AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಸ್ಪೆಷಲ್ ಅಪ್​ಡೇಟ್ ಕೊಟ್ಟ ನಿರ್ಮಾಪಕ ನಾಗ ವಂಶಿ

‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಹಲವು ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಇನ್ನೂ ಚಿತ್ರದ ಶೂಟಿಂಗ್ ಪ್ರಗತಿಯಲ್ಲಿದೆ, ಡಬ್ಬಿಂಗ್ ಮುಗಿದಿಲ್ಲ ಎಂಬಿತ್ಯಾದಿ ವಿಚಾರಗಳು ಚರ್ಚೆಯಲ್ಲಿವೆ.

‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಸ್ಪೆಷಲ್ ಅಪ್​ಡೇಟ್ ಕೊಟ್ಟ ನಿರ್ಮಾಪಕ ನಾಗ ವಂಶಿ
ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 03, 2024 | 12:18 PM

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ (Guntur Kaaram Movie) ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರಕ್ಕೆ ತ್ರಿವಿಕ್ರಂ ಶ್ರೀನಿವಾಸ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾ ರಿಲೀಸ್​ಗೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಈ ಸಂದರ್ಭದಲ್ಲಿ ನಿರ್ಮಾಪಕ ನಾಗ ವಂಶಿ ಅವರು ಫ್ಯಾನ್ಸ್​ಗೆ ಖುಷಿ ಆಗುವಂಥ ವಿಚಾರ ರಿವೀಲ್ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಹಲವು ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಇನ್ನೂ ಚಿತ್ರದ ಶೂಟಿಂಗ್ ಪ್ರಗತಿಯಲ್ಲಿದೆ, ಡಬ್ಬಿಂಗ್ ಮುಗಿದಿಲ್ಲ ಎಂಬಿತ್ಯಾದಿ ವಿಚಾರಗಳು ಚರ್ಚೆಯಲ್ಲಿವೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಈ ಮಧ್ಯೆ ನಿರ್ಮಾಪಕ ನಾಗ ವಂಶಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಅಪ್​ಡೇಟ್ ಕೊಟ್ಟಿದ್ದಾರೆ.

‘ಗುಂಟೂರು ಖಾರಂ ಸಿನಿಮಾದ ಮೊದಲಾರ್ಧದಲ್ಲಿ ಒಂದು ಫೈಟ್ ಇದೆ. ನಿಮಗೆ ಎರಡೆರಡು ಸೂಪರ್​ಸ್ಟಾರ್​​ಗಳ ಕಾಣಲಿದ್ದಾರೆ. ಮೊದಲಾರ್ಧದಲ್ಲಿ ಸೂಪರ್ಸ್ಟಾರ್ ಕೃಷ್ಣ ಅವರ ರೆಫರೆನ್ಸ್ ಇದೆ. ಅಭಿಮಾನಿಗಳಿಗೆ ಈ ಸಂಕ್ರಾಂತಿ ಹೆಚ್ಚು ವಿಶೇಷ ಆಗಲಿದೆ. ಕೊನೆಯ 45 ನಿಮಿಷ ಸಿನಿಮಾದ ವಿಶೇಷ ಹೈಲೈಟ್’ ಎಂದು ನಾಗ ವಂಶಿ ಬರೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಇನ್ನೂ ಪೂರ್ಣಗೊಂಡಿಲ್ಲ ‘ಗುಂಟೂರು ಖಾರಂ’ ಸಿನಿಮಾ ಶೂಟಿಂಗ್; ಅಭಿಮಾನಿಗಳಿಗೆ ಆಗಿದೆ ಚಿಂತೆ

‘ಗುಂಟೂರು ಖಾರಂ’ ಸಿನಿಮಾ ಜನವರಿ 12ರಂದು ರಿಲೀಸ್ ಆಗಲಿದೆ. ಸಿನಿಮಾದ ಸಾಂಗ್​ಗಳು ಮಾತ್ರ ರಿಲೀಸ್ ಆಗಿವೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲು ತಂಡದ ಬಳಿ ಸಮಯ ಇಲ್ಲ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ. ಈಗ ನಿರ್ಮಾಪಕರಿಂದ ಭರವಸೆ ಸಿಕ್ಕಿದ್ದರಿಂದ ಅಭಿಮಾನಗಳು ಕೊಂಚ ನಿರಾಳ ಆಗಿದ್ದರು. ಈ ಚಿತ್ರದ ಟ್ರೇಲರ್ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಜನವರಿ 6ರಂದು ಟ್ರೇಲರ್ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು