AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿ ನೀರಿಗೆ ಮದ್ಯ ಬೆರೆಸಿ ಕುಡಿಯುತ್ತಾರೆ ಬಾಲಯ್ಯ; ಅಳಿಯನೇ ರಿವೀಲ್ ಮಾಡಿದ ಸಂಗತಿ

‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್​ಗೆ ತೆರಳಿದ್ದರು ಬಾಲಯ್ಯ. ವೇದಿಕೆ ಮೇಲೆ ಅವರು ಅಂಜಲಿ ಅವರನ್ನು ತಳ್ಳಿದ್ದರು. ಇದಕ್ಕೂ ಮೊದಲು ಅವರ ಕಾಲಿನ ಸಮೀಪ ನೀರಿನ ಬಾಟಲಿಯಲ್ಲಿ ಮದ್ಯದ ರೀತಿಯ ದ್ರವ ಇತ್ತು. ಈಗ ಅವರ ಅಳಿಯ ಹೇಳಿರೋ ವಿಡಿಯೋ ವೈರಲ್ ಆಗಿದೆ.

ಬಿಸಿ ನೀರಿಗೆ ಮದ್ಯ ಬೆರೆಸಿ ಕುಡಿಯುತ್ತಾರೆ ಬಾಲಯ್ಯ; ಅಳಿಯನೇ ರಿವೀಲ್ ಮಾಡಿದ ಸಂಗತಿ
ಶ್ರೀಭರತ್- ಬಾಲಯ್ಯ
ರಾಜೇಶ್ ದುಗ್ಗುಮನೆ
|

Updated on: Jun 03, 2024 | 11:01 AM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ನಟಿ ಅಂಜಲಿ ಅವರನ್ನು ವೇದಿಕೆಯ ಮೇಲೆ ತಳ್ಳಿದ್ದರು. ಇದು ಸಾಕಷ್ಟು ಸುದ್ದಿ ಆಗಿತ್ತು. ಅವರು ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಕೆಲವರು ಹೇಳಿದ್ದರು. ಈ ವೇದಿಕೆ ಮೇಲೆ ಮದ್ಯ ಇದೆ ಎಂದು ಹೇಳಲಾದ ಬಾಟಲಿ ಕಾಣಿಸಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಹೀಗಿರುವಾಗ ಬಾಲಯ್ಯ ಅಳಿಯ ಶ್ರೀಭರತ್ ನೀಡಿದ ಹೇಳಿಕೆ ವೈರಲ್ ಆಗಿದೆ. ಬಿಸಿ ನೀರಿನೊಂದಿಗೆ ನಮ್ಮ ಮಾವ ಎಣ್ಣೆ ಕುಡಿಯುತ್ತಾರೆ ಎಂದಿದ್ದರು ಅವರು.

ವಿವಾದ ಏನು?

ಇತ್ತೀಚೆಗೆ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್​ಗೆ ತೆರಳಿದ್ದರು ಬಾಲಯ್ಯ. ವೇದಿಕೆ ಮೇಲೆ ಅವರು ಅಂಜಲಿ ಅವರನ್ನು ತಳ್ಳಿದ್ದರು. ಇದಕ್ಕೂ ಮೊದಲು ಅವರ ಕಾಲಿನ ಸಮೀಪ ನೀರಿನ ಬಾಟಲಿಯಲ್ಲಿ ಮದ್ಯದ ರೀತಿಯ ದ್ರವ ಇತ್ತು. ಕುಡಿದಿದ್ದರಿಂದಲೇ ಬಾಲಯ್ಯ ಈ ರೀತಿ ಮಾಡಿದ್ದರು ಎಂದು ಕೆಲವರು ಹೇಳಿದರು. ಇದನ್ನು ನಿರ್ದೇಶಕರು ತಳ್ಳಿ ಹಾಕಿದ್ದರು.

ಹಳೆಯ ವಿಡಿಯೋ ವೈರಲ್

ಬಾಲಯ್ಯ ಅವರ ಅಳಿಯ ಶ್ರೀಭರತ್ ನೀಡಿದ ಹೇಳಿಕೆ ಈಗ ವೈರಲ್ ಆಗುತ್ತಿದೆ. ಸ್ಟ್ರೀಟ್ ಬೈಟ್ ಹೆಸರಿನ ಫುಡ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಶ್ರೀಭರತ್ ಮಾತನಾಡಿದ್ದರು. ‘ನನ್ನ ಮಾವ ಕುಡಿಯೋ ಮದ್ಯದ ಹೆಸರು ಹೇಳಿದರೆ ಅದರ ಸ್ಟಾಕ್ ಬೆಲೆ ಏರಿಕೆ ಆಗುತ್ತದೆ’ ಎಂದು ಅವರು ಹೇಳಿದ್ದರು. ಆ ಬಳಿಕ ಅವರು ಬ್ರ್ಯಾಂಡ್ ಯಾವುದುದು ಎಂಬುದನ್ನು ರಿವೀಲ್ ಮಾಡಿದರು.

ಇದನ್ನೂ ಓದಿ: ‘ರೀ ಅದು ಎಣ್ಣೆ ಅಲ್ಲ, ಗ್ರಾಫಿಕ್ಸ್ ಬಾಟಲಿ’; ಬಾಲಯ್ಯ ವಿವಾದ ಮುಚ್ಚಿಹಾಕಲು ನಿರ್ಮಾಪಕ ಕೊಟ್ಟ ಉತ್ತರವಿದು

‘ನನ್ನ ಮಾವ ಮ್ಯಾನ್ಷನ್ ಹೌಸ್ ಬ್ರ್ಯಾಂಡ್​ನ ಕುಡಿಯುತ್ತಾರೆ. ಅವರು ಬಿಸಿ ನೀರಿಗೆ ಮದ್ಯ ಸೇವಿಸಿ ಕುಡಿಯುತ್ತಾರೆ’ ಎಂದಿದ್ದರು ಶ್ರೀಭರತ್. ‘ನನ್ನ ಮಾವ ಯಾವಾಗಲೂ ಒಂದು ಬ್ಯಾಗ್ ಇಟ್ಟುಕೊಳ್ಳುತ್ತಾರೆ. ಅದರಲ್ಲಿ ಬಿಸಿ ನೀರು ಇರುತ್ತದೆ. ಅಮೆರಿಕ್ಕೆ ಹೋಗುವಾಗಲೂ ಅವರು ಈ ಬ್ಯಾಗ್ ತೆಗೆದುಕೊಂಡು ಹೋಗಿದ್ದರು’ ಎಂದಿದ್ದಾರೆ ಶ್ರೀಭರತ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು