AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದೂ ನಟಿಸಿದ್ದ ಬಾಲಕೃಷ್ಣ; ಚಿತ್ರ ದುರಂತವಾಯ್ತು

Nandamuri Balakrishna: ನಂದಮೂರಿ ಬಾಲಕೃಷ್ಣ ಟಾಲಿವುಡ್​ನ ಸ್ಟಾರ್ ನಟ. ವಯಸ್ಸು 60 ದಾಟಿದ್ದರೂ ಈಗಲೂ ಸಹ ಹವಾ ಕಡಿಮೆ ಆಗಿಲ್ಲ. ಬಾಲಕೃಷ್ಣ ಇತ್ತೀಚೆಗೆ ನಟಿಸಿದ ಎಲ್ಲ ಸಿನಿಮಾಗಳೂ ಸೂಪರ್ ಹಿಟ್. ಬಾಲಕೃಷ್ಣ ವೃತ್ತಿ ಜೀವನದಲ್ಲಿ ಫ್ಲಾಪ್​ಗಳ ಸಂಖ್ಯೆ ಬಹಳ ಕಡಿಮೆ. ಆದರೆ ಒಮ್ಮೆ, ಸಿನಿಮಾ ಫ್ಲಾಪ್ ಆಗುತ್ತದೆ ಎಂದು ಗೊತ್ತಿದ್ದರೂ ವಿಧಿ ಇಲ್ಲದೇ ನಟಿಸಬೇಕಾಗಿತ್ತಂತೆ ಆ ಬಗ್ಗೆ ಬಾಲಯ್ಯ ಮಾತನಾಡಿದ್ದಾರೆ.

ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದೂ ನಟಿಸಿದ್ದ ಬಾಲಕೃಷ್ಣ; ಚಿತ್ರ ದುರಂತವಾಯ್ತು
Nandamuri Balayya
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 22, 2025 | 10:01 PM

Share

ನಂದಮೂರಿ ಬಾಲಕೃಷ್ಣ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಈ ನಾಯಕನ ಸಿನಿಮಾಗಳು ಬಂದರೆ ಚಿತ್ರಮಂದಿರಗಳಲ್ಲಿನ ಸದ್ದು ಬೇರೆಯೇ ಆಗಿರುತ್ತದೆ. ಬಾಲಯ್ಯ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಚಿತ್ರಗಳಲ್ಲಿ ಮತ್ತು ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ಎಲ್ಲರನ್ನೂ ಮೆಚ್ಚಿಸಿದ್ದಾರೆ. ಅದಕ್ಕಾಗಿಯೇ ಆಗಿನವರು ಮಾತ್ರವಲ್ಲ, ಇಂದಿನವರು ಕೂಡ ಬಾಲಯ್ಯ ಅವರನ್ನು ತುಂಬಾ ಪ್ರೀತಿಸುತ್ತಾರೆ. ಅವರು ಮಾಡಿದ ಒಂದು ಸಿನಿಮಾ ದುರಂತೆ ಕಂಡಿತ್ತು. ಸೋಲುತ್ತದೆ ಎಂದು ತಿಳಿದಿದ್ದರೂ ಕೂಡ ಬಾಲಯ್ಯ ಈ ಚಿತ್ರವನ್ನು ಮಾಡಿದ್ದರು.

ಬಾಲಕೃಷ್ಣ ಚಿತ್ರಗಳು ರಿಲೀಸ್ ಆಗಿ ಯುಶಸ್ಸು ಕಾಣುತ್ತಿವೆ. ಸಂಕ್ರಾಂತಿಗೆ ರಿಲೀಸ್ ಆದ ‘ಡಾಕು ಮಹಾರಾಜ್’ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಡಾಕು ಮಹಾರಾಜ್ ಪಾತ್ರ ಮಾಡಿ, ನೀರು ಇಲ್ಲದ ಹಳ್ಳಿ ಪರವಾಗಿ ಹೋರಾಡುವ ವ್ಯಕ್ತಿಯಾಗಿ ಕಾಣಿಸಿಕೊಂಡರು.

ಸಂದರ್ಭದಲ್ಲಿ, ಬಾಲಯ್ಯ ಅವರಿಗೆ ಸಂಬಂಧಿಸಿದ ಒಂದು ಕುತೂಹಲಕಾರಿ ಸುದ್ದಿ ವೈರಲ್ ಆಗುತ್ತಿದೆ. ಹಾಗಾದರೆ ಅದು ಏನು? ಅವರು ಕಥೆ ಇಷ್ಟವಾದರೆ ಮಾತ್ರ ಸಿನಿಮಾ ಮಾಡುತ್ತಾರೆ. ಆದರೆ ಬಾಲಯ್ಯ ಅವರು ಸಿನಿಮಾ ಒಂದರ ಕಥೆ ಕೇಳಿದ್ದರು. ಅದು ಇಷ್ಟವಾಗಿಲ್ಲ. ಚಿತ್ರವು ದುರಂತವಾಗುತ್ತದೆ ಎಂದು ತಿಳಿದಿದ್ದರೂ ಸಹ, ಅವರು ಆ ಚಿತ್ರವನ್ನು ನಿರ್ಮಿಸಿ ಅನಿರೀಕ್ಷಿತ ಅನಾಹುತವನ್ನು ತಮ್ಮ ಖಾತೆಗೆ ತೆಗೆದುಕೊಂಡರು. ಹಾಗಾದರೆ ಅದು ಯಾವ ಸಿನಿಮಾ?

ಇದನ್ನೂ ಓದಿ:ಸಚಿವರೊಬ್ಬರು ಹನಿಟ್ರ್ಯಾಪ್ ಅಗಿರುವ ವಿಚಾರ ಗೊತ್ತಿಲ್ಲ, ಮಾಹಿತಿಯಿಲ್ಲದೆ ತೇಜೋವಧೆ ಮಾಡೋದು ಸರಿಯಲ್ಲ: ಬಾಲಕೃಷ್ಣ

‘ತಿರುಗಬದ್ದು ತೆಲುಗು ಬಿಡ್ಡ’ ಚಿತ್ರವನ್ನು ನಿರ್ದೇಶಕ ಕೋದಂಡರಾಮಿ ರೆಡ್ಡಿ ನಿರ್ದೇಶಿಸಿದ್ದರು. ಈ ಚಿತ್ರದ ಕಥೆ ಬಾಲಯ್ಯ ಅವರಿಗೆ ಇಷ್ಟ ಆಗಲೇ ಇಲ್ಲ. ಚಿತ್ರವೂ ದುರಂತವಾಗುತ್ತದೆ ಎಂದು ಭಾವಿಸಿ, ಚಿತ್ರವನ್ನು ಕೈಬಿಡಲು ನಿರ್ಧರಿಸಿದರು. ಆದರೆ ಹಿರಿಯ ನಟ ಎನ್‌ಟಿಆರ್ ಈ ಚಿತ್ರವನ್ನು ಮಾಡಲೇಬೇಕು ಎಂದು ಒತ್ತಾಯಿಸಿದ್ದರಿಂದ, ಅವರು ಚಿತ್ರದಲ್ಲಿ ನಟಿಸಲು ನಿರ್ಧರಿಸಿದರು. ಈ ಚಿತ್ರವನ್ನು ಅವರ ಸಹೋದರ ನಂದಮೂರಿ ಹರಿಕೃಷ್ಣ ಅವರೇ ನಿರ್ಮಾಣ ಮಾಡಿದರು. ಬಾಲಕೃಷ್ಣ ಈ ಚಿತ್ರದಲ್ಲಿ ನಟಿಸಲು ಇಷ್ಟವಿಲ್ಲದಿದ್ದರೂ ನಟಿಸಿದರು ಮತ್ತು ಅವರ ವೃತ್ತಿಜೀವನದ ಅತಿದೊಡ್ಡ ದುರಂತವನ್ನು ಅನುಭವಿಸಿದರು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು