AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ ಮತ್ತು ಮಹೇಶ್​ ಬಾಬು ಪತ್ನಿ ನಮ್ರತಾ ಹಳೇ ವಿಚಾರ ಎಳೆದು ತಂದ ಫ್ಯಾನ್ಸ್​

ನಮ್ರತಾ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. 2000ರಲ್ಲಿ ತೆರೆಗೆ ಬಂದ ‘ವಂಶಿ’ ಸಿನಿಮಾದಲ್ಲಿ ಮಹೇಶ್​ ಬಾಬು ಹಾಗೂ ನಮ್ರತಾ ಜತೆಯಾಗಿ ಕಾಣಿಸಿಕೊಂಡಿದ್ದರು.

ದಳಪತಿ ವಿಜಯ್​ ಮತ್ತು ಮಹೇಶ್​ ಬಾಬು ಪತ್ನಿ ನಮ್ರತಾ ಹಳೇ ವಿಚಾರ ಎಳೆದು ತಂದ ಫ್ಯಾನ್ಸ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 20, 2021 | 2:11 PM

Share

ಮಹೇಶ್​ ಬಾಬು ಹಾಗೂ ದಳಪತಿ ವಿಜಯ್​ ಇಬ್ಬರೂ ಅನುಕ್ರಮವಾಗಿ ತೆಲುಗು ಮತ್ತು ತಮಿಳು ಸಿನಿಮಾ ಇಂಡಸ್ಟ್ರಿಯಲ್ಲಿ ಟಾಪ್​ ಹೀರೋಗಳು. ಇಬ್ಬರಿಗೂ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಇವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬರಲಿ ಅಭಿಮಾನಿಗಳು ಹಬ್ಬ ಮಾಡುತ್ತಾರೆ. ಅಚ್ಚರಿಯ ವಿಚಾರ ಎಂದರೆ ವಿಜಯ್​ ನಟನೆಯ ಸಿನಿಮಾದಲ್ಲಿ ಮಹೇಶ್​ ಬಾಬು ಪತ್ನಿ ನಮ್ರತಾ ಕಾಣಿಸಿಕೊಂಡಿದ್ದರು! ಈ ವಿಚಾರ ಅನೇಕರಿಗೆ ಗೊತ್ತಿಲ್ಲ.

ನಮ್ರತಾ ಚಿತ್ರರಂಗದ ಹಿನ್ನೆಲೆಯಿಂದ ಬಂದವರು. ಅವರು ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. 2000ರಲ್ಲಿ ತೆರೆಗೆ ಬಂದ ‘ವಂಶಿ’ ಸಿನಿಮಾದಲ್ಲಿ ಮಹೇಶ್​ ಬಾಬು ಹಾಗೂ ನಮ್ರತಾ ಜತೆಯಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. 2005ರಲ್ಲಿ ಇಬ್ಬರೂ ಮದುವೆಯೂ ಆದರು. ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ಅಭಿಮಾನಿಗಳು ಹಳೆಯ ವಿಚಾರವನ್ನು ಮತ್ತೆ ನೆನಪಿಸಿದ್ದಾರೆ.

ದಳಪತಿ ವಿಜಯ್​ ನಟನೆಯ ‘ತಿರುಮಲೈ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾ ತೆರೆಗೆ ಬಂದಿದ್ದು 2003ರಲ್ಲಿ. ಈ ಚಿತ್ರಕ್ಕೆ ಮೊದಲು ನಾಯಕಿಯಾಗಿ ಆಯ್ಕೆ ಆಗಿದ್ದು ನಮ್ರತಾ. ಕೆಲವು ದಿನಗಳ ಶೂಟಿಂಗ್​ನಲ್ಲೂ ಅವರು ಪಾಲ್ಗೊಂಡಿದ್ದರು. ಆದರೆ, ಕೆಲ ದಿನಗಳ ನಂತರ ನಿರ್ದೇಶಕರಿಗೂ ಹಾಗೂ ನಮ್ರತಾ ನಡುವೆ ಕೆಲವು ಭಿನ್ನಾಭಿಪ್ರಾಯ ಹುಟ್ಟಿಕೊಂಡವು. ಸಿನಿಮಾ ಕಥೆಗೆ ಸಂಬಂಧಿಸಿದಂತೆ ನಿರ್ದೇಶಕರು ಕೆಲ ವಿಚಾರಗಳಲ್ಲಿ ರಾಜಿ ಆಗಲು ನಿರಾಕರಿಸಿದ್ದರು ಎನ್ನಲಾಗಿದೆ. ಹೀಗಾಗಿ, ನಮ್ರತಾ ಅವರು ಸಿನಿಮಾದಿಂದ ಹಿಂದೆ ಸರಿದರು. ನಂತರ ಈ ಪಾತ್ರವನ್ನು ಜ್ಯೋತಿಕಾ ನಿರ್ವಹಿಸಿದರು.

ಮಹೇಶ್​ ಬಾಬು ಅವರು ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪರಶುರಾಮ್​ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಕೀರ್ತಿ ಸುರೇಶ್​ ಚಿತ್ರದ ನಾಯಕಿ. ವಿಜಯ್​ ಅವರು ‘ಬೀಸ್ಟ್​’ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಮತ್ತು ಮಹೇಶ್​ ಬಾಬುಗೆ ಕಾಡುತ್ತಿದೆ ಒಂದೇ ಸಮಸ್ಯೆ; ಪೊಲೀಸ್​ ಠಾಣೆಯಲ್ಲಿ ದಾಖಲಾಯ್ತು ದೂರು 

3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ