AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ನಗುವಿಗೆ ಅಡ್ಡ ಆಗ್ತಿರೋದೇನು? ಅಭಿಮಾನಿಗಳಿಗೆ ಮೂಡಿದೆ ಪ್ರಶ್ನೆ

Naga Chaitanya: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ್ ಅವರ ವಿವಾಹ ಅದ್ದೂರಿಯಾಗಿ ನೆರವೇರಿತು. ಮದುವೆಯ ನಂತರ ಅವರು ಶ್ರೀಶೈಲಕ್ಕೆ ಭೇಟಿ ನೀಡಿದರು. ಸಮಂತಾ ಜೊತೆಗಿನ ಅವರ ಹಿಂದಿನ ನಗುವಿನ ಹೋಲಿಕೆ ಮತ್ತು ಈಗಿನ ಅವರ ಮುಖಭಾವಗಳ ಬಗ್ಗೆ ಅಭಿಮಾನಿಗಳು ಚರ್ಚಿಸುತ್ತಿದ್ದಾರೆ.

ನಾಗ ಚೈತನ್ಯ ನಗುವಿಗೆ ಅಡ್ಡ ಆಗ್ತಿರೋದೇನು? ಅಭಿಮಾನಿಗಳಿಗೆ ಮೂಡಿದೆ ಪ್ರಶ್ನೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 08, 2024 | 4:27 PM

Share

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರು ಇತ್ತೀಚೆಗೆ ವಿವಾಹ ಆದರು. ಇವರ ಮದುವೆ ಅದ್ದೂರಿಯಾಗಿ ನೆರವೇರಿದೆ. ಮದುವೆ ಬಳಿಕ ಶ್ರೀಶೈಲಕ್ಕೆ ದಂಪತಿ ಭೇಟಿ ಕೊಟ್ಟಿದ್ದಾರೆ. ಮದುವೆ ಆದ ಬಳಿಕ ಇವರು ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಸಮಂತಾ ಹಾಗೂ ನಾಗ ಚೈತನ್ಯ ಮೊದಲು ಒಟ್ಟಾಗಿ ಸಂಸಾರ ನಡೆಸಿದ್ದರು. ಆಗ ನಾಗ ಚೈತನ್ಯ ಸಾಕಷ್ಟು ನಗುತ್ತಿದ್ದರು. ಆದರೆ, ಈಗ ಅವರು ನಗು ಮಾಯ ಆಗಿದೆ ಎಂದು ಅನೇಕರು ಹೇಳಿದ್ದಾರೆ.

ನಾಗ ಚೈತನ್ಯ ಹಾಗೂ ಸಮಂತಾ ಅವರು ಹಲವು ವರ್ಷಗಳ ಕಾಲ ಪ್ರೀತಿಸಿದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರ ತೆಗೆದುಕೊಂಡರು. ಇವರ ಮದುವೆ 2017ರಲ್ಲಿ ನಡೆದಿತ್ತು. ಆ ಮದುವೆಯ ಫೋಟೋಗಳನ್ನು ದಂಪತಿಗಳು ಈ ಮೊದಲು ಶೇರ್ ಮಾಡಿಕೊಂಡಿದ್ದರು. ಈವ ವೇಳೆ ಅವರು ಸಖತ್ ನಗು ಮುಖದಲ್ಲಿ ಇದ್ದರು. ಸಮಂತಾ ಜೊತೆ ನಗುತ್ತಾ ಇರುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ.

N

ಈಗ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ಮದುವೆ ಆಗಿದ್ದಾರೆ. ಮದುವೆ ಸಂದರ್ಭದಲ್ಲಿ ಅವರು ನಕ್ಕಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ‘ಅವರ ನಗುವನ್ನು ತಡೆ ಹಿಡಿಯುತ್ತಿರುವುದು ಏನು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಇಬ್ಬರೂ ಮದುವೆ ಆದರೂ ಖುಷಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್ಗಳು ಬಂದಿವೆ. ಅನೇಕರು ಈ ವಾದವನ್ನು ಒಪ್ಪಿಲ್ಲ.

ಇದನ್ನೂ ಓದಿ:ಸಮಂತಾ ಎದುರು ಶೋಭಿತಾ ಜನಪ್ರಿಯತೆಯೇ ಹೆಚ್ಚು; ನಾಗ ಚೈತನ್ಯ ಪತ್ನಿಗೆ 5ನೇ ಸ್ಥಾನ

ಏಕೆಂದರೆ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ಪ್ರೀತಿಸಿ ಮದುವೆ ಆದವರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದ ಬಳಿಕವೇ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು. ಹೀಗಿರುವಾಗ ಪರಸ್ಪರ ಇಷ್ಟ ಇಲ್ಲ ಎಂದು ಹೇಳುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಶೋಭಿತಾ ಹಾಗೂ ನಾಗ ಚೈತನ್ಯ ಶೀಘ್ರವೇ ವಿದೇಶಕ್ಕೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ವಿದೇಶದಲ್ಲಿ ಇವರು ಸುತ್ತಾಟ ನಡೆಸೋ ಸಾಧ್ಯತೆ ಇದೆ. ಡಿಸೆಂಬರ್ನ ಸಂಭ್ರಮದಿಂದ ಇವರು ಕಳೆಯಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು