AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ.

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?
ನಂದಮುರಿ ಬಾಲಕೃಷ್ಣ
TV9 Web
| Updated By: shivaprasad.hs|

Updated on:Nov 03, 2021 | 9:15 AM

Share

ನಟ ನಂದಮೂರಿ ಬಾಲಕೃಷ್ಣ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದ್ದಾರೆ. ಅವರ ಅಭಿಮಾನಿ ಬಳಗವೂ ತುಂಬಾನೇ ದೊಡ್ಡದಿದೆ. ಆದರೆ, ಈಗ ಅವರ ಅಭಿಮಾನಿಗಳು ಆತಂಕಗೊಳ್ಳುವ ಸುದ್ದಿ ಒಂದು ಹೊರ ಬಿದ್ದಿದೆ. ಬಾಲಯ್ಯ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾಗಾದರೆ ಬಾಲಕೃಷ್ಣ ಅವರಿಗೆ ಆಗಿದ್ದೇನು? ಭುಜದ ನೋವು. ಕಳೆದ ಆರು ತಿಂಗಳಿಂದ ಬಾಲಯ್ಯ ಅವರಿಗೆ ಭುಜದ ನೋವು ಅತಿಯಾಗಿ ಕಾಡುತ್ತಿತ್ತು. ಈ ಕಾರಣಕ್ಕೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ, ಆಪರೇಷನ್​ ಮಾಡಿಸಿಕೊಂಡರೆ ಅವರು ವಿಶ್ರಾಂತಿ ಪಡೆಯಬೇಕು. ಹೀಗೆ ಮಾಡಿದರೆ, ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಇದನ್ನು ಮುಂದೂಡುತ್ತಲೇ ಬರುತ್ತಿದ್ದರು.

ಇಂದು (ನವೆಂಬರ್​ 2) ಬಾಲಕೃಷ್ಣ ಅವರಿಗೆ ತೀವ್ರವಾಗಿ ಭುಜದ ನೋವು ಬಂದಿತ್ತು. ಇದರಿಂದ ಅವರು ಕೈ ಎತ್ತಲೂ ಆಗದ ಪರಿಸ್ಥಿತಿ ಬಂದೊದಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ಗಂಟೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ. ಬಿಎನ್​ ಪ್ರಸಾದ್​ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು. ಈ ಆಪರೇಷನ್​ ಯಶಸ್ವಿ ಆಗಿದೆ. ಬಾಲಕೃಷ್ಣ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಅವರು ಆರೋಗ್ಯಯುತವಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ. ಅವರು ಕೆಲ ಕಾಲ ವಿಶ್ರಾಂತಿ ಪಡೆಯಬೇಕಿದೆ.

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ಈ ಶೋನ ಮೊದಲ ಎಪಿಸೋಡ್​ ಪ್ರಸಾರವಾಗಿತ್ತು.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್​ ಅವರು ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಪುನೀತ್​ ಅವರಿಗೆ ಕೊನೆಯ ನಮನ ಸಲ್ಲಿಸೋಕೆ ಬಾಲಕೃಷ್ಣ​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು. ಶಿವರಾಜ್​ಕುಮಾರ್​ಗೆ ಸಮಾಧಾನ ಮಾಡಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​​ ಸಮಾಧಿ ಬಳಿ ಕುಸಿದು ಬಿದ್ದ ಗನ್​ ಮ್ಯಾನ್​ ಪುತ್ರಿ; ಮರೆಯಲಾಗುತ್ತಿಲ್ಲ ಅಪ್ಪು ಅಗಲಿಕೆಯ ನೋವು

Published On - 7:27 pm, Tue, 2 November 21

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ