Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್

ಲವ್ ಸ್ಟೋರಿ ಮತ್ತು ದೇಶಪ್ರೇಮದ ಕಥೆ ‘ತಂಡೇಲ್’ ಸಿನಿಮಾದಲ್ಲಿದೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಫೆ.7ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ರಿಲೀಸ್ ಮಾಡಲಾಗಿದೆ. ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್
Naga Chaitanya, Sai Pallavi
Follow us
ಮದನ್​ ಕುಮಾರ್​
|

Updated on: Jan 28, 2025 | 10:03 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ತಂಡೇಲ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿತ್ತು. ಈಗ ಈ ಸಿನಿಮಾಗೆ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಫೆಬ್ರವರಿ 7ರಂದು ಅದ್ದೂರಿಯಾಗಿ ‘ತಂಡೇಲ್’ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಜೋಡಿಯಾಗಿ ನಟಿಸಿದ್ದಾರೆ. ನಾಗ ಚೈತನ್ಯ ಅವರ ಗೆಟಪ್ ಡಿಫರೆಂಟ್ ಆಗಿದೆ. ಇಂದು (ಜನವರಿ 28) ‘ತಂಡೇಲ್’ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಈ ಮೊದಲು ‘ಲವ್ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರಿಬ್ಬರು ‘ತಂಡೇಲ್’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯಾಗಿ ಡಿಗ್ಲಾಮ್ ಲುಕ್​ನಲ್ಲಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ.

‘ತಂಡೇಲ್’ ಸಿನಿಮಾ ಟ್ರೇಲರ್​:

‘ತಂಡೇಲ್’ ಸಿನಿಮಾದಲ್ಲಿ ಪ್ರೇಮಕಥೆ ಮತ್ತು ದೇಶಪ್ರೇಮದ ಕಹಾನಿ ಇರಲಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ನಾಗ ಚೈತನ್ಯ ಅವರು ಭರ್ಜರಿ ಆ್ಯಕ್ಷನ್​ ಕೂಡ ಮಾಡಿದ್ದಾರೆ. ಮೀನು ಹಿಡಿಯಲು ಸಮುದ್ರಕ್ಕೆ ಇಳಿಯುವ ಕಥಾನಾಯಕ ಪ್ರಕೃತಿ ವಿಕೋಪದ ಕಾರಣದಿಂದ ಪಾಕಿಸ್ತಾನದ ಗಡಿ ತಲುಪುತ್ತಾನೆ. ಆತ ಯಾವಾಗ ಬರುತ್ತಾನೆ ಎಂಬುದನ್ನೇ ಕಾಯುತ್ತಾಳೆ ಪ್ರೇಯಸಿ. ಇಂಥ ಒಂದು ಎಮೋಷನಲ್ ಕಹಾನಿಯನ್ನು ಇಟ್ಟುಕೊಂಡು ‘ತಂಡೇಲ್’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ: ನಾಗ ಚೈತನ್ಯ, ಶೋಭಿತಾ ಬಗ್ಗೆ ಭವಿಷ್ಯ: ಕ್ಷಮೆ ಕೇಳಿದ ಸೆಲೆಬ್ರಿಟಿ ಜ್ಯೋತಿಷಿ

2023ರಲ್ಲಿ ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಆ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಾಗಿ ಅವರು ಈಗ ಒಂದು ಗೆಲುವಿಗಾಗಿ ಕಾಯುತ್ತಿದ್ದಾರೆ. ‘ತಂಡೇಲ್’ ಸಿನಿಮಾದ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಉತ್ತಮ ಬಿಸ್ನೆಸ್ ಮಾಡಿದೆ. ಫೆಬ್ರವರಿ 7ರಂದು ಬಿಡುಗಡೆ ಆಗಲಿದ್ದು, ಟ್ರೇಲರ್​ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಚಂದು ಮೊಂಡೆಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ