitanya) ಅವರ ಜೀವನದ ಬಗ್ಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ. ಈಗಂತೂ ಅವರ ಖಾಸಗಿ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ದಾಂಪತ್ಯ ಜೀವನಕ್ಕೆ ಅವರು ಅಂತ್ಯ ಹಾಡಿ ಹಲವು ತಿಂಗಳುಗಳೇ ಕಳೆದಿವೆ. ಸಮಂತಾ ರುತ್​ ಪ್ರಭುಗೆ (Samantha Ruth Prabhu) ಅವರು ಡಿವೋರ್ಸ್​ ನೀಡಿದ್ದು ಯಾಕೆ ಎಂಬುದು ಇನ್ನೂ ಗೌಪ್ಯವಾಗಿಯೇ ಉಳಿದಿದೆ. ಆ ಬಗ್ಗೆ ಅವರು ಸರಿಯಾಗಿ ಏನನ್ನೂ ಬಾಯಿ ಬಿಡುತ್ತಿಲ್ಲ. ಈಗ ನಾಗ ಚೈತನ್ಯ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ತುಂಟತನದ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ. ಹೈದರಾಬಾದ್​ನಲ್ಲಿ ಹುಡುಗಿಯೊಬ್ಬಳಿಗೆ ಕದ್ದು ಮುಚ್ಚಿ ಕಿಸ್​ (Kiss) ಮಾಡಲು ಹೋದಾಗ ಪೊಲೀಸರ ಕೈಯಲ್ಲಿ ಸಿಕ್ಕಿ ಬಿದ್ದ ವಿಚಾರವನ್ನು ನಾಗ ಚೈತನ್ಯ ಒಪ್ಪಿಕೊಂಡಿದ್ದಾರೆ.

ಸಮಂತಾ ರುತ್​ ಪ್ರಭು ಜೊತೆ ನಾಗ ಚೈತನ್ಯ ಪ್ರೀತಿಯಲ್ಲಿ ಬೀಳುವುದಕ್ಕೂ ಮುನ್ನವೇ ಈ ಥರ ಒಂದು ಘಟನೆ ನಡೆದಿತ್ತು. ಕಾರಿನ ಹಿಂಬದಿ ಸೀಟಿಯಲ್ಲಿ ನಾಗ ಚೈತನ್ಯ ಅವರು ಹುಡುಗಿ ಜೊತೆ ಕುಳಿತಿದ್ದರು. ಬಹಳ ರೊಮ್ಯಾಂಟಿಕ್​ ಆದಂತಹ ಆ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಹೆಚ್ಚುತ್ತಿತ್ತು. ಹುಡುಗಿಗೆ ನಾಗ ಚೈತನ್ಯ ಮುತ್ತುಗಳ ಮಳೆ ಸುರಿಸುತ್ತಿದ್ದರು. ಈ ವೇಳೆ ಅವರು ಪೊಲೀಸರ ಕಣ್ಣಿಗೆ ಬಿದ್ದಿದ್ದರು!

ಇಷ್ಟು ಮಾತ್ರ ಹೇಳಿ, ಇನ್ನುಳಿದ ವಿವರಗಳನ್ನು ನಾಗ ಚೈತನ್ಯ ಬಿಟ್ಟುಕೊಟ್ಟಿಲ್ಲ. ಆ ಹುಡುಗಿ ಯಾರು ಎಂಬುದು ಸದ್ಯಕ್ಕೆ ಸಸ್ಪೆನ್ಸ್​ ಆಗಿಯೇ ಉಳಿದಿದೆ. ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಬಳಿಕ ನಾಗ ಚೈತನ್ಯ ಬದುಕಿನಲ್ಲಿ ಮಹಿಳೆಯರ ಆಕರ್ಷಣೆ ಹೆಚ್ಚಿದೆಯೇ? ಈ ಪ್ರಶ್ನೆ ಕೂಡ ಸಂದರ್ಶನದಲ್ಲಿ ಎದುರಾಯಿತು. ಅದಕ್ಕೆ ಉತ್ತರಿಸಿದ ಅವರು, ‘ಒಳ್ಳೆಯ ರೀತಿಯಲ್ಲಿ ಯಾವಾಗಲೂ ಮಹಿಳೆಯರು ನನ್ನ ಕಡೆಗೆ ಆಕರ್ಷಿತರಾಗುತ್ತಾರೆ. ಈ ರೀತಿ ಇರುವುದು ಖುಷಿ ಆಗುತ್ತದೆ’ ಎಂದು ನಾಗ ಚೈತನ್ಯ ಹೇಳಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
ಟಾಲಿವುಡ್​ ನಟಿಯ ಜತೆ ನಾಗ ಚೈತನ್ಯ ಕದ್ದುಮುಚ್ಚಿ ಓಡಾಟ? ಐಷಾರಾಮಿ ಹೋಟೆಲ್​ನಲ್ಲಿ ಆಗುತ್ತಿತ್ತು ಭೇಟಿ

ವಿಚ್ಛೇದನದ ಬಳಿಕ ನಾಗ ಚೈತನ್ಯ ಅವರ ವೃತ್ತಿ ಜೀವನ ಹೇಳಿಕೊಳ್ಳುವಷ್ಟು ಏಳಿಗೆ ಕಂಡಿಲ್ಲ. ಅವರು ನಟಿಸಿದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಆಗಸ್ಟ್​ 11ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಆಮಿರ್​ ಖಾನ್​ ಜೊತೆ ಅವರು ತೆರೆ ಹಂಚಿಕೊಂಡಿ​ದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡಲು ಈ ಚಿತ್ರ ವಿಫಲವಾಗಿದೆ. ಆ ಸೋಲಿನ ಬೇಸರವನ್ನು ಬದಿಗಿಟ್ಟು ಅವರು ಮುಂದಿನ ಚಿತ್ರಗಳ ಕಡೆಗೆ ಗಮನ ಹರಿಸಲು ಸಜ್ಜಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ