ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ.

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?
ನಂದಮುರಿ ಬಾಲಕೃಷ್ಣ
Follow us
| Updated By: shivaprasad.hs

Updated on:Nov 03, 2021 | 9:15 AM

ನಟ ನಂದಮೂರಿ ಬಾಲಕೃಷ್ಣ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದ್ದಾರೆ. ಅವರ ಅಭಿಮಾನಿ ಬಳಗವೂ ತುಂಬಾನೇ ದೊಡ್ಡದಿದೆ. ಆದರೆ, ಈಗ ಅವರ ಅಭಿಮಾನಿಗಳು ಆತಂಕಗೊಳ್ಳುವ ಸುದ್ದಿ ಒಂದು ಹೊರ ಬಿದ್ದಿದೆ. ಬಾಲಯ್ಯ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾಗಾದರೆ ಬಾಲಕೃಷ್ಣ ಅವರಿಗೆ ಆಗಿದ್ದೇನು? ಭುಜದ ನೋವು. ಕಳೆದ ಆರು ತಿಂಗಳಿಂದ ಬಾಲಯ್ಯ ಅವರಿಗೆ ಭುಜದ ನೋವು ಅತಿಯಾಗಿ ಕಾಡುತ್ತಿತ್ತು. ಈ ಕಾರಣಕ್ಕೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ, ಆಪರೇಷನ್​ ಮಾಡಿಸಿಕೊಂಡರೆ ಅವರು ವಿಶ್ರಾಂತಿ ಪಡೆಯಬೇಕು. ಹೀಗೆ ಮಾಡಿದರೆ, ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಇದನ್ನು ಮುಂದೂಡುತ್ತಲೇ ಬರುತ್ತಿದ್ದರು.

ಇಂದು (ನವೆಂಬರ್​ 2) ಬಾಲಕೃಷ್ಣ ಅವರಿಗೆ ತೀವ್ರವಾಗಿ ಭುಜದ ನೋವು ಬಂದಿತ್ತು. ಇದರಿಂದ ಅವರು ಕೈ ಎತ್ತಲೂ ಆಗದ ಪರಿಸ್ಥಿತಿ ಬಂದೊದಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ಗಂಟೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ. ಬಿಎನ್​ ಪ್ರಸಾದ್​ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು. ಈ ಆಪರೇಷನ್​ ಯಶಸ್ವಿ ಆಗಿದೆ. ಬಾಲಕೃಷ್ಣ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಅವರು ಆರೋಗ್ಯಯುತವಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ. ಅವರು ಕೆಲ ಕಾಲ ವಿಶ್ರಾಂತಿ ಪಡೆಯಬೇಕಿದೆ.

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ಈ ಶೋನ ಮೊದಲ ಎಪಿಸೋಡ್​ ಪ್ರಸಾರವಾಗಿತ್ತು.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್​ ಅವರು ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಪುನೀತ್​ ಅವರಿಗೆ ಕೊನೆಯ ನಮನ ಸಲ್ಲಿಸೋಕೆ ಬಾಲಕೃಷ್ಣ​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು. ಶಿವರಾಜ್​ಕುಮಾರ್​ಗೆ ಸಮಾಧಾನ ಮಾಡಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​​ ಸಮಾಧಿ ಬಳಿ ಕುಸಿದು ಬಿದ್ದ ಗನ್​ ಮ್ಯಾನ್​ ಪುತ್ರಿ; ಮರೆಯಲಾಗುತ್ತಿಲ್ಲ ಅಪ್ಪು ಅಗಲಿಕೆಯ ನೋವು

Published On - 7:27 pm, Tue, 2 November 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ