AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರಕ್ಕೆ ‘ಭಗವಂತ ಕೇಸರಿ’ ಶೀರ್ಷಿಕೆ; ಟೀಸರ್​ ಬಿಡುಗಡೆಗೆ ಟೈಮ್​ ಫಿಕ್ಸ್​

Happy Birthday Balayya: ‘ಭಗವಂತ ಕೇಸರಿ’ ಸಿನಿಮಾಗೆ ಅನಿಲ್​ ರವಿಪುಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಅವರು ಸಂಗೀತ ನೀಡುತ್ತಿದ್ದಾರೆ. ‘ಐ ಡೋಂಟ್​ ಕೇರ್​’ ಎಂಬ ಟ್ಯಾಗ್​ ಲೈನ್​ ಗಮನ ಸೆಳೆಯುತ್ತಿದೆ.

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರಕ್ಕೆ ‘ಭಗವಂತ ಕೇಸರಿ’ ಶೀರ್ಷಿಕೆ; ಟೀಸರ್​ ಬಿಡುಗಡೆಗೆ ಟೈಮ್​ ಫಿಕ್ಸ್​
ನಂದಮೂರಿ ಬಾಲಕೃಷ್ಣ
ಮದನ್​ ಕುಮಾರ್​
|

Updated on:Jun 10, 2023 | 7:21 AM

Share

ಟಾಲಿವುಡ್​ನ ಸ್ಟಾರ್​ ಹೀರೋ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು (ಜೂನ್​ 10) ಹುಟ್ಟುಹಬ್ಬದ (Nandamuri Balakrishna Birthday) ಸಂಭ್ರಮ. ಅವರ ಅಭಿಮಾನಿಗಳು ಈ ದಿನವನ್ನು ಸಡಗರದಿಂದ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಬಾಲಯ್ಯಗೆ ವಿಶ್​ ಮಾಡುತ್ತಿದ್ದಾರೆ. ಈ ಖುಷಿಯನ್ನು ಹೆಚ್ಚಿಸಲು ಇನ್ನಷ್ಟು ಕಾರಣಗಳು ಸಿಕ್ಕಿವೆ. ನಂದಮೂರಿ ಬಾಲಕೃಷ್ಣ ನಟನೆಯ 108ನೇ ಸಿನಿಮಾದ ಟೈಟಲ್​ ರಿವೀಲ್​ ಆಗಿದೆ. ಈ ಸಿನಿಮಾಗೆ ‘ಭಗವಂತ ಕೇಸರಿ’ (Bhagavantha Kesari) ಎಂದು ಶೀರ್ಷಿಕೆ ಇಡಲಾಗಿದೆ. ಅದರ ಜೊತೆಗೆ ಫಸ್ಟ್​ ಲುಕ್​ ಕೂಡ ಹಂಚಿಕೊಳ್ಳಲಾಗಿದೆ. ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಂದಮೂರಿ ಬಾಲಕೃಷ್ಣ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅಂತಹ ಅಭಿಮಾನಿಗಳಿಗಾಗಿ ಬಾಲಯ್ಯ ಮಾಸ್​ ಸಿನಿಮಾಗಳನ್ನು ಮಾಡುತ್ತಾರೆ. ಹಾಗಾಗಿ ಅವರನ್ನು ‘ಗಾಡ್​ ಆಫ್​ ಮಾಸಸ್​’ ಎಂದು ಕರೆಯಲಾಗುತ್ತಿದೆ. ಟ್ವಿಟರ್​ನಲ್ಲಿ ಈ ಹ್ಯಾಶ್​ಟ್ಯಾಗ್​ ಕೂಡ ಟ್ರೆಂಡ್​ ಆಗಿದೆ. ಇನ್ನು, ‘ಭಗವಂತ ಕೇಸರಿ’ ಸಿನಿಮಾದ ಟೀಸರ್​ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ಇಂದು ಬಾಲಯ್ಯ ಅವರ ಜನ್ಮದಿನ ಪ್ರಯುಕ್ತ ಬೆಳಗ್ಗೆ 10 ಗಂಟೆ 19 ನಿಮಿಷಕ್ಕೆ ಟೀಸರ್​ ರಿಲೀಸ್​ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ಈ ವರ್ಷ ನಂದಮೂರಿ ಬಾಲಕೃಷ್ಣ ಅವರು ನಟಿಸಿದ ‘ವೀರ ಸಿಂಹ ರೆಡ್ಡಿ’ ಸಿನಿಮಾ ಜನವರಿ 12ರಂದು ತೆರೆಕಂಡಿತ್ತು. ಫ್ಯಾಮಿಲಿ ಕಥಾಹಂದರ ಹೊಂದಿದ್ದ ಆ ಮಾಸ್​ ಸಿನಿಮಾಗೆ ಜನರ ಮೆಚ್ಚುಗೆ ಸಿಕ್ಕಿತು. ಆ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದರು. ಹಾಡುಗಳು ಸೂಪರ್​ ಹಿಟ್ ಆದವು. ಈ ಯಶಸ್ಸಿನಿಂದ ಬಾಲಯ್ಯ ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಿತು. ಈಗ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ.

ಇದನ್ನೂ ಓದಿ: Tamannaah: ಒಂದೇ ಹಾಡಿಗೆ 5 ಕೋಟಿ ರೂ. ಡಿಮ್ಯಾಂಡ್​ ಮಾಡಿದ್ರಾ ತಮನ್ನಾ? ಬಾಲಯ್ಯ ಚಿತ್ರದ ಗಾಸಿಪ್​ಗೆ ನಟಿ ಪ್ರತಿಕ್ರಿಯೆ

‘ಭಗವಂತ ಕೇಸರಿ’ ಸಿನಿಮಾಗೆ ಅನಿಲ್​ ರವಿಪುಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಅವರು ಸಂಗೀತ ನೀಡುತ್ತಿದ್ದಾರೆ. ‘ಐ ಡೋಂಟ್​ ಕೇರ್​’ ಎಂಬ ಟ್ಯಾಗ್​ ಲೈನ್​ ಗಮನ ಸೆಳೆಯುತ್ತಿದೆ. ಟೀಸರ್​ ಬಿಡುಗಡೆ ಆದ ಬಳಿಕ ‘ಭಗವಂತ ಕೇಸರಿ’ ಚಿತ್ರದ ಹೈಪ್​ ಇನ್ನಷ್ಟು ಹೆಚ್ಚಾಗಲಿದೆ. ವಿಶೇಷ ಏನೆಂದರೆ ಈ ಟೀಸರ್​ ಅನ್ನು 108 ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಈ ಸಿನಿಮಾದಲ್ಲಿ ಬಾಲಯ್ಯ ಅವರ ಲುಕ್​ ಹೇಗಿದೆ ಎಂಬುದು ಕೂಡ ಟೀಸರ್​ನಲ್ಲಿ ರಿವೀಲ್​ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:19 am, Sat, 10 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ