AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್

ಲವ್ ಸ್ಟೋರಿ ಮತ್ತು ದೇಶಪ್ರೇಮದ ಕಥೆ ‘ತಂಡೇಲ್’ ಸಿನಿಮಾದಲ್ಲಿದೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಫೆ.7ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ರಿಲೀಸ್ ಮಾಡಲಾಗಿದೆ. ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್
Naga Chaitanya, Sai Pallavi
ಮದನ್​ ಕುಮಾರ್​
|

Updated on: Jan 28, 2025 | 10:03 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ತಂಡೇಲ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿತ್ತು. ಈಗ ಈ ಸಿನಿಮಾಗೆ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಫೆಬ್ರವರಿ 7ರಂದು ಅದ್ದೂರಿಯಾಗಿ ‘ತಂಡೇಲ್’ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಜೋಡಿಯಾಗಿ ನಟಿಸಿದ್ದಾರೆ. ನಾಗ ಚೈತನ್ಯ ಅವರ ಗೆಟಪ್ ಡಿಫರೆಂಟ್ ಆಗಿದೆ. ಇಂದು (ಜನವರಿ 28) ‘ತಂಡೇಲ್’ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಈ ಮೊದಲು ‘ಲವ್ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರಿಬ್ಬರು ‘ತಂಡೇಲ್’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯಾಗಿ ಡಿಗ್ಲಾಮ್ ಲುಕ್​ನಲ್ಲಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ.

‘ತಂಡೇಲ್’ ಸಿನಿಮಾ ಟ್ರೇಲರ್​:

‘ತಂಡೇಲ್’ ಸಿನಿಮಾದಲ್ಲಿ ಪ್ರೇಮಕಥೆ ಮತ್ತು ದೇಶಪ್ರೇಮದ ಕಹಾನಿ ಇರಲಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ನಾಗ ಚೈತನ್ಯ ಅವರು ಭರ್ಜರಿ ಆ್ಯಕ್ಷನ್​ ಕೂಡ ಮಾಡಿದ್ದಾರೆ. ಮೀನು ಹಿಡಿಯಲು ಸಮುದ್ರಕ್ಕೆ ಇಳಿಯುವ ಕಥಾನಾಯಕ ಪ್ರಕೃತಿ ವಿಕೋಪದ ಕಾರಣದಿಂದ ಪಾಕಿಸ್ತಾನದ ಗಡಿ ತಲುಪುತ್ತಾನೆ. ಆತ ಯಾವಾಗ ಬರುತ್ತಾನೆ ಎಂಬುದನ್ನೇ ಕಾಯುತ್ತಾಳೆ ಪ್ರೇಯಸಿ. ಇಂಥ ಒಂದು ಎಮೋಷನಲ್ ಕಹಾನಿಯನ್ನು ಇಟ್ಟುಕೊಂಡು ‘ತಂಡೇಲ್’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ: ನಾಗ ಚೈತನ್ಯ, ಶೋಭಿತಾ ಬಗ್ಗೆ ಭವಿಷ್ಯ: ಕ್ಷಮೆ ಕೇಳಿದ ಸೆಲೆಬ್ರಿಟಿ ಜ್ಯೋತಿಷಿ

2023ರಲ್ಲಿ ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಆ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಾಗಿ ಅವರು ಈಗ ಒಂದು ಗೆಲುವಿಗಾಗಿ ಕಾಯುತ್ತಿದ್ದಾರೆ. ‘ತಂಡೇಲ್’ ಸಿನಿಮಾದ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಉತ್ತಮ ಬಿಸ್ನೆಸ್ ಮಾಡಿದೆ. ಫೆಬ್ರವರಿ 7ರಂದು ಬಿಡುಗಡೆ ಆಗಲಿದ್ದು, ಟ್ರೇಲರ್​ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಚಂದು ಮೊಂಡೆಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ