AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ವೈಷಮ್ಯಕ್ಕೆ ಬ್ರೇಕ್: ಒಂದಾಗಲಿವೆ ಟಾಲಿವುಡ್​ನ ಎರಡು ಧ್ರುವಗಳು

Tollywood: ತೆಲುಗು ಚಿತ್ರರಂಗದಲ್ಲಿ ನಂದಮೂರಿ ಕುಟುಂಬ ಹಾಗೂ ಮೆಗಾ ಕುಟುಂಬದ ನಡುವೆ ದಶಕಗಳಿಂದಲೂ ವೈಷಮ್ಯ ಮನೆ ಮಾಡಿಕೊಂಡಿದೆ. ಈ ಎರಡು ಕುಟುಂಬಗಳ ಅಭಿಮಾನಿಗಳಂತೂ ಹಲವಾರು ಭಾರಿ ಕೈ-ಕೈ ಮಿಲಾಯಿಸಿದ್ದಾರೆ.

ದಶಕಗಳ ವೈಷಮ್ಯಕ್ಕೆ ಬ್ರೇಕ್: ಒಂದಾಗಲಿವೆ ಟಾಲಿವುಡ್​ನ ಎರಡು ಧ್ರುವಗಳು
ಮಂಜುನಾಥ ಸಿ.
|

Updated on: Aug 14, 2024 | 11:34 AM

Share

ತೆಲುಗು ಚಿತ್ರರಂಗ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿ ಆಗಲಿದೆ. ದಶಕಗಳಿಂದಲೂ ಕಾಯ್ದುಕೊಂಡು ಬಂದಿದ್ದ ವೈಷಮ್ಯಕ್ಕೆ ಬ್ರೇಕ್ ಹಾಕಿ ತೆಲುಗು ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್ ನಟರು ಪರಸ್ಪರ ವೈಷಮ್ಯ ಬದಿಗಿಟ್ಟು ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರನ್ನೂ ಒಟ್ಟಿಗೆ ಸೇರಿಸುತ್ತಿರುವುದು ಯಾರು? ಸಿನಿಮಾಕ್ಕಾಗಿ ಒಂದಾಗುತ್ತಿದ್ದಾರೆಯೇ? ರಾಜಕಾರಣಕ್ಕೆ ಒಂದಾಗುತ್ತಿದ್ದಾರೆಯೇ? ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮಕ್ಕಾಗಿ ಒಂದಾಗುತ್ತಿದ್ದಾರೆಯೇ? ಇದೆಲ್ಲ ತಿಳಿಯುವ ಮುನ್ನ ಆ ಇಬ್ಬರು ಸೂಪರ್ ಸ್ಟಾರ್​ಗಳ ನಡುವಿನ ವೈಷಮ್ಯದ ಕಿರು ಪರಿಚಯ ಮಾಡಿಕೊಳ್ಳೋಣ.

ತೆಲುಗು ಚಿತ್ರರಂಗದ ಮೇಲೆ ಹಿಡಿತ ಹೊಂದಿರುವ ಕುಟುಂಬಗಳಲ್ಲಿ ಅತಿ ಮುಖ್ಯವಾದುವೆಂದರೆ ಎನ್​ಟಿಆರ್ ಕುಟುಂಬ ಅಥವಾ ನಂದಮೂರಿ ಕುಟುಂಬ ಮತ್ತು ಮೆಗಾ ಕುಟುಂಬ. ನಂದಮೂರಿ ಕುಟುಂಬಕ್ಕೆ ಹಿಂದೆ ಸೀನಿಯರ್ ಎನ್​ಟಿಆರ್ ಪ್ರಮುಖರಾಗಿದ್ದರು. ಅವರ ಕಾಲಾ ನಂತರ ನಂದಮೂರಿ ಬಾಲಕೃಷ್ಣ ಅವರದ್ದೇ ಮುಂದಾಳತ್ವ. ಇನ್ನು ಮೆಗಾ ಫ್ಯಾಲಿಮಿಗೆ, ಮೆಗಾ ಸ್ಟಾರ್ ಚಿರಂಜೀವಿ ಪ್ರಮುಖ. ಚಿರಂಜೀವಿ ಹಾಗೂ ಬಾಲಕೃಷ್ಣ ಬಹುತೇಕ ಒಂದೇ ಸಮಯದಲ್ಲಿ ನಾಯಕರಾದರು. ಇಬ್ಬರೂ ಸಹ ತಮ್ಮ ಅಭಿನಯ ಪ್ರತಿಭೆಯಿಂದ ತೆಲುಗು ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಆದರೆ ಆರಂಭದಿಂದಲೂ ಚಿರಂಜೀವಿ ಹಾಗೂ ಬಾಲಕೃಷ್ಣಗೆ ಬಾಕ್ಸ್​ ಆಫೀಸ್​ನಲ್ಲಿ ಸ್ಪರ್ಧೆ ಇದ್ದೇ ಇದೆ.

ನಂದಮೂರಿ ಅಭಿಮಾನಿಗಳು-ಮೆಗಾ ಅಭಿಮಾನಿಗಳು ಅದೆಷ್ಟೋ ಬಾರಿ ಕೈ-ಕೈ ಮಿಲಾಯಿಸಿದ್ದಿದೆ. ಇವರಿಬ್ಬರ ಸಿನಿಮಾಗಳನ್ನ ಉದ್ದೇಶಪೂರ್ವಕವಾಗಿ ಒಟ್ಟಿಗೆ ಬಿಡುಗಡೆ ಮಾಡಿ ಯಾವುದು ಹೆಚ್ಚು ಗಳಿಕೆ ಮಾಡಿದೆ ಎಂಬುದರ ಆಧಾರದಲ್ಲಿ ಪರಸ್ಪರರನ್ನು ಹೀಗಳೆದಿದ್ದು ಇದೆ. ಎಷ್ಟೋ ವೇದಿಕೆಗಳಲ್ಲಿ ನಂದಮೂರಿ ಕುಟುಂಬದ ಕೆಲ ನಾಯಕರು, ಮೆಗಾ ಫ್ಯಾಮಿಲಿಯನ್ನು ಬಹಿರಂಗವಾಗಿ ಅಣಕಿಸಿದ್ದೂ ಸಹ ಇದೆ. ದಶಕಗಳಿಂದಲೂ ಈ ಎರಡು ಕುಟುಂಬಗಳು ಸಿನಿಮಾಗಳ ಮೂಲಕ ವೈಷಮ್ಯ ಸಾಧಿಸಿಕೊಂಡೆ ಬಂದಿವೆ. ಆದರೆ ಆ ವೈಷಮ್ಯವನ್ನು ಒಡೆದು ಹಾಕಿದ್ದು ನಂದಮೂರಿ ಕುಟುಂಬದ ಜೂ ಎನ್​ಟಿಆರ್ ಮತ್ತು ಮೆಗಾ ಕುಟುಂಬದ ರಾಮ್ ಚರಣ್.

ಈ ಇಬ್ಬರೂ ಪರಸ್ಪರ ಆತ್ಮೀಯ ಗೆಳೆಯರಾಗುವ ಮೂಲಕ ಆ ವೈಷಮ್ಯವನ್ನು ತೊಡೆದು ಹಾಕಿದರು. ಅದಾದ ಬಳಿಕ ನಂದಮೂರಿ ಕುಟುಂಬದ ಫೈರ್ ಬ್ರ್ಯಾಂಡ್ ಬಾಲಕೃಷ್ಣ ಸಹ ತುಸು ಮೆತ್ತಗಾದರು. ರಾಜಕೀಯ ಕಾರಣಗಳಿಗೋಸ್ಕರ ಮೆಗಾ ಫ್ಯಾಮಿಲಿ ಪರವಾಗಿ ಮೃದು ಧೋರಣೆ ತಳೆದು ತಾವು ನಡೆಸುತ್ತಿರುವ ಟಾಕ್ ಶೋಗೆ ನಟ ಚಿರಂಜೀವಿ ಅವರ ಸಹೋದರ ಪವನ್ ಕಲ್ಯಾಣ್ ಅವರನ್ನು ಅತಿಥಿಯನ್ನಾಗಿ ಕರೆದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಬಾಲಕೃಷ್ಣ ಹಾಗೂ ಚಿರಂಜೀವಿ ಒಟ್ಟಿಗೆ ಸೇರುತ್ತಿದ್ದಾರೆ.

ಇದನ್ನೂ ಓದಿ:ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪವನ್ ಕಲ್ಯಾಣ್, ರಾಮ್ ಚರಣ್, ಚಿರಂಜೀವಿ

ಹೌದು, ಚಿತ್ರರಂಗದ ಇತಿಹಾಸದಲ್ಲಿಯೇ ನಡೆಯದ ಘಟನೆ ಇದು. ಕೇವಲ ತೆಲುಗು ಚಿತ್ರರಂಗದ ಕಲ್ಯಾಣ ಕಾರ್ಯಕ್ರಮಕ್ಕಾಗಿ ಮಾಡಲಾಗಿದ್ದ ವಿಡಿಯೋನಲ್ಲಿ ಮಾತ್ರ ಒಟ್ಟಿಗೆ ಕಾಣಿಸಿಕೊಂಡಿದ್ದ ಬಾಲಕೃಷ್ಣ ಹಾಗೂ ಚಿರಂಜೀವಿ ಇದೀಗ ಮೊದಲ ಬಾರಿಗೆ ಒಟ್ಟಿಗೆ ಒಂದೇ ಬಾರಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಾಲಕೃಷ್ಣ ನಡೆಸಿಕೊಡುತ್ತಿರುವ ‘ಅನ್​ಸ್ಟಾಪೆಬಲ್ ಬಾಲಯ್ಯ’ ಶೋ ಭಾರಿ ಜನಪ್ರಿಯಗೊಂಡಿದ್ದು, ಶೀಘ್ರವೇ ಈ ಶೋನ ಮೂರನೇ ಸೀಸನ್ ಆಹಾ ಒಟಿಟಿಯಲ್ಲಿ ಪ್ರಸಾರವಾಗಲಿದೆ. ಈ ಶೋನ ಮೊದಲ ಅತಿಥಿಯಾಗಿ ನಟ ಮೆಗಾಸ್ಟಾರ್ ಚಿರಂಜೀವಿಯನ್ನು ಕರೆಸಲಾಗುತ್ತಿದೆ. ಆ ಮೂಲಕ ದಶಕಗಳ ವೈಷಮ್ಯಕ್ಕೆ ಬ್ರೇಕ್ ಹಾಕಿ ಬಾಲಯ್ಯ ಹಾಗೂ ಚಿರಂಜೀವಿ ಗೆಳೆಯರಾಗಿ ಎಲ್ಲರೆದುರು ಕಾಣಿಸಿಕೊಳ್ಳಲಿದ್ದಾರೆ. ಈ ಶೋ ಶೀಘ್ರವೇ ಪ್ರಾರಂಭವಾಗಲಿದ್ದು, ಚಿರಂಜೀವಿ ಮತ್ತು ಅವರ ಪತ್ನಿ ಸುರೇಖ ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ಶೋಗೆ ಈ ಹಿಂದೆ ನಟರಾದ ಪವನ್ ಕಲ್ಯಾಣ್, ಪ್ರಭಾಸ್, ಮಹೇಶ್ ಬಾಬು, ಅಲ್ಲು ಅರ್ಜುನ್, ಇನ್ನೂ ಹಲವಾರು ಮಂದಿ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ಶೋ ‘ಆಹಾ’ ಒಟಿಟಿಯಲ್ಲಿ ಪ್ರದರ್ಶನಗೊಳ್ಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್