AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು

Naga Chaitanya Tattoo: ನಾಗ ಚೈತನ್ಯ ಅವರ ಮೊಣಕೈ ಮೇಲೆ ಒಂದು ಟ್ಯಾಟೂ ಇದೆ. ಅದು ಅವರ ಮದುವೆ ದಿನಾಂಕವನ್ನು ಸೂಚಿಸುತ್ತದೆ. ಆ ಟ್ಯಾಟೂ ತೆಗೆಸುವ ಬಗ್ಗೆ ಸದ್ಯ ಏನೂ ಯೋಚಿಸಿಲ್ಲ ಎಂದು ಅವರು ಹೇಳಿದ್ದಾರೆ.

Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
ನಾಗ ಚೈತನ್ಯ, ಸಮಂತಾ
TV9 Web
| Edited By: |

Updated on:Aug 10, 2022 | 7:25 AM

Share

ಟಾಲಿವುಡ್​ನ ಕ್ಯೂಟ್​ ದಂಪತಿ ಆಗಿದ್ದ ನಾಗ ಚೈತನ್ಯ (Naga Chaitanya) ಮತ್ತು ಸಮಂತಾ ಅವರು ಏಕಾಏಕಿ ಡಿವೋರ್ಸ್​ ಪಡೆದುಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅಭಿಮಾನಿಗಳಿಗೆ ಅವರಿಬ್ಬರ ವಿಚ್ಛೇದನದ ಸುದ್ದಿ ಕೇಳಿ ಶಾಕ್​ ಆಗಿತ್ತು. ಸಮಂತಾ ರುತ್​ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಬೇರೆ ಬೇರೆ ಆಗಿದ್ದಕ್ಕೆ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅವರಿಬ್ಬರು ವಿಚ್ಛೇದನ ಪಡೆದು ಹಲವು ತಿಂಗಳು ಕಳೆದರೂ ಆ ಬಗ್ಗೆ ಚರ್ಚೆ ನಿಂತಿಲ್ಲ. ಅವರು ಯಾವುದೇ ಸಂದರ್ಶನಕ್ಕೆ ಹೋದರೂ ಅಲ್ಲಿ ಈ ಡಿವೋರ್ಸ್ (Samantha Divorce)​ ಕುರಿತು ಪ್ರಶ್ನೆ ಎದುರಾಗುತ್ತದೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಪ್ರಮೋಷನ್​ ಸಲುವಾಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಾಗ ಚೈತನ್ಯ ಅವರು ಸಮಂತಾ ಬಗ್ಗೆ ಮಾತನಾಡಿದ್ದಾರೆ.

‘ಒಂದು ವೇಳೆ ಸಮಂತಾ ಎದುರು ಸಿಕ್ಕರೆ ಏನು ಮಾಡ್ತೀರಿ’ ಎಂದು ಕೇಳಿದ ಪ್ರಶ್ನೆಗೆ ನಾಗ ಚೈತನ್ಯ ನೇರವಾಗಿ ಉತ್ತರಿಸಿದ್ದಾರೆ. ‘ಮೊದಲು ಹಾಯ್​ ಹೇಳುತ್ತೇನೆ. ನಂತರ ತಬ್ಬಿಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೇ ಮಾಜಿ ಪತ್ನಿಯ ನೆನಪಿಗಾಗಿ ಉಳಿದುಕೊಂಡಿರುವ ಟ್ಯಾಟೂ ಬಗ್ಗೆಯೂ ಅವರು ಬಾಯಿ ಬಿಟ್ಟಿದ್ದಾರೆ.

ನಾಗ ಚೈತನ್ಯ ಅವರ ಮೊಣಕೈ ಮೇಲೆ ಒಂದು ಟ್ಯಾಟೂ ಇದೆ. ಅದರ ಅರ್ಥ ಏನು ಎಂಬುದು ಗೊತ್ತಿಲ್ಲದಿದ್ದರೂ ಕೂಡ ಅದನ್ನು ಕಾಪಿ ಮಾಡಿ ಅನೇಕ ಅಭಿಮಾನಿಗಳು ಅದೇ ರೀತಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಅದು ತಮ್ಮ ಮದುವೆ ದಿನಾಂಕವನ್ನು ಸೂಚಿಸುತ್ತದೆ ಎಂದು ನಾಗ ಚೈತನ್ಯ ಹೇಳಿದ್ದಾರೆ. ಆ ಟ್ಯೂಟೂ ತೆಗೆಸುವ ಬಗ್ಗೆ ಸದ್ಯ ಏನೂ ಯೋಚಿಸಿಲ್ಲ ಎಂದು ಅವರು ಹೇಳಿದ್ದಾರೆ. ಅಭಿಮಾನಿಗಳು ಇದನ್ನು ಕಾಪಿ ಮಾಡುವುದು ಕೂಡ ತಮಗೆ ಇಷ್ಟ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Image
Samantha: ಸಮಂತಾಗೆ ಜೋಡಿಯಾಗಲು ಸಿದ್ಧವಾಗಿದೆ ಬಾಲಿವುಡ್​ ಹೀರೋಗಳ ಪಟ್ಟಿ; ಆದ್ರೂ ಫ್ಯಾನ್ಸ್​ಗೆ ಸಮಾಧಾನ ಇಲ್ಲ
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?

ಸಿನಿಮಾ ವಿಚಾರಕ್ಕೆ ಬರುವುದಾದರೆ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಒಂದು ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರದಿಂದಾಗಿ ಆಮಿರ್​ ಖಾನ್​ ಮತ್ತು ನಾಗ ಚೈತನ್ಯ ನಡುವೆ ಆಪ್ತತೆ ಹೆಚ್ಚಿದೆ. ಕೆಲವರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:24 am, Wed, 10 August 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?