Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಆರ್​ ಕೆಲಸಕ್ಕೆ ನಾಗ ಚೈತನ್ಯ ತಿಂಗಳಿಗೆ ಖರ್ಚು ಮಾಡ್ತಾರೆ ದೊಡ್ಡ ಮೊತ್ತ

ನಾಗ ಚೈತನ್ಯ ಅವರ ‘ತಾಂಡೇಲ್’ ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಅಭೂತಪೂರ್ವ ಆಗಿದೆ. ಪಿಆರ್​ಗೆ ತಿಂಗಳಿಗೆ 1 ರಿಂದ 3 ಲಕ್ಷ ರೂಪಾಯಿ ಖರ್ಚು ಮಾಡುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ. ಚಿತ್ರದ ಪ್ರಚಾರ ಮತ್ತು ಧನಾತ್ಮಕ ಚಿತ್ರಣ ನಿರ್ಮಾಣಕ್ಕೆ ಪಿಆರ್ ತಂಡ ಮಹತ್ವದ ಪಾತ್ರ ವಹಿಸುತ್ತದೆ ಎಂಬುದು ಅವರ ಅಭಿಪ್ರಾಯ.

ಪಿಆರ್​ ಕೆಲಸಕ್ಕೆ ನಾಗ ಚೈತನ್ಯ ತಿಂಗಳಿಗೆ ಖರ್ಚು ಮಾಡ್ತಾರೆ ದೊಡ್ಡ ಮೊತ್ತ
ನಾಗ ಚೈತನ್ಯ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 08, 2025 | 7:30 PM

ನಾಗ ಚೈತನ್ಯ ಅವರು ‘ತಾಂಡೇಲ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಅವರ ನಟನೆಯ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದಲ್ಲಿ ಓಪನಿಂಗ್ ಕಂಡಿದ್ದು ಇದೇ ಮೊದಲು ಎನ್ನಲಾಗಿದೆ. ಈ ವಿಚಾರ ಅವರಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಪಿಆರ್​ ವಿಚಾರಕ್ಕೆ ವರ್ಷಕ್ಕೆ ಎಷ್ಟು ರೂಪಾಯಿ ಖರ್ಚು ಮಾಡುತ್ತಾರೆ ಎಂಬ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ಪ್ರತಿ ಸೆಲೆಬ್ರಿಟಿಗಳು ತಮ್ಮದೇ ಆದ ಪಿಆರ್ ತಂಡ ಹೊಂದಿರುತ್ತಾರೆ. ಇದರ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾರೆ. ಅಲ್ಲದೆ, ವೈಯಕ್ತಿಕ ವಿಚಾರ ಬಂದರೆ ಅದರ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ. ಇದು ಕನ್ನಡದಲ್ಲಿ ಕಡಿಮೆ ಇದ್ದರೂ ಬಾಲಿವುಡ್​ನಲ್ಲಿ ಈ ಪದ್ಧತಿ ಜೋರಾಗಿ ಬಳಕೆಯಲ್ಲಿ ಇದೆ. ಇದು ಟಾಲಿವುಡ್​ಗೂ ಬಂದಿದೆ. ಇದಕ್ಕೆ ನಾಗ ಚೈತನ್ಯ ಅವರು ಖರ್ಚು ಮಾಡುವ ಹಣ ಎಷ್ಟು ಎಂದು ಹೇಳಿದ್ದಾರೆ.

ಇತ್ತೀಚೆಗೆ ಸಂದರ್ಶನ ಒಂದರಲ್ಲಿ ನಾಗ ಚೈತನ್ಯ ಮಾತನಾಡಿದ್ದಾರೆ. ‘ಪಿಆರ್ ಏಜೆನ್ಸಿಗೆ ನೀವು ತಿಂಗಳಿಗೆ 1ರಿಂದ 3 ಲಕ್ಷ ರೂಪಾಯಿ ಹಣವನ್ನು ಸ್ಪೆಂಡ್ ಮಾಡುತ್ತಿಲ್ಲ ಎಂದರೆ ನೀವು ಮೂರ್ಖರು’ ಎಂದು ನಾಗ ಚೈತನ್ಯ ಅವರು ಹೇಳಿದ್ದಾರೆ. ‘ಸಿನಿಮಾ ರಿಲೀಸ್ ಸಂದರ್ಭದಲ್ಲಿ ತಂಡದವರು ನಿಮ್ಮ ಸಿನಿಮಾ ಪ್ರಚಾರ ಮಾಡುತ್ತಾರೆ, ಚಿತ್ರದ ಬಗ್ಗೆ ಪಾಸಿಟಿವಿಟಿ ಹಬ್ಬಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನಾನು ತಾಂಡೇಲ್ ಚಿತ್ರಕ್ಕಾಗಿ ಎರಡು ವರ್ಷ ವ್ಯಯಿಸಿದ್ದೇನೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪಿಆರ್ ಮಾಡಿಲ್ಲ ಎಂದರೆ ಸಿನಿಮಾ ಬೀಳಬಹುದು’ ಎಂದು ನಾಗ ಚೈತನ್ಯ ಅವರು ಹೇಳಿದ್ದಾರೆ. ಪಿಆರ್ ತಂಡದ ಮೂಲಕ ಚಿತ್ರಕ್ಕೆ ಒಂದಷ್ಟು ಪ್ರಚಾರ ಮಾಡುತ್ತಾರೆ ಎಂಬ ಖುಷಿ ಅವರದ್ದು.

ಇದನ್ನೂ ಓದಿ: ‘ನಾನು ಕೂಡ ಒಡೆದ ಕುಟುಂಬದ ಮಗು’; ಟೀಕಿಸಿದವರಿಗೆ ನಾಗ ಚೈತನ್ಯ ಉತ್ತರ

‘ತಾಂಡೇಲ್’ ಚಿತ್ರ ಫೆಬ್ರವರಿ 7ರಂದು ಬಿಡುಗಡೆ ಕಂಡಿದೆ. ತೆಲುಗು ಜೊತೆಗೆ ಇತ ಭಾಷೆಯಲ್ಲೂ ಸಿನಿಮಾ ಮೂಡಿ ಬಂದಿದೆ.  ಈ ಚಿತ್ರದಲ್ಲಿ ನಾಗ ಚೈತನ್ಯ ಅವರು ಮೀನುಗಾರನ ಪಾತ್ರ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ನಾಗ ಚೈತನ್ಯ ಅವರು ಈ ಚಿತ್ರದ ಮೂಲಕ ಹಲವು ವರ್ಷಗಳ ಬಳಿಕ ದೊಡ್ಡ ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್