AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರಕ್ಕೆ ‘ಭಗವಂತ ಕೇಸರಿ’ ಶೀರ್ಷಿಕೆ; ಟೀಸರ್​ ಬಿಡುಗಡೆಗೆ ಟೈಮ್​ ಫಿಕ್ಸ್​

Happy Birthday Balayya: ‘ಭಗವಂತ ಕೇಸರಿ’ ಸಿನಿಮಾಗೆ ಅನಿಲ್​ ರವಿಪುಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಅವರು ಸಂಗೀತ ನೀಡುತ್ತಿದ್ದಾರೆ. ‘ಐ ಡೋಂಟ್​ ಕೇರ್​’ ಎಂಬ ಟ್ಯಾಗ್​ ಲೈನ್​ ಗಮನ ಸೆಳೆಯುತ್ತಿದೆ.

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರಕ್ಕೆ ‘ಭಗವಂತ ಕೇಸರಿ’ ಶೀರ್ಷಿಕೆ; ಟೀಸರ್​ ಬಿಡುಗಡೆಗೆ ಟೈಮ್​ ಫಿಕ್ಸ್​
ನಂದಮೂರಿ ಬಾಲಕೃಷ್ಣ
ಮದನ್​ ಕುಮಾರ್​
|

Updated on:Jun 10, 2023 | 7:21 AM

Share

ಟಾಲಿವುಡ್​ನ ಸ್ಟಾರ್​ ಹೀರೋ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು (ಜೂನ್​ 10) ಹುಟ್ಟುಹಬ್ಬದ (Nandamuri Balakrishna Birthday) ಸಂಭ್ರಮ. ಅವರ ಅಭಿಮಾನಿಗಳು ಈ ದಿನವನ್ನು ಸಡಗರದಿಂದ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಬಾಲಯ್ಯಗೆ ವಿಶ್​ ಮಾಡುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ಇನ್ನಷ್ಟು ಕಾರಣಗಳು ಸಿಕ್ಕಿವೆ. ನಂದಮೂರಿ ಬಾಲಕೃಷ್ಣ ನಟನೆಯ 108ನೇ ಸಿನಿಮಾದ ಟೈಟಲ್​ ರಿವೀಲ್​ ಆಗಿದೆ. ಈ ಸಿನಿಮಾಗೆ ‘ಭಗವಂತ ಕೇಸರಿ’ (Bhagavantha Kesari) ಎಂದು ಶೀರ್ಷಿಕೆ ಇಡಲಾಗಿದೆ. ಅದರ ಜೊತೆಗೆ ಫಸ್ಟ್​ ಲುಕ್​ ಕೂಡ ಹಂಚಿಕೊಳ್ಳಲಾಗಿದೆ. ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಂದಮೂರಿ ಬಾಲಕೃಷ್ಣ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅಂತಹ ಅಭಿಮಾನಿಗಳಿಗಾಗಿ ಬಾಲಯ್ಯ ಮಾಸ್​ ಸಿನಿಮಾಗಳನ್ನು ಮಾಡುತ್ತಾರೆ. ಹಾಗಾಗಿ ಅವರನ್ನು ‘ಗಾಡ್​ ಆಫ್​ ಮಾಸಸ್​’ ಎಂದು ಕರೆಯಲಾಗುತ್ತಿದೆ. ಟ್ವಿಟರ್​ನಲ್ಲಿ ಈ ಹ್ಯಾಶ್​ಟ್ಯಾಗ್​ ಕೂಡ ಟ್ರೆಂಡ್​ ಆಗಿದೆ. ಇನ್ನು, ‘ಭಗವಂತ ಕೇಸರಿ’ ಸಿನಿಮಾದ ಟೀಸರ್​ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ಇಂದು ಬಾಲಯ್ಯ ಅವರ ಜನ್ಮದಿನ ಪ್ರಯುಕ್ತ ಬೆಳಗ್ಗೆ 10 ಗಂಟೆ 19 ನಿಮಿಷಕ್ಕೆ ಟೀಸರ್​ ರಿಲೀಸ್​ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ಈ ವರ್ಷ ನಂದಮೂರಿ ಬಾಲಕೃಷ್ಣ ಅವರು ನಟಿಸಿದ ‘ವೀರ ಸಿಂಹ ರೆಡ್ಡಿ’ ಸಿನಿಮಾ ಜನವರಿ 12ರಂದು ತೆರೆಕಂಡಿತ್ತು. ಫ್ಯಾಮಿಲಿ ಕಥಾಹಂದರ ಹೊಂದಿದ್ದ ಆ ಮಾಸ್​ ಸಿನಿಮಾಗೆ ಜನರ ಮೆಚ್ಚುಗೆ ಸಿಕ್ಕಿತು. ಆ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದರು. ಹಾಡುಗಳು ಸೂಪರ್​ ಹಿಟ್ ಆದವು. ಈ ಯಶಸ್ಸಿನಿಂದ ಬಾಲಯ್ಯ ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಿತು. ಈಗ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ.

ಇದನ್ನೂ ಓದಿ: Tamannaah: ಒಂದೇ ಹಾಡಿಗೆ 5 ಕೋಟಿ ರೂ. ಡಿಮ್ಯಾಂಡ್​ ಮಾಡಿದ್ರಾ ತಮನ್ನಾ? ಬಾಲಯ್ಯ ಚಿತ್ರದ ಗಾಸಿಪ್​ಗೆ ನಟಿ ಪ್ರತಿಕ್ರಿಯೆ

‘ಭಗವಂತ ಕೇಸರಿ’ ಸಿನಿಮಾಗೆ ಅನಿಲ್​ ರವಿಪುಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಅವರು ಸಂಗೀತ ನೀಡುತ್ತಿದ್ದಾರೆ. ‘ಐ ಡೋಂಟ್​ ಕೇರ್​’ ಎಂಬ ಟ್ಯಾಗ್​ ಲೈನ್​ ಗಮನ ಸೆಳೆಯುತ್ತಿದೆ. ಟೀಸರ್​ ಬಿಡುಗಡೆ ಆದ ಬಳಿಕ ‘ಭಗವಂತ ಕೇಸರಿ’ ಚಿತ್ರದ ಹೈಪ್​ ಇನ್ನಷ್ಟು ಹೆಚ್ಚಾಗಲಿದೆ. ವಿಶೇಷ ಏನೆಂದರೆ ಈ ಟೀಸರ್​ ಅನ್ನು 108 ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಈ ಸಿನಿಮಾದಲ್ಲಿ ಬಾಲಯ್ಯ ಅವರ ಲುಕ್​ ಹೇಗಿದೆ ಎಂಬುದು ಕೂಡ ಟೀಸರ್​ನಲ್ಲಿ ರಿವೀಲ್​ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:19 am, Sat, 10 June 23

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ