AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಕೋಟಿ ರೂ. ಕೊಟ್ಟರೂ ಆ ಪಾತ್ರ ಮಾಡಲ್ಲ: ರಾಜಮೌಳಿಗೆ ನೋ ಎಂದ ನಾನಾ ಪಾಟೇಕರ್

ಬಾಲಿವುಡ್ ನಟ ನಾನಾ ಪಾಟೇಕರ್ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅವರು ಕೇಳಿದಷ್ಟು ಸಂಬಳ ನೀಡಲು ನಿರ್ಮಾಪಕರು ರೆಡಿ ಇದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದಲ್ಲಿ ನಾನಾ ಪಾಟೇಕರ್ ಅವರಿಂದ ಒಂದು ಪಾತ್ರ ಮಾಡಿಸಬೇಕು ಎಂಬುದು ನಿರ್ದೇಶಕ ರಾಜಮೌಳಿ ಅವರ ಉದ್ದೇಶ ಆಗಿತ್ತು. ಆದರೆ ನಾನಾ ಪಾಟೇಕರ್ ಅವರು ಆ ಪಾತ್ರದಲ್ಲಿ ನಟಿಸಲು ನಿರಾಕರಿಸಿದ್ದಾರೆ.

20 ಕೋಟಿ ರೂ. ಕೊಟ್ಟರೂ ಆ ಪಾತ್ರ ಮಾಡಲ್ಲ: ರಾಜಮೌಳಿಗೆ ನೋ ಎಂದ ನಾನಾ ಪಾಟೇಕರ್
Ss Rajamouli, Nana Patekar
ಮದನ್​ ಕುಮಾರ್​
|

Updated on: Jun 05, 2025 | 7:38 PM

Share

ನಿರ್ದೇಶಕ ರಾಜಮೌಳಿ (SS Rajamouli) ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಇದೆ. ‘ಬಾಹುಬಲಿ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳ ಮೂಲಕ ಅವರು ವಿದೇಶದಲ್ಲಿ ಕೂಡ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರಾಜಮೌಳಿ ನಿರ್ದೇಶಿಸುವ ಸಿನಿಮಾಗಳಲ್ಲಿ ಪ್ರತಿ ಪಾತ್ರ ಕೂಡ ಹೈಲೈಟ್ ಆಗುತ್ತದೆ. ಹಾಗಾಗಿ ಅವರ ಸಿನಿಮಾದಲ್ಲಿ ನಟಿಸಲು ಕಲಾವಿದರು ಹಾತೊರೆಯುತ್ತಾರೆ. ಆದರೆ ಬಾಲಿವುಡ್​ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ಅವರು ರಾಜಮೌಳಿ ನೀಡಿದ ಅವಕಾಶವನ್ನು ತಿರಸ್ಕರಿಸಿದ್ದಾರೆ! ‘ಎಸ್​ಎಸ್​ಎಂಬಿ 29’ (SSMB 29) ಸಿನಿಮಾದಲ್ಲಿ ನಟಿಸಲು ನಾನಾ ಪಾಟೇಕರ್ ಅವರು ನೋ ಎಂದಿದ್ದಾರೆ.

‘ಎಸ್​ಎಸ್​ಎಂಬಿ 29’ ಚಿತ್ರದಲ್ಲಿ ಮಹೇಶ್ ಬಾಬು ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ ಎಂಬ ಕಾರಣಕ್ಕೆ ಹೈಪ್ ಹೆಚ್ಚಾಗಿದೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಚಿತ್ರತಂಡದವರು ಇನ್ನೂ ಅಧಿಕೃತವಾಗಿ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಹಲವು ಬಗೆಯ ಗಾಸಿಪ್ ಕೇಳಿಬರುತ್ತಿವೆ.

ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರ ತಂದೆಯ ಪಾತ್ರದಲ್ಲಿ ನಟಿಸಲು ನಾನಾ ಪಾಟೇಕರ್ ಅವರಿಗೆ ಆಫರ್ ನೀಡಲಾಯಿತು. ಕಥೆ ಹೇಳಲು ರಾಜಮೌಳಿ ಅವರು ಪುಣೆಗೆ ತೆರಳಿದರು. ನಾನಾ ಪಾಟೇಕರ್ ಅವರ ಫಾರ್ಮ್​ಹೌಸ್​ನಲ್ಲಿ ಒಂದು ಸುತ್ತಿನ ಮಾತುಕಥೆ ಕೂಡ ನಡೆಯಿತು. ಆದರೆ ನಾನಾ ಪಾಟೇಕರ್ ಅವರಿಗೆ ಆ ಪಾತ್ರ ಇಷ್ಟ ಆಗಲಿಲ್ಲವಂತೆ. ಹಾಗಾಗಿ ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಳ್ಳಲಿಲ್ಲ.

ಇದನ್ನೂ ಓದಿ
Image
ಆರೋಪಗಳ ಬಳಿಕ ವಿಡಿಯೋ ಹಂಚಿಕೊಂಡ ಎಸ್​ಎಸ್ ರಾಜಮೌಳಿ, ಹೇಳಿದ್ದೇನು?
Image
ರಾಜಮೌಳಿ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಹಳೆ ಗೆಳೆಯ, ಕಾರಣ?
Image
ರೆಡಿಯೋ ಜಾಕಿ ಹಿಂದೆ ಬಿದ್ದ ರಾಜಮೌಳಿ, ಪ್ರಪೋಸ್ ಮಾಡೇಬಿಟ್ಟ ಚೆಲುವೆ
Image
ಮಹೇಶ್ ಬಾಬು-ರಾಜಮೌಳಿ ಸಿನಿಮಾಕ್ಕೆ ಹೆಸರು ಫಿಕ್ಸ್

ಅಚ್ಚರಿ ಏನೆಂದರೆ, ‘ಎಸ್​ಎಸ್​ಎಂಬಿ 29’ ಸಿನಿಮಾದಲ್ಲಿ ನಟಿಸಲು ನಾನಾ ಪಾಟೇಕರ್ ಅವರಿಗೆ ಬರೋಬ್ಬರಿ 20 ಕೋಟಿ ರೂಪಾಯಿ ಸಂಭಾವನೆ ಕೊಡಲು ಕೂಡ ನಿರ್ಮಾಪಕರು ಸಿದ್ಧರಿದ್ದರು. ಆದರೂ ಕೂಡ ನಾನಾ ಪಾಟೇಕರ್ ಅವರು ಈ ಆಫರ್ ತಿರಸ್ಕರಿಸಿದರು ಎನ್ನಲಾಗಿದೆ. ಹಾಗಾದರೆ ನಾನಾ ಪಾಟೇಕರ್ ತಿರಸ್ಕರಿಸಿದ ಆ ಪಾತ್ರವನ್ನು ಬೇರೆ ಯಾವ ಕಲಾವಿದರು ಒಪ್ಪಿಕೊಳ್ಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ರಾಜಮೌಳಿ ಜೊತೆ ಸಿನಿಮಾ ಮಾಡುವಾಗಲೇ ಮತ್ತೊಂದು ಚಿತ್ರದ ಬಗ್ಗೆ ಆಲೋಚಿಸಿದ ಮಹೇಶ್ ಬಾಬು

ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ತಾತ್ಕಾಲಿಕವಾಗಿ ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿದೆ. ಈಗಾಗಲೇ ಒಂದು ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ. ಎರಡನೇ ಹಂತದ ಶೂಟಿಂಗ್​ ಜೂನ್ 9ರಿಂದ ಹೈದರಾಬಾದ್​ನಲ್ಲಿ ಶುರು ಆಗಲಿದೆ. ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು