AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಜೋಡಿಯ ‘ಲವ್​ ಸ್ಟೋರಿ’ ಚಿತ್ರದ ಕೆಲಸಗಳೆಲ್ಲ ಮುಗಿದಿದ್ದು ರಿಲೀಸ್​ಗೆ ಸಿದ್ಧವಾಗಿದೆ. ಟ್ರೇಲರ್​ ಬಿಡುಗಡೆ ಮಾಡುವುದರ ಜೊತೆ ಸಿನಿಮಾದ ರಿಲೀಸ್​ ದಿನಾಂಕವನ್ನೂ ಚಿತ್ರತಂಡ ಪ್ರಕಟಿಸಿದೆ.

ಸಮಂತಾ ಡಿವೋರ್ಸ್​ ವದಂತಿ ಬೆನ್ನಲ್ಲೇ ನಾಗ ಚೈತನ್ಯ-ಸಾಯಿ ಪಲ್ಲವಿ ಲವ್​ ಸ್ಟೋರಿ ಮೇಲೆ ಕಣ್ಣಿಟ್ಟ ಸಿನಿಪ್ರಿಯರು
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ, ಸಾಯಿ ಪಲ್ಲವಿ
TV9 Web
| Edited By: |

Updated on: Sep 13, 2021 | 3:48 PM

Share

ಸಮಂತಾ ಅಕ್ಕಿನೇನಿ ಮತ್ತು ನಾಗಚೈತನ್ಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಅವರ ಕುಟುಂಬದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡುತ್ತಿಲ್ಲ. ಈ ನಡುವೆ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಲವ್​ ಸ್ಟೋರಿ ಗಮನ ಸೆಳೆಯುತ್ತಿದೆ. ಹಾಗಂತ ಇದು ಅವರ ರಿಯಲ್​ ಲೈಫ್​ನ ಲವ್​ ಸ್ಟೋರಿ ಅಲ್ಲ. ಬದಲಿಗೆ ಸಿನಿಮಾ ಸಮಾಚಾರ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ‘ಲವ್​ ಸ್ಟೋರಿ’ ಚಿತ್ರದಲ್ಲಿ ನಟಿಸಿದ್ದು, ಈಗ ಅದರ ಟ್ರೇಲರ್​ ಬಿಡುಗಡೆ ಆಗಿದೆ. ನಾಗ ಚೈತನ್ಯ-ಸಮಂತಾ ಡಿವೋರ್ಸ್​ ವದಂತಿಯನ್ನು ಪಕ್ಕಕ್ಕಿಟ್ಟು ಸಿನಿಪ್ರಿಯರೆಲ್ಲ ಈಗ ‘ಲವ್​ ಸ್ಟೋರಿ’ ಟ್ರೇಲರ್​ ನೋಡಿ ಎಂಜಾಯ್​ ಮಾಡುತ್ತಿದ್ದಾರೆ.

‘ಲವ್​ ಸ್ಟೋರಿ’ ಸಿನಿಮಾ ಅನೌನ್ಸ್​ ಅದಾಗಿನಿಂದಲೂ ಅದರ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಬೆಳೆಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಜೋಡಿಯನ್ನು ತೆರೆಮೇಲೆ ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈಗ ಚಿತ್ರದ ಕೆಲಸಗಳೆಲ್ಲ ಮುಗಿದಿದ್ದು ರಿಲೀಸ್​ಗೆ ಸಿದ್ಧವಾಗಿದೆ. ಟ್ರೇಲರ್​ ಬಿಡುಗಡೆ ಮಾಡುವುದರ ಜೊತೆ ಸಿನಿಮಾದ ರಿಲೀಸ್​ ದಿನಾಂಕವನ್ನೂ ಚಿತ್ರತಂಡ ಪ್ರಕಟಿಸಿದೆ. ಸೆ.24ರಂದು ‘ಲವ್​ ಸ್ಟೋರಿ’ ಎಲ್ಲೆಡೆ ರಿಲೀಸ್​ ಆಗಲಿದೆ.

ಖ್ಯಾತ ನಿರ್ದೇಶಕ ಶೇಖರ್​ ಕಮ್ಮುಲ ಅವರು ‘ಲವ್​ ಸ್ಟೋರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಡ್ಯಾನ್ಸರ್​ ಪಾತ್ರ ಮಾಡಿದ್ದಾರೆ. ಡ್ಯಾನ್ಸ್​ನಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಈಗಾಗಲೇ ಹಲವು ಸಿನಿಮಾಗಳಲ್ಲಿ ಸಾಬೀತುಪಡಿಸಿದ್ದಾರೆ. ಹಾಗಾದರೆ ‘ಲವ್​ ಸ್ಟೋರಿ’ಯಲ್ಲಿ ಹೊಸದೇನಿದೆ ಎಂಬುದನ್ನು ತಿಳಿದುಕೊಳ್ಳಲು ಅವರ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

2019ರಲ್ಲಿ ‘ಮಜಿಲಿ’ ಸಿನಿಮಾ ಮೂಲಕ ಹಿಟ್​ ನೀಡಿದ್ದ ನಾಗ ಚೈತನ್ಯ ಅವರು ‘ಲವ್​ ಸ್ಟೋರಿ’ ಮೂಲಕ ಮತ್ತೆ ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ‘ಟ್ರೇಲರ್​ ಹಂಚಿಕೊಳ್ಳಲು ತುಂಬ ಖುಷಿ ಆಗುತ್ತಿದೆ. ನಿಮ್ಮೆಲ್ಲರನ್ನು ಮತ್ತೆ ಥಿಯೇಟರ್​ನಲ್ಲಿ ಭೇಟಿಯಾಗಲು ಕಾಯುತ್ತಿದ್ದೇನೆ’ ಎಂದು ನಾಗ ಚೈತನ್ಯ ಟ್ವೀಟ್​ ಮಾಡಿದ್ದಾರೆ. ಈ ಟ್ರೇಲರ್​ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗಂಡ ನಟಿಸಿರುವ ಇಂಥ ಬಹುನಿರೀಕ್ಷಿತ ಸಿನಿಮಾದ ಟ್ರೇಲರ್​ ರಿಲೀಸ್​ ಆದರೂ ಕೂಡ ಸಮಂತಾ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ಇದು ಅವರ ಡಿವೋರ್ಸ್ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದಂತಾಗಿದೆ.

ಇದನ್ನೂ ಓದಿ:

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ಮಗ-ಸೊಸೆಯ ಡಿವೋರ್ಸ್​ ತೀರ್ಮಾನಕ್ಕೆ ಹೇಗೆ ಸಹಾಯ ಮಾಡ್ತಿದ್ದಾರೆ ನಾಗಾರ್ಜುನ? ಟಾಲಿವುಡ್​ ಗಲ್ಲಿಯಲ್ಲಿ ಗುಸುಗುಸು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ