AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಶುಭಕೋರಿದ ಸೆಲೆಬ್ರಿಟಿಗಳು

ನಾಗ ಚೈತನ್ಯ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಪ್ರೇಯಸಿ ಶೋಭಿತಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಹೈದರಾಬಾದ್​ನಲ್ಲಿ ಇಂದು (ಡಿ.4) ಈ ಮದುವೆ ನಡೆದಿದೆ. ಆಪ್ತರು, ಕುಟುಂಬದರು ಈ ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದರು. ಅಕ್ಕಿನೇನಿ ನಾಗಾರ್ಜುನ ಅವರು ಮಗನ ಮದುವೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭ ಕೋರಿದ್ದಾರೆ.

ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಶುಭಕೋರಿದ ಸೆಲೆಬ್ರಿಟಿಗಳು
ನಾಗ ಚೈತನ್ಯ, ನಾಗಾರ್ಜುನ, ಶೋಭಿತಾ
ಮದನ್​ ಕುಮಾರ್​
|

Updated on: Dec 04, 2024 | 11:14 PM

Share

ನಟಿ ಸಮಂತಾಗೆ ವಿಚ್ಛೇದನ ನೀಡಿದ್ದ ನಾಗ ಚೈತನ್ಯ ಅವರು ಈಗ ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಹಸೆಮಣೆ ಏರಿದ್ದಾರೆ. ಇಂದು (ಡಿಸೆಂಬರ್​ 4) ಹೈದರಾಬಾದ್​ನಲ್ಲಿ ಈ ಮದುವೆ ನಡೆದಿದೆ. ಕೆಲವು ಗಣ್ಯರು ಮದುವೆಗೆ ಸಾಕ್ಷಿ ಆಗಿದ್ದಾರೆ. ನಾಗ ಚೈತನ್ಯ ತಂದೆ, ಹಿರಿಯ ನಟ ನಾಗಾರ್ಜುನ ಅವರು ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹೊಸ ಜೀವನ ಆರಂಭಿಸುತ್ತಿರುವ ಮಗನಿಗೆ ಅವರು ಆಶೀರ್ವಾದ ಮಾಡಿದ್ದಾರೆ. ನಾಗ ಚೈತನ್ಯ ಮತ್ತು ಶೋಭಿತಾ ಅವರ ಮದುವೆಯ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.

‘ನಾಗ ಚೈತನ್ಯ ಮತ್ತು ಶೋಭಿತಾ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿರುವುದನ್ನು ನೋಡಲು ಖುಷಿ ಆಗುತ್ತದೆ. ಇದು ನನಗೆ ಒಂದು ಭಾವನಾತ್ಮಕ ಕ್ಷಣ. ನಾಗ ಚೈತನ್ಯಗೆ ಅಭಿನಂದನೆಗಳು. ನಮ್ಮ ಕುಟುಂಬಕ್ಕೆ ಶೋಭಿತಾಗೆ ಸ್ವಾಗತ. ನೀನು ಈಗಾಗಲೇ ನಮ್ಮ ಬದುಕಿನಲ್ಲಿ ಸಾಕಷ್ಟು ಖುಷಿ ತಂದಿರುವೆ’ ಎಂದು ಅಕ್ಕಿನೇನಿ ನಾಗಾರ್ಜುನ ಅವರು ಮದುವೆಯ ಈ ಫೋಟೋಗಳ ಜೊತೆ ಕ್ಯಾಪ್ಷನ್ ನೀಡಿದ್ದಾರೆ.

ಹೈದರಾಬಾದ್​ನ ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಅವರ ಮದುವೆ ನಡೆದಿದೆ. ಕುಟುಂಬದ ಸದಸ್ಯರು ಮತ್ತು ಆಪ್ತ ಬಳಗದವರು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ಅವರ ಮೂರ್ತಿಯ ಕೆಳಗೆ ಮದುವೆ ನಡೆದಿರುವುದು ವಿಶೇಷ ಎಂದು ನಾಗಾರ್ಜುನ ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಹೊಸ ಜೋಡಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

‘ಅಕ್ಕಾ ನೀನು ಅತ್ಯಂತ ಸುಂದರ ವಧು’; ಶೋಭಿತಾ ಬಗ್ಗೆ ಕಮೆಂಟ್ ಮಾಡಿದ ಸಮಂತಾ

ತೆಲುಗು ಚಿತ್ರರಂಗದಲ್ಲಿ ನಾಗ ಚೈತನ್ಯ ಅವರು ಬೇಡಿಕೆ ಹೊಂದಿದ್ದಾರೆ. ವೆಬ್ ಸಿರೀಸ್​ ಕ್ಷೇತ್ರದಲ್ಲಿ ಮಿಂಚಿದ್ದಾರೆ. ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದರು. 2017ರಲ್ಲಿ ಅವರಿಬ್ಬರ ಮದುವೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ಅವರು 2021ರಲ್ಲಿ ವಿಚ್ಛೇದನ ಪಡೆದಿದ್ದರು. ಈಗಲೂ ಸಮಂತಾ ಅವರು ಸಿಂಗಲ್ ಆಗಿದ್ದಾರೆ. ಸಮಂತಾಗೆ ವಿಚ್ಛೇದನ ನೀಡಿದ ಬಳಿಕ ಶೋಭಿತಾ ಜೊತೆ ನಾಗ ಚೈತನ್ಯ ಡೇಟಿಂಗ್ ಮಾಡಲು ಆರಂಭಿಸಿದ್ದರು. ಈಗ ಅವರಿಬ್ಬರು ಪತಿ-ಪತ್ನಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ