ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಜೋಡಿಯ ‘ಲವ್​ ಸ್ಟೋರಿ’ ಚಿತ್ರದ ಕೆಲಸಗಳೆಲ್ಲ ಮುಗಿದಿದ್ದು ರಿಲೀಸ್​ಗೆ ಸಿದ್ಧವಾಗಿದೆ. ಟ್ರೇಲರ್​ ಬಿಡುಗಡೆ ಮಾಡುವುದರ ಜೊತೆ ಸಿನಿಮಾದ ರಿಲೀಸ್​ ದಿನಾಂಕವನ್ನೂ ಚಿತ್ರತಂಡ ಪ್ರಕಟಿಸಿದೆ.

ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ, ಸಾಯಿ ಪಲ್ಲವಿ
Follow us
| Updated By: ಮದನ್​ ಕುಮಾರ್​

Updated on: Sep 13, 2021 | 3:48 PM

ಸಮಂತಾ ಅಕ್ಕಿನೇನಿ ಮತ್ತು ನಾಗಚೈತನ್ಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಅವರ ಕುಟುಂಬದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡುತ್ತಿಲ್ಲ. ಈ ನಡುವೆ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಲವ್​ ಸ್ಟೋರಿ ಗಮನ ಸೆಳೆಯುತ್ತಿದೆ. ಹಾಗಂತ ಇದು ಅವರ ರಿಯಲ್​ ಲೈಫ್​ನ ಲವ್​ ಸ್ಟೋರಿ ಅಲ್ಲ. ಬದಲಿಗೆ ಸಿನಿಮಾ ಸಮಾಚಾರ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ‘ಲವ್​ ಸ್ಟೋರಿ’ ಚಿತ್ರದಲ್ಲಿ ನಟಿಸಿದ್ದು, ಈಗ ಅದರ ಟ್ರೇಲರ್​ ಬಿಡುಗಡೆ ಆಗಿದೆ. ನಾಗ ಚೈತನ್ಯ-ಸಮಂತಾ ಡಿವೋರ್ಸ್​ ವದಂತಿಯನ್ನು ಪಕ್ಕಕ್ಕಿಟ್ಟು ಸಿನಿಪ್ರಿಯರೆಲ್ಲ ಈಗ ‘ಲವ್​ ಸ್ಟೋರಿ’ ಟ್ರೇಲರ್​ ನೋಡಿ ಎಂಜಾಯ್​ ಮಾಡುತ್ತಿದ್ದಾರೆ.

‘ಲವ್​ ಸ್ಟೋರಿ’ ಸಿನಿಮಾ ಅನೌನ್ಸ್​ ಅದಾಗಿನಿಂದಲೂ ಅದರ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಬೆಳೆಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಜೋಡಿಯನ್ನು ತೆರೆಮೇಲೆ ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈಗ ಚಿತ್ರದ ಕೆಲಸಗಳೆಲ್ಲ ಮುಗಿದಿದ್ದು ರಿಲೀಸ್​ಗೆ ಸಿದ್ಧವಾಗಿದೆ. ಟ್ರೇಲರ್​ ಬಿಡುಗಡೆ ಮಾಡುವುದರ ಜೊತೆ ಸಿನಿಮಾದ ರಿಲೀಸ್​ ದಿನಾಂಕವನ್ನೂ ಚಿತ್ರತಂಡ ಪ್ರಕಟಿಸಿದೆ. ಸೆ.24ರಂದು ‘ಲವ್​ ಸ್ಟೋರಿ’ ಎಲ್ಲೆಡೆ ರಿಲೀಸ್​ ಆಗಲಿದೆ.

ಖ್ಯಾತ ನಿರ್ದೇಶಕ ಶೇಖರ್​ ಕಮ್ಮುಲ ಅವರು ‘ಲವ್​ ಸ್ಟೋರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಡ್ಯಾನ್ಸರ್​ ಪಾತ್ರ ಮಾಡಿದ್ದಾರೆ. ಡ್ಯಾನ್ಸ್​ನಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಈಗಾಗಲೇ ಹಲವು ಸಿನಿಮಾಗಳಲ್ಲಿ ಸಾಬೀತುಪಡಿಸಿದ್ದಾರೆ. ಹಾಗಾದರೆ ‘ಲವ್​ ಸ್ಟೋರಿ’ಯಲ್ಲಿ ಹೊಸದೇನಿದೆ ಎಂಬುದನ್ನು ತಿಳಿದುಕೊಳ್ಳಲು ಅವರ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

2019ರಲ್ಲಿ ‘ಮಜಿಲಿ’ ಸಿನಿಮಾ ಮೂಲಕ ಹಿಟ್​ ನೀಡಿದ್ದ ನಾಗ ಚೈತನ್ಯ ಅವರು ‘ಲವ್​ ಸ್ಟೋರಿ’ ಮೂಲಕ ಮತ್ತೆ ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ‘ಟ್ರೇಲರ್​ ಹಂಚಿಕೊಳ್ಳಲು ತುಂಬ ಖುಷಿ ಆಗುತ್ತಿದೆ. ನಿಮ್ಮೆಲ್ಲರನ್ನು ಮತ್ತೆ ಥಿಯೇಟರ್​ನಲ್ಲಿ ಭೇಟಿಯಾಗಲು ಕಾಯುತ್ತಿದ್ದೇನೆ’ ಎಂದು ನಾಗ ಚೈತನ್ಯ ಟ್ವೀಟ್​ ಮಾಡಿದ್ದಾರೆ. ಈ ಟ್ರೇಲರ್​ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗಂಡ ನಟಿಸಿರುವ ಇಂಥ ಬಹುನಿರೀಕ್ಷಿತ ಸಿನಿಮಾದ ಟ್ರೇಲರ್​ ರಿಲೀಸ್​ ಆದರೂ ಕೂಡ ಸಮಂತಾ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ಇದು ಅವರ ಡಿವೋರ್ಸ್ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದಂತಾಗಿದೆ.

ಇದನ್ನೂ ಓದಿ:

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ಮಗ-ಸೊಸೆಯ ಡಿವೋರ್ಸ್​ ತೀರ್ಮಾನಕ್ಕೆ ಹೇಗೆ ಸಹಾಯ ಮಾಡ್ತಿದ್ದಾರೆ ನಾಗಾರ್ಜುನ? ಟಾಲಿವುಡ್​ ಗಲ್ಲಿಯಲ್ಲಿ ಗುಸುಗುಸು

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ