AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Chaitanya: ಸೋತು ಸುಣ್ಣವಾಗಿದ್ದ ನಾಗ ಚೈತನ್ಯಗೂ ಬಂತು ಒಳ್ಳೆಯ ಟೈಮ್​; ಹುಡುಕಿಕೊಂಡು ಬಂದ್ರು ನಿರ್ಮಾಪಕರು

ಸತತವಾಗಿ ಸೋತ ಹೀರೋ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಂದೆಬರುವುದು ಕಡಿಮೆ. ನಾಗ ಚೈತನ್ಯ ಅವರ ಪರಿಸ್ಥಿತಿ ಕೂಡ ಹೀಗೆಯೇ ಆಗಬಹುದು ಎಂದು ಊಹಿಸಲಾಗಿತ್ತು. ಆದರೆ ಹಾಗೆ ಆಗಿಲ್ಲ.

Naga Chaitanya: ಸೋತು ಸುಣ್ಣವಾಗಿದ್ದ ನಾಗ ಚೈತನ್ಯಗೂ ಬಂತು ಒಳ್ಳೆಯ ಟೈಮ್​; ಹುಡುಕಿಕೊಂಡು ಬಂದ್ರು ನಿರ್ಮಾಪಕರು
ನಾಗ ಚೈತನ್ಯ
ಮದನ್​ ಕುಮಾರ್​
|

Updated on: May 27, 2023 | 8:05 PM

Share

ನಟ ನಾಗ ಚೈತನ್ಯ (Naga Chaitanya) ಅವರು ನಟಿಸಿದ ಇತ್ತೀಚಿನ ಸಿನಿಮಾಗಳು ಗೆದ್ದಿಲ್ಲ. ‘ಮಜಿಲಿ’, ‘ಲವ್​ ಸ್ಟೋರಿ’ ನಂತರ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ಎಡವಿದರು. ‘ಥ್ಯಾಂಕ್​ ಯೂ’ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗಲಿಲ್ಲ. ‘ಕಸ್ಟಡಿ’ (Custody Movie) ನೋಡಿದ ಜನರಿಂದ ಮಿಶ್ರಪ್ರತಿಕ್ರಿಯೆ ಸಿಕ್ಕಿತು. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆದ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ನಾಗ ಚೈತನ್ಯ ಅವರು ಬೇರೆ ರೀತಿಯ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ. ಹಾಗಂತ ಅವರು ಚಿಂತೆ ಮಾಡುವ ಅಗತ್ಯ ಇಲ್ಲ. ಅವರಿಗೂ ಈಗ ಒಳ್ಳೆಯ ಟೈಮ್​ ಬಂದಂತಿದೆ. ಅವರನ್ನು ಹುಡುಕಿಕೊಂಡು ನಿರ್ಮಾಪಕರು ಬಂದಿದ್ದಾರೆ. ಜಿಎ2 ಪಿಕ್ಚರ್ಸ್​ನ (GA2 Pictures) ಬನ್ನಿ ವಾಸ್​ ಅವರು ನಾಗ ಚೈತನ್ಯ ಜೊತೆ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಸತತವಾಗಿ ಸೋತ ಹೀರೋ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಂದೆಬರುವುದು ಕಡಿಮೆ. ನಾಗ ಚೈತನ್ಯ ಅವರ ಪರಿಸ್ಥಿತಿ ಕೂಡ ಹೀಗೆಯೇ ಆಗಬಹುದು ಎಂದು ಊಹಿಸಲಾಗಿತ್ತು. ಆದರೆ ಹಾಗೆ ಆಗಿಲ್ಲ. ನಾಗ ಚೈತನ್ಯ ಅವರ ಮುಂದಿನ ಸಿನಿಮಾಗೆ ‘ಜಿಎ2 ಪಿಕ್ಚರ್ಸ್​’ ಸಂಸ್ಥೆಯು ಬಂಡವಾಳ ಹೂಡಲಿದೆ. ಆದರೆ ಈ ಚಿತ್ರಕ್ಕೆ ಯಾರು ನಿರ್ದೇಶನ ಮಾಡುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸಮಂತಾ ರುತ್​ ಪ್ರಭು ಅವರಿಗೆ ಡಿವೋರ್ಸ್​ ನೀಡಿದ ಬಳಿಕ ನಾಗ ಚೈತನ್ಯ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಗೆಲುವು ಎಂಬುದು ಮರೀಚಿಕೆ ಆಗಿದೆ. ಹೊಸ ಸಿನಿಮಾದ ಮೂಲಕವಾದರೂ ಅವರು ಗೆಲ್ಲಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ: ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತು, ಮೂರನೇ ವ್ಯಕ್ತಿಗಳ ಬಗ್ಗೆ ಆಕ್ರೋಶ

ಅಕ್ಕಿನೇನಿ ಕುಟುಂಬದ ಹೀರೋಗಳಿಗೆ ಸತತ ಸೋಲು:

ತೆಲುಗು ಚಿತ್ರರಂಗದಲ್ಲಿ ಮಾಸ್​ ಸಿನಿಮಾಗಳು ಹೆಚ್ಚು ಸದ್ದು ಮಾಡುತ್ತವೆ ಎಂಬ ಮಾತು ಇದೆ. ಆದರೆ ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡಿ ಎಂಜಾಯ್​ ಮಾಡಿರುವ ಜನರು ಈಗ ಹೊಸತನದ ಕಥೆಗಳನ್ನು ಬಯಸುತ್ತಿದ್ದಾರೆ. ಅದೇ ಕಾರಣಕ್ಕೋ ಏನೋ ಟಾಲಿವುಡ್​ನ ಕೆಲವು ಸಿನಿಮಾಗಳು ಮುಗ್ಗರಿಸುತ್ತಿವೆ. ಹಳೇ ಮಾದರಿಯಲ್ಲೇ ಸಿನಿಮಾ ಮಾಡಿದ ಹೀರೋಗಳಿಗೆ ಸೋಲು ಉಂಟಾಗುತ್ತಿದೆ. ಅದರಲ್ಲೂ ಅಕ್ಕಿನೇನಿ ಕುಟುಂಬದ ನಟರು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿದ್ದಾರೆ. ಹಿರಿಯ ನಟ ನಾಗಾರ್ಜುನ ಮಾಡಿದ ಚಿತ್ರಗಳು ಜನರಿಗೆ ಮೆಚ್ಚುಗೆ ಆಗುತ್ತಿಲ್ಲ. ಅವರ ಪುತ್ರರಾದ ನಾಗ ಚೈತನ್ಯ ಮತ್ತು ಅಖಿಲ್​ ನಟನೆಯ ಸಿನಿಮಾಗಳನ್ನು ಕೂಡ ಪ್ರೇಕ್ಷಕರು ರಿಜೆಕ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಜೀವನದ ಯಾವ ನಿರ್ಧಾರದ ಬಗ್ಗೆಯೂ ವಿಷಾದ ಇಲ್ಲ’; ನೇರ ಮಾತುಗಳಲ್ಲಿ ಹೇಳಿದ ನಾಗ ಚೈತನ್ಯ

ನಾಗಾರ್ಜುನ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಯಾಕೆಂದರೆ ಅವರು ನಟಿಸಿದ ‘ವೈಲ್ಡ್​ ಡಾಗ್​’, ‘ಆಫೀಸರ್​​’ ಮತ್ತು ‘ದಿ ಘೋಸ್ಟ್​’ ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಅದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅಖಿಲ್​ ಅಕ್ಕಿನೇನಿ ಅವರಿಗೆ ಟಾಲಿವುಡ್​ನಲ್ಲಿ ನೆಲೆ ಕಂಡುಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ. ಮಾಡಿದ ಒಂದೆರಡು ಸಿನಿಮಾಗಳು ಕೂಡ ಗೆಲ್ಲಲಿಲ್ಲ. ಹೇಗಾದರೂ ಮಾಡಿ ಯಶಸ್ಸು ಕಾಣಲೇಬೇಕು ಎಂಬ ಉದ್ದೇಶದಿಂದ ಅವರು ‘ಏಜೆಂಟ್​’ ಸಿನಿಮಾ ಮಾಡಿದರು. ಆದರೂ ಕೂಡ ಅವರಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗಲಿಲ್ಲ. ಇತ್ತೀಚೆಗೆ ತೆರೆಕಂಡ ಈ ಚಿತ್ರಕ್ಕಾಗಿ ಅಖಿಲ್​ ಅವರು ತುಂಬ ಶ್ರಮಪಟ್ಟಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು