AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತು, ಮೂರನೇ ವ್ಯಕ್ತಿಗಳ ಬಗ್ಗೆ ಆಕ್ರೋಶ

Naga Chaithanya: ತಮ್ಮ ಹಾಗೂ ಸಮಂತಾರ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತನಾಡಿದ್ದಾರೆ. ಈ ವೇಳೆ ಮೂರನೇ ವ್ಯಕ್ತಿಗಳ ಬಗ್ಗೆ ನಾಗ ಚೈತನ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತು, ಮೂರನೇ ವ್ಯಕ್ತಿಗಳ ಬಗ್ಗೆ ಆಕ್ರೋಶ
ಸಮಂತಾ-ನಾಗ ಚೈತನ್ಯ
ಮಂಜುನಾಥ ಸಿ.
|

Updated on: May 07, 2023 | 3:47 PM

Share

ಸಮಂತಾ (Samantha) ಹಾಗೂ ನಾಗ ಚೈತನ್ಯ (Naga Chaithanya) ವಿಚ್ಛೇದನ ಘೋಷಿಸಿ ಎರಡು ವರ್ಷಗಳಾಗಿವೆ. ಟಾಲಿವುಡ್​ನ (Tollywood) ಕ್ಯೂಟ್ ಜೋಡಿ ಎನಿಸಿಕೊಂಡಿದ್ದ ಸಮಂತಾ ಹಾಗೂ ನಾಗ ಚೈತನ್ಯ ಅವರುಗಳು 2021 ರಲ್ಲಿ ಬೇರ್ಪಡುತ್ತಿರುವುದಾಗಿ ಘೋಷಣೆ ಮಾಡಿದರು. ಇವರಿಬ್ಬರ ಈ ನಿರ್ಧಾರ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಅದಾದ ಬಳಿಕ ಇಬ್ಬರೂ ಸಹ ವಿಚ್ಛೇದನದ ಬಗ್ಗೆ ಹೆಚ್ಚಾಗಿ ಮಾತನಾಡಿರಲಿಲ್ಲ. ಕಾಫಿ ವಿತ್ ಕರಣ್​ನಲ್ಲಿ (Koffee With Karan) ಸಮಂತಾ ವಿಚ್ಛೇದನದ ಬಗ್ಗೆ ಕೆಲವು ಮಾತುಗಳನ್ನಾಡಿದ್ದರಾದರೂ ನಾಗ ಚತನ್ಯಾ ಎಲ್ಲಿಯೂ ಈ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಈ ವಿಷಯವಾಗಿ ಬಾಯ್ಬಿಟ್ಟಿದ್ದಾರೆ.

ನಾಗ ಚೈತನ್ಯ ನಟನೆಯ ಕಸ್ಟಡಿ ಹೆಸರಿನ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ಸಿನಿಮಾದ ಪ್ರಚಾರ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿರುವ ನಟ, ”ನಾನು ಹಾಗೂ ಸಮಂತಾ ನಮ್ಮ ನಮ್ಮ ಜೀವನದಲ್ಲಿ ಮುಂದಕ್ಕೆ ಸಾಗಿದ್ದೀವಿ. ಆದರೆ ಮಾಧ್ಯಮಗಳು ಏನೇನೋ ಹೇಳಿ ನಮ್ಮಿಬ್ಬರ ನಡುವೆ ಮುಜುಗರದ ವಾತಾವರಣವನ್ನು ಸೃಷ್ಟಿಸುತ್ತವೆ. ಅದರಲ್ಲಿಯೂ ತಾವು ಹೆಡ್​ಲೈನ್ ಸೃಷ್ಟಿಸಿಕೊಳ್ಳಲು ಮೂರನೇ ವ್ಯಕ್ತಿಯನ್ನು ತಂದು ಅವರಿಂದ ನಮ್ಮ ಜೀವನದ ಬಗ್ಗೆ ಜಡ್ಜ್​ಮೆಂಟ್​ಗಳನ್ನು ಕೊಡುತ್ತಾರೆ ಅದು ಬಹಳ ಸಿಟ್ಟು ತರಿಸುತ್ತದೆ. ಆ ಮೂರನೇ ವ್ಯಕ್ತಿಗೆ ನಮ್ಮ ಜೀವನದ ಜೊತೆಗೆ ನಂಟು ಇರುವುದಿಲ್ಲ. ಆತನೂ ಸಹ ಮತ್ತೊಬ್ಬರ ಖಾಸಗಿ ವಿಷಯದಲ್ಲಿ ಮೂಗು ತೂರಿಸಬಾರದು ಎಂಬ ವಿಷಯ ತಿಳಿದರಬೇಕು ಎಂದಿದ್ದಾರೆ.

ಸಮಂತಾ ಜೊತೆಗೆ ವಿಚ್ಛೇದನದ ಬಳಿಕ ನಾಗ್ ಚೈತನ್ಯ ಹೆಸರು ನಟಿ ಶೋಭಿತಾ ದುಲಿಪಾಲ ಜೊತೆ ಕೇಳಿ ಬರುತ್ತಿದೆ. ಇವರಿಬ್ಬರೂ ಒಟ್ಟಿಗೆ ಓಡಾಡುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಆದರೆ ಸಮಂತಾ ಜೊತೆ ವಿಚ್ಛೇದನ ಆದಾಗ, ವಿಚ್ಛೇದನಕ್ಕೆ ಸಮಂತಾರೇ ಕಾರಣವೆಂದು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿಗಳಲ್ಲಿ ದೂರಲಾಗಿತ್ತು. ಸಮಂತಾಗೆ ಅಕ್ರಮ ಸಂಬಂಧ ಇದೆಯೆಂದು, ಸಮಂತಾಗೆ ಮಗು ಬೇಕಿರಲಿಲ್ಲವೆಂದು ಅದಕ್ಕೆ ವಿಚ್ಛೇದನ ಆಗಿದೆ ಎನ್ನಲಾಗಿತ್ತು. ಇದು ಸಮಂತಾರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ಕೊಡಬಹುದಾಗಿದ್ದ ನಾಗ ಚೈತನ್ಯ ಮೌನಕ್ಕೆ ಶರಣಾಗಿದ್ದರು. ಇದು ಟೀಕೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ:ಸಮಂತಾ ಬಗ್ಗೆ ನಾಗ ಚೈತನ್ಯ ಮೆಚ್ಚುಗೆ; ಮಾಜಿ ಪತ್ನಿಯನ್ನು ಬಾಯ್ತುಂಬ ಹೊಗಳಿದ ನಟ

ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ವಿಚ್ಛೇದನದ ಬಳಿಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ಅಂತೂ ವಿಚ್ಛೇದನದ ಬಳಿಕ ಸಖತ್ ಬೋಲ್ಡ್ ಆದ ಪಾತ್ರಗಳನ್ನು ಮಾಡುತ್ತಿದ್ದಾರೆ. ನಾಗ ಚೈತನ್ಯ ಸಹ ಕೆಲವು ಸಿನಿಮಾಗಳನ್ನು ಮಾಡಿದರಾದರೂ ಹಿಟ್ ಸಿನಿಮಾ ಒಂದು ಅವರ ಕೈಹಿಡಿದಿಲ್ಲ. ಇದೀಗ ತಮಿಳಿನ ನಿರ್ದೇಶಕರೊಟ್ಟಿಗೆ ಕೈಜೋಡಿಸಿ ಕಸ್ಟಡಿ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದಲ್ಲಿ ಕಾನ್​ಸ್ಟೆಬಲ್ ಪಾತ್ರದಲ್ಲಿ ನಾಗ ಚೈತನ್ಯ ಕಾಣಿಸಿಕೊಂಡಿದ್ದಾರೆ. ಆರೋಪಿಯೊಬ್ಬನನ್ನು ನ್ಯಾಯಾಲಯಕ್ಕೆ ಒಪ್ಪಿಸುವ ಜವಾಬ್ದಾರಿ ಹೊತ್ತಿರುವ ಕಾನ್​ಸ್ಟೆಬಲ್ ಪಾತ್ರದಲ್ಲಿ ನಾಗ ಚೈತನ್ಯ ನಟಿಸಿದ್ದಾರೆ.

ಸಿನಿಮಾದ ಜೊತೆಗೆ ಹೋಟೆಲ್ ಉದ್ಯಮಕ್ಕೂ ನಾಗ ಚೈತನ್ಯ ಕೈ ಹಾಕಿದ್ದಾರೆ. ಶೋಯು ಹೆಸರಿನ ಕ್ಲೌಡ್ ಕಿಚನ್ ತೆರೆದಿದ್ದು ಏಷಿಯನ್, ಕಾಂಟಿನೆಂಟಲ್ ಆಹಾರಗಳನ್ನು ಆನ್​ಲೈನ್ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಒದಗಿಸುತ್ತಿದ್ದಾರೆ. ಅದರಲ್ಲಿಯೂ ಜಪಾನೀಸ್, ಚೈನೀಸ್ ಹಾಗೂ ಇನ್ನಿತರೆ ಏಷಿಯನ್ ದೇಶಗಳ ಆಹಾರ ಶೋಯು ಕ್ಲೌಡ್ ಕಿಚನ್​ನ ಟ್ರೇಡ್ ಮಾರ್ಕ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್