AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್

ಲವ್ ಸ್ಟೋರಿ ಮತ್ತು ದೇಶಪ್ರೇಮದ ಕಥೆ ‘ತಂಡೇಲ್’ ಸಿನಿಮಾದಲ್ಲಿದೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಫೆ.7ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ರಿಲೀಸ್ ಮಾಡಲಾಗಿದೆ. ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್
Naga Chaitanya, Sai Pallavi
ಮದನ್​ ಕುಮಾರ್​
|

Updated on: Jan 28, 2025 | 10:03 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ತಂಡೇಲ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿತ್ತು. ಈಗ ಈ ಸಿನಿಮಾಗೆ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಫೆಬ್ರವರಿ 7ರಂದು ಅದ್ದೂರಿಯಾಗಿ ‘ತಂಡೇಲ್’ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಜೋಡಿಯಾಗಿ ನಟಿಸಿದ್ದಾರೆ. ನಾಗ ಚೈತನ್ಯ ಅವರ ಗೆಟಪ್ ಡಿಫರೆಂಟ್ ಆಗಿದೆ. ಇಂದು (ಜನವರಿ 28) ‘ತಂಡೇಲ್’ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಈ ಮೊದಲು ‘ಲವ್ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರಿಬ್ಬರು ‘ತಂಡೇಲ್’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯಾಗಿ ಡಿಗ್ಲಾಮ್ ಲುಕ್​ನಲ್ಲಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ.

‘ತಂಡೇಲ್’ ಸಿನಿಮಾ ಟ್ರೇಲರ್​:

‘ತಂಡೇಲ್’ ಸಿನಿಮಾದಲ್ಲಿ ಪ್ರೇಮಕಥೆ ಮತ್ತು ದೇಶಪ್ರೇಮದ ಕಹಾನಿ ಇರಲಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ನಾಗ ಚೈತನ್ಯ ಅವರು ಭರ್ಜರಿ ಆ್ಯಕ್ಷನ್​ ಕೂಡ ಮಾಡಿದ್ದಾರೆ. ಮೀನು ಹಿಡಿಯಲು ಸಮುದ್ರಕ್ಕೆ ಇಳಿಯುವ ಕಥಾನಾಯಕ ಪ್ರಕೃತಿ ವಿಕೋಪದ ಕಾರಣದಿಂದ ಪಾಕಿಸ್ತಾನದ ಗಡಿ ತಲುಪುತ್ತಾನೆ. ಆತ ಯಾವಾಗ ಬರುತ್ತಾನೆ ಎಂಬುದನ್ನೇ ಕಾಯುತ್ತಾಳೆ ಪ್ರೇಯಸಿ. ಇಂಥ ಒಂದು ಎಮೋಷನಲ್ ಕಹಾನಿಯನ್ನು ಇಟ್ಟುಕೊಂಡು ‘ತಂಡೇಲ್’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ: ನಾಗ ಚೈತನ್ಯ, ಶೋಭಿತಾ ಬಗ್ಗೆ ಭವಿಷ್ಯ: ಕ್ಷಮೆ ಕೇಳಿದ ಸೆಲೆಬ್ರಿಟಿ ಜ್ಯೋತಿಷಿ

2023ರಲ್ಲಿ ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಆ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಾಗಿ ಅವರು ಈಗ ಒಂದು ಗೆಲುವಿಗಾಗಿ ಕಾಯುತ್ತಿದ್ದಾರೆ. ‘ತಂಡೇಲ್’ ಸಿನಿಮಾದ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಉತ್ತಮ ಬಿಸ್ನೆಸ್ ಮಾಡಿದೆ. ಫೆಬ್ರವರಿ 7ರಂದು ಬಿಡುಗಡೆ ಆಗಲಿದ್ದು, ಟ್ರೇಲರ್​ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಚಂದು ಮೊಂಡೆಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ