ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ; ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ಹೀರೋ

‘ಮನಂ’ ಸಿನಿಮಾ 2014ರ ಮೇ 23ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಈಗ ದಶಕಗಳ ಸಂಭ್ರಮ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಸಿನಿಮಾನ ಮತ್ತೊಮ್ಮೆ ಬಿಡುಗಡೆ ಮಾಡಲಾಗಿದೆ. ಚಿತ್ರದ ನಿರ್ದೇಶಕ ವಿಕ್ರಮ್ ಕುಮಾರ್ ಜೊತೆಗೆ ನಾಗ ಚೈತನ್ಯ ಸಿನಿಮಾ ನೋಡಿದ್ದಾರೆ. ಅಭಿಮಾನಿಗಳ ಮಧ್ಯೆ ಕುಳಿತು ಸಿನಿಮಾ ನೋಡಿ ಎಂಜಾಯ್ ಮಾಡಿದರು.

ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ; ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ಹೀರೋ
ಸಮಂತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: May 24, 2024 | 2:13 PM

ನಾಗ ಚೈತನ್ಯ ಹಾಗೂ ಸಮಂತಾ (Samantha) ಪತಿ-ಪತ್ನಿಯರಾಗಿ ನಾಲ್ಕು ವರ್ಷಗಳ ಕಾಲ ಸಂಸಾರ ನಡೆಸಿದ್ದರು. ಆದರೆ, ಅವರು ಬೇರೆ ಆಗುವ ನಿರ್ಧಾರ ತೆಗೆದುಕೊಂಡರು. ಅದಾದ ಬಳಿಕ ಈವರೆಗೆ ಸಮಂತಾ ಹಾಗೂ ನಾಗ ಚೈತನ್ಯ ಮುಖಾಮುಖಿ ಆಗಿಲ್ಲ. ಈಗ ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡುವ ಅಪರೂಪದ ಅವಕಾಶ ನಾಗ ಚೈತನ್ಯ ಅವರಿಗೆ ಸಿಕ್ಕಿತ್ತು. ಈ ವೇಳೆ ಅವರ ರಿಯಾಕ್ಷನ್ ನೋಡಿ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

‘ಮನಂ’ ಸಿನಿಮಾ 2014ರ ಮೇ 23ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಈಗ ದಶಕಗಳ ಸಂಭ್ರಮ. ಈ ಸಿನಿಮಾದಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್, ಅಕ್ಕಿನೇನಿ ನಾಗಾರ್ಜುನ, ನಾಗ ಚೈತನ್ಯ, ಅಖಿಲ್ ಮತ್ತು ಸಮಂತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಸಿನಿಮಾನ ಮತ್ತೊಮ್ಮೆ ಬಿಡುಗಡೆ ಮಾಡಲಾಗಿದೆ. ತೆಲುಗು ರಾಜ್ಯಗಳಲ್ಲಿ ‘ಮನಂ’ ಸಿನಿಮಾದ ವಿಶೇಷ ಪ್ರದರ್ಶನಗಳು ನಡೆಯುತ್ತಿವೆ. ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣಂನ ಹಲವು ಚಿತ್ರಮಂದಿರಗಳಲ್ಲಿ ‘ಮನಂ’ ಸಿನಿಮಾ ವಿಶೇಷ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ: ‘ನೀವು ಗೆಲುವಿಗೆ ಅರ್ಹರು’; ಆರ್​​ಸಿಬಿ ಜಯಕ್ಕೆ ಪ್ರಾರ್ಥಿಸಿದ್ರಾ ಸಮಂತಾ?

ಗುರುವಾರ (ಮೇ 23) ರಾತ್ರಿ ಹೈದರಾಬಾದ್​ನಲ್ಲಿ ‘ಮನಂ’ ಸಿನಿಮಾದ ವಿಶೇಷ ಪ್ರದರ್ಶನ ಇತ್ತು. ಈ ವೇಳೆ ಚಿತ್ರದ ನಿರ್ದೇಶಕ ವಿಕ್ರಮ್ ಕುಮಾರ್ ಜೊತೆಗೆ ನಾಗ ಚೈತನ್ಯ ಹಾಜರಾಗಿದ್ದರು. ಅಭಿಮಾನಿಗಳ ಮಧ್ಯೆ ಕುಳಿತು ಸಿನಿಮಾ ನೋಡಿ ಎಂಜಾಯ್ ಮಾಡಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಈ ಸಿನಿಮಾದಲ್ಲಿ ಸಮಂತಾ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ತೆರೆ ಮೇಲೆ ಸಮಂತಾ ಅವರನ್ನು ನೋಡಿದ ಅವರ ಖುಷಿಗೆ ಪಾರವೇ ಇರಲಿಲ್ಲ. ಸಮಂತಾ ದೃಶ್ಯ ಪರದೆಮೇಲೆ ಬರುತ್ತಿದ್ದಂತೆ ನಾಗ ಚೈತನ್ಯ ನಕ್ಕರು. ಈ ವಿಡಿಯೋಗಳು ವೈರಲ್ ಆಗುತ್ತಿವೆ.

‘ಮನಂ’ ಚಿತ್ರದಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಗಂಡ-ಹೆಂಡತಿಯಾಗಿ ನಟಿಸಿದ್ದರು. ‘ಏ ಮಾಯ ಚೇಸಾವೆ’ ಚಿತ್ರದ ಮೂಲಕ ಇಬ್ಬರ ಪರಿಚಯ ಆಗಿ, ಆ ಬಳಿಕ ಅದು ಪ್ರೀತಿಗೆ ತಿರುಗಿತ್ತು. 2017ರಲ್ಲಿ ಇವರ ಮದುವೆ ನಡೆಯಿತು. ಮದುವೆಯಾದ ನಾಲ್ಕು ವರ್ಷಗಳ ನಂತರ ಅಂದರೆ 2021ರಲ್ಲಿ ಇವರು ವಿಚ್ಛೇದನ ಪಡೆದಿರುವುದಾಗಿ ಘೋಷಿಸಿದರು. ಇವರು ಬೇರೆ ಆಗಲು ಇನ್ನೂ ಕಾರಣಗಳು ತಿಳಿದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ