AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಆರ್​ ಕೆಲಸಕ್ಕೆ ನಾಗ ಚೈತನ್ಯ ತಿಂಗಳಿಗೆ ಖರ್ಚು ಮಾಡ್ತಾರೆ ದೊಡ್ಡ ಮೊತ್ತ

ನಾಗ ಚೈತನ್ಯ ಅವರ ‘ತಾಂಡೇಲ್’ ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಅಭೂತಪೂರ್ವ ಆಗಿದೆ. ಪಿಆರ್​ಗೆ ತಿಂಗಳಿಗೆ 1 ರಿಂದ 3 ಲಕ್ಷ ರೂಪಾಯಿ ಖರ್ಚು ಮಾಡುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ. ಚಿತ್ರದ ಪ್ರಚಾರ ಮತ್ತು ಧನಾತ್ಮಕ ಚಿತ್ರಣ ನಿರ್ಮಾಣಕ್ಕೆ ಪಿಆರ್ ತಂಡ ಮಹತ್ವದ ಪಾತ್ರ ವಹಿಸುತ್ತದೆ ಎಂಬುದು ಅವರ ಅಭಿಪ್ರಾಯ.

ಪಿಆರ್​ ಕೆಲಸಕ್ಕೆ ನಾಗ ಚೈತನ್ಯ ತಿಂಗಳಿಗೆ ಖರ್ಚು ಮಾಡ್ತಾರೆ ದೊಡ್ಡ ಮೊತ್ತ
ನಾಗ ಚೈತನ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 08, 2025 | 7:30 PM

Share

ನಾಗ ಚೈತನ್ಯ ಅವರು ‘ತಾಂಡೇಲ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಅವರ ನಟನೆಯ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದಲ್ಲಿ ಓಪನಿಂಗ್ ಕಂಡಿದ್ದು ಇದೇ ಮೊದಲು ಎನ್ನಲಾಗಿದೆ. ಈ ವಿಚಾರ ಅವರಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಪಿಆರ್​ ವಿಚಾರಕ್ಕೆ ವರ್ಷಕ್ಕೆ ಎಷ್ಟು ರೂಪಾಯಿ ಖರ್ಚು ಮಾಡುತ್ತಾರೆ ಎಂಬ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ಪ್ರತಿ ಸೆಲೆಬ್ರಿಟಿಗಳು ತಮ್ಮದೇ ಆದ ಪಿಆರ್ ತಂಡ ಹೊಂದಿರುತ್ತಾರೆ. ಇದರ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾರೆ. ಅಲ್ಲದೆ, ವೈಯಕ್ತಿಕ ವಿಚಾರ ಬಂದರೆ ಅದರ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ. ಇದು ಕನ್ನಡದಲ್ಲಿ ಕಡಿಮೆ ಇದ್ದರೂ ಬಾಲಿವುಡ್​ನಲ್ಲಿ ಈ ಪದ್ಧತಿ ಜೋರಾಗಿ ಬಳಕೆಯಲ್ಲಿ ಇದೆ. ಇದು ಟಾಲಿವುಡ್​ಗೂ ಬಂದಿದೆ. ಇದಕ್ಕೆ ನಾಗ ಚೈತನ್ಯ ಅವರು ಖರ್ಚು ಮಾಡುವ ಹಣ ಎಷ್ಟು ಎಂದು ಹೇಳಿದ್ದಾರೆ.

ಇತ್ತೀಚೆಗೆ ಸಂದರ್ಶನ ಒಂದರಲ್ಲಿ ನಾಗ ಚೈತನ್ಯ ಮಾತನಾಡಿದ್ದಾರೆ. ‘ಪಿಆರ್ ಏಜೆನ್ಸಿಗೆ ನೀವು ತಿಂಗಳಿಗೆ 1ರಿಂದ 3 ಲಕ್ಷ ರೂಪಾಯಿ ಹಣವನ್ನು ಸ್ಪೆಂಡ್ ಮಾಡುತ್ತಿಲ್ಲ ಎಂದರೆ ನೀವು ಮೂರ್ಖರು’ ಎಂದು ನಾಗ ಚೈತನ್ಯ ಅವರು ಹೇಳಿದ್ದಾರೆ. ‘ಸಿನಿಮಾ ರಿಲೀಸ್ ಸಂದರ್ಭದಲ್ಲಿ ತಂಡದವರು ನಿಮ್ಮ ಸಿನಿಮಾ ಪ್ರಚಾರ ಮಾಡುತ್ತಾರೆ, ಚಿತ್ರದ ಬಗ್ಗೆ ಪಾಸಿಟಿವಿಟಿ ಹಬ್ಬಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನಾನು ತಾಂಡೇಲ್ ಚಿತ್ರಕ್ಕಾಗಿ ಎರಡು ವರ್ಷ ವ್ಯಯಿಸಿದ್ದೇನೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪಿಆರ್ ಮಾಡಿಲ್ಲ ಎಂದರೆ ಸಿನಿಮಾ ಬೀಳಬಹುದು’ ಎಂದು ನಾಗ ಚೈತನ್ಯ ಅವರು ಹೇಳಿದ್ದಾರೆ. ಪಿಆರ್ ತಂಡದ ಮೂಲಕ ಚಿತ್ರಕ್ಕೆ ಒಂದಷ್ಟು ಪ್ರಚಾರ ಮಾಡುತ್ತಾರೆ ಎಂಬ ಖುಷಿ ಅವರದ್ದು.

ಇದನ್ನೂ ಓದಿ: ‘ನಾನು ಕೂಡ ಒಡೆದ ಕುಟುಂಬದ ಮಗು’; ಟೀಕಿಸಿದವರಿಗೆ ನಾಗ ಚೈತನ್ಯ ಉತ್ತರ

‘ತಾಂಡೇಲ್’ ಚಿತ್ರ ಫೆಬ್ರವರಿ 7ರಂದು ಬಿಡುಗಡೆ ಕಂಡಿದೆ. ತೆಲುಗು ಜೊತೆಗೆ ಇತ ಭಾಷೆಯಲ್ಲೂ ಸಿನಿಮಾ ಮೂಡಿ ಬಂದಿದೆ.  ಈ ಚಿತ್ರದಲ್ಲಿ ನಾಗ ಚೈತನ್ಯ ಅವರು ಮೀನುಗಾರನ ಪಾತ್ರ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ನಾಗ ಚೈತನ್ಯ ಅವರು ಈ ಚಿತ್ರದ ಮೂಲಕ ಹಲವು ವರ್ಷಗಳ ಬಳಿಕ ದೊಡ್ಡ ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು