ವೇದಿಕೆ ಮೇಲೇ ನಟಿಯನ್ನು ತಳ್ಳಿದ ಬಾಲಯ್ಯ; ಶಾಕಿಂಗ್ ವಿಡಿಯೋ ವೈರಲ್

ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದಾರೆ.

ವೇದಿಕೆ ಮೇಲೇ ನಟಿಯನ್ನು ತಳ್ಳಿದ ಬಾಲಯ್ಯ; ಶಾಕಿಂಗ್ ವಿಡಿಯೋ ವೈರಲ್
ಅಂಜಲಿ
Follow us
|

Updated on: May 30, 2024 | 10:34 AM

ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರಿಗೆ ಮುಂಗೋಪ ಜಾಸ್ತಿ. ಅವರು ಸಹ ನಟರ ಮೇಲೆ, ಫ್ಯಾನ್ಸ್ ಮೇಲೆ ರೇಗಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ಅವರು ನಟಿ ಅಂಜಲಿ ಅವರನ್ನು ತಳ್ಳಿದ ವಿಡಿಯೋ ವೈರಲ್ ಆಗಿದೆ. ಬಾಲಯ್ಯ ಅವರು ಅಂಜಲಿ ನಟನೆಯ ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಚಿತ್ರದಲ್ಲಿ ವಿಶ್ವಕ್ ಸೇನ್ ಹಾಗೂ ನೇಹಾ ಶೆಟ್ಟಿ (Neha Shetty) ಕೂಡ ನಟಿಸಿದ್ದಾರೆ. ಈ ಸಿನಿಮಾದ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು ಬೆಚ್ಚಿ ಬೀಳಿಸಿದೆ.

ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದಾರೆ. ಅಲ್ಲೇ ಇದ್ದ ನೇಹಾ ಶೆಟ್ಟಿ ಈ ಘಟನೆಯಿಂದ ಶಾಕ್ ಆದರು. ಆದರೆ, ಅಂಜಲಿ ಅವರು ಏನನ್ನೂ ತೋರಿಸಿಕೊಳ್ಳದೆ ನಕ್ಕಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಅನೇಕರು ಟೀಕೆ ವ್ಯಕ್ತಪಡಿಸಿದ್ದಾರೆ.

‘ಬಾಲಯ್ಯ ಅವರು ಈ ರೀತಿ ಮಾಡಿದ್ದು ಸರಿ ಅಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಬಾಲಯ್ಯ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಹೊಸದಲ್ಲ’ ಎಂದಿದ್ದಾರೆ. ‘ಹಿರಿಯ ನಟನಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ಲ’ ಎಂದು ಅನೇಕರು ಬಾಲಯ್ಯ ಅವರನ್ನು ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣೆ ಮುಗಿದರಾಗಿಲ್ಲ, ಫಲಿತಾಂಶವೂ ಬರಬೇಕು; ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ 

ಬಾಲಯ್ಯ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅಖಂಡ’, ‘ವೀರಸಿಂಹ ರೆಡ್ಡಿ, ‘ಭಗವಾನ್ ಕೇಸರಿ’ ಮೊದಲಾದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿವೆ. 2023ರಲ್ಲಿ ರಿಲೀಸ್ ಆದ ‘ವೀರಸಿಂಹ ರೆಡ್ಡಿ’ ಅವರ ನಟನೆಯ ಕೊನೆಯ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 132 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಅಖಂಡ 2’ ಚಿತ್ರದಲ್ಲಿ ಬಾಲಯ್ಯ ನಟಿಸಲಿದ್ದಾರೆ. ಇತ್ತೀಚೆಗೆ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಅವರು, ‘ಹೊಸ ಚಿತ್ರದ ಕೆಲಸ ಆರಂಭ ಆಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಕೆಲಸ ಶುರು ಮಾಡುತ್ತೇನೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ