AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akkineni Family: ಅಕ್ಕಿನೇನಿ ಕುಟುಂಬಕ್ಕೆ ಸತತ ಸೋಲು; ನಾಗ ಚೈತನ್ಯ, ನಾಗಾರ್ಜುನ, ಅಖಿಲ್​ ಭವಿಷ್ಯ ಸಂಕಷ್ಟದಲ್ಲಿ

ಅಕ್ಕಿನೇನಿ ಕುಟುಂಬದ ನಟರು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿದ್ದಾರೆ. ನಾಗಾರ್ಜುನ, ನಾಗ ಚೈತನ್ಯ ಮತ್ತು ಅಖಿಲ್​ ನಟನೆಯ ಸಿನಿಮಾಗಳನ್ನು ಪ್ರೇಕ್ಷಕರು ರಿಜೆಕ್ಟ್​ ಮಾಡಿದ್ದಾರೆ.

Akkineni Family: ಅಕ್ಕಿನೇನಿ ಕುಟುಂಬಕ್ಕೆ ಸತತ ಸೋಲು; ನಾಗ ಚೈತನ್ಯ, ನಾಗಾರ್ಜುನ, ಅಖಿಲ್​ ಭವಿಷ್ಯ ಸಂಕಷ್ಟದಲ್ಲಿ
ನಾಗ ಚೈತನ್ಯ, ನಾಗಾರ್ಜುನ, ಅಖಿಲ್ ಅಕ್ಕಿನೇನಿ
Follow us
ಮದನ್​ ಕುಮಾರ್​
|

Updated on: May 15, 2023 | 7:20 AM

ತೆಲುಗು ಚಿತ್ರರಂಗದಲ್ಲಿ ಮಾಸ್​ ಸಿನಿಮಾಗಳು ಹೆಚ್ಚು ಸದ್ದು ಮಾಡುತ್ತವೆ ಎಂಬ ಮಾತು ಇದೆ. ಆದರೆ ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡಿ ಎಂಜಾಯ್​ ಮಾಡಿರುವ ಜನರು ಈಗ ಹೊಸತನದ ಕಥೆಗಳನ್ನು ಬಯಸುತ್ತಿದ್ದಾರೆ. ಅದೇ ಕಾರಣಕ್ಕೋ ಏನೋ ಟಾಲಿವುಡ್​ನ (Tollywood) ಕೆಲವು ಸಿನಿಮಾಗಳು ಮುಗ್ಗರಿಸುತ್ತಿವೆ. ಹಳೇ ಮಾದರಿಯಲ್ಲೇ ಸಿನಿಮಾ ಮಾಡಿದ ಹೀರೋಗಳಿಗೆ ಸೋಲು ಉಂಟಾಗುತ್ತಿದೆ. ಅದರಲ್ಲೂ ಅಕ್ಕಿನೇನಿ ಕುಟುಂಬದ (Akkineni Family) ನಟರು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿದ್ದಾರೆ. ಹಿರಿಯ ನಟ ನಾಗಾರ್ಜುನ ಮಾಡಿದ ಚಿತ್ರಗಳು ಜನರಿಗೆ ಮೆಚ್ಚುಗೆ ಆಗುತ್ತಿಲ್ಲ. ಅವರ ಪುತ್ರರಾದ ನಾಗ ಚೈತನ್ಯ (Naga Chaitanya) ಮತ್ತು ಅಖಿಲ್​ ನಟನೆಯ ಸಿನಿಮಾಗಳನ್ನು ಕೂಡ ಪ್ರೇಕ್ಷಕರು ರಿಜೆಕ್ಟ್​ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಕಸ್ಟಡಿ’ ಸಿನಿಮಾದ ಸೋಲಿನ ಬಳಿಕ ಈ ಫ್ಯಾಮಿಲಿಯ ಮೂವರು ಹೀರೋಗಳು ತಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸುವಂತಾಗಿದೆ.

ನಾಗಾರ್ಜುನ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಯಾಕೆಂದರೆ ಮಾಸ್​ ಸಿನಿಮಾಗಳನ್ನು ಆಯ್ಕೆ ಮಾಡಿಕೊಂಡು ನಾಗಾರ್ಜುನ ಅವರು ಕೈ ಸುಟ್ಟುಕೊಂಡಿರುವುದು ಕಣ್ಣೆದುರಲ್ಲೇ ಇದೆ. ಅವರು ನಟಿಸಿದ ‘ವೈಲ್ಡ್​ ಡಾಗ್​’, ‘ಆಫೀಸರ್​​’ ಮತ್ತು ‘ದಿ ಘೋಸ್ಟ್​’ ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಅದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ: ಸಮಂತಾ ಬಗ್ಗೆ ನಾಗ ಚೈತನ್ಯ ಮೆಚ್ಚುಗೆ; ಮಾಜಿ ಪತ್ನಿಯನ್ನು ಬಾಯ್ತುಂಬ ಹೊಗಳಿದ ನಟ

ನಾಗ ಚೈತನ್ಯ ಅವರು ಕೂಡ ಇತ್ತೀಚಿನ ವರ್ಷಗಳಲ್ಲಿ ಗೆಲುವು ಕಂಡಿಲ್ಲ. ‘ಮಜಿಲಿ’, ‘ಲವ್​ ಸ್ಟೋರಿ’ ನಂತರ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ಎಡವಿದರು. ‘ಥ್ಯಾಂಕ್​ ಯೂ’ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗಲಿಲ್ಲ. ‘ಕಸ್ಟಡಿ’ ನೋಡಿದ ಜನರಿಂದ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆದ ಈ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡುತ್ತಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ನಾಗ ಚೈತನ್ಯ ಅವರು ಬೇರೆ ರೀತಿಯ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ: Naga Chaitanya: ಕಾರಿನಲ್ಲಿ ಕದ್ದುಮುಚ್ಚಿ ಕಿಸ್​ ಮಾಡುತ್ತಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಸಮಂತಾ ಮಾಜಿ ಪತಿ ನಾಗ ಚೈತನ್ಯ

ಅಖಿಲ್​ ಅಕ್ಕಿನೇನಿ ಅವರಿಗೆ ಟಾಲಿವುಡ್​ನಲ್ಲಿ ನೆಲೆ ಕಂಡುಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ. ಮಾಡಿದ ಒಂದೆರಡು ಸಿನಿಮಾಗಳು ಕೂಡ ಗೆಲ್ಲಲಿಲ್ಲ. ಹೇಗಾದರೂ ಮಾಡಿ ಯಶಸ್ಸು ಕಾಣಲೇಬೇಕು ಎಂಬ ಉದ್ದೇಶದಿಂದ ಅವರು ‘ಏಜೆಂಟ್​’ ಸಿನಿಮಾ ಮಾಡಿದರು. ಆದರೂ ಕೂಡ ಅವರಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗಲಿಲ್ಲ. ಇತ್ತೀಚೆಗೆ ತೆರೆಕಂಡ ಈ ಚಿತ್ರಕ್ಕಾಗಿ ಅಖಿಲ್​ ಅವರು ತುಂಬ ಶ್ರಮಪಟ್ಟಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್